KSRTC: ಮೈಸೂರು ನಗರ ಸಾರಿಗೆ: ಧ್ವನಿ ಸ್ಪಂದನ ಯೋಜನೆ ಪ್ರಮುಖ ಪ್ರಶಸ್ತಿ
ನವದೆಹಲಿ, ನವೆಂಬರ್ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 'ಮೈಸೂರು ನಗರ ಸಾರಿಗೆಯಲ್ಲಿ ಧ್ವನಿ ಸ್ಪಂದನ' ಆನ್ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಎಂಬ ದೇಶದ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿರುವ ಉಪಕ್ರಮವು 'ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ2025' ಪಡೆದುಕೊಂಡಿದೆ.
ಈ ಪ್ರಶಸ್ತಿಯನ್ನು ಎನ್ಐಸಿ ನ್ಯಾಷನಲ್ ಇನ್ಫಾಮೆಟಿಕ್ಸ್ ಸೆಂಟರ್ ಡೆಪ್ಯುಟಿ ಡೈರೆಕ್ಟರ್ ಜನರಲ್ ಪ್ರಶಾಂತ್ ಕುಮಾರ್ ಮಿತ್ತಲ್, ಸ್ವಯಂ ಸಂಸ್ಥೆ ಸಂಸ್ಥಾಪಕರು ಸೈಮು ಜಿಂದಾಲ್, ಮಂಡ್ಯ ವಿಭಾಗ ವಿಭಾಗಿಯ ನಿಯಂತ್ರಣಧಿಕಾರಿ ಶರಣ್ ಬಸವರಾಜ ಕೆ.ಎಂ. ಮಂಡ್ಯ ವಿಭಾಗ ಹಾಗೂ ಕೆಎಸ್ಆರ್ಟಿಸಿ ಉಪ ಮುಖ್ಯ ಗಣಕ ವ್ಯವಸ್ಥಾಪಕರು ಸುಧಾರಾಣಿ.ಆರ್ ಉಪ ಮುಖ್ಯ ಗಣಕ ವ್ಯವಸ್ಥಾಪಕರು ಅವರು ನವದೆಹಲಿಯಲ್ಲಿ ಗುರುವಾರ ಪ್ರಶಸ್ತಿ ಸ್ವೀಕರಿಸಿದರು.

ಸ್ವಯಂ ಸಂಸ್ಥೆಯು ಪ್ರಶಸ್ತಿಯನ್ನು ಸ್ಥಾಪಿಸಿದೆ. ಅಂತರರಹಿತ ವಿನ್ಯಾಸ ಮತ್ತು ಒಳಗೊಳ್ಳುವಿಕೆಯ ಕ್ಷೇತ್ರದಲ್ಲಿ ಮಾದರಿಗಳನ್ನು ನಿರ್ಮಿಸಿರುವ ಸಂಸ್ಥೆಗಳನ್ನು ಗೌರವಿಸುವ ಉದ್ದೇಶ ಹೊಂದಿದೆ. 2025ನೇ ಆವೃತ್ತಿ ಸ್ವಯಂ ಸಂಸ್ಥೆಯ 25ನೇ ವಾರ್ಷಿಕೋತ್ಸವವಾಗಿದೆ. ಜಾಗತಿಕ ಮಟ್ಟದಲ್ಲಿ ಕ್ಷೇತ್ರದಲ್ಲಿ 25 ವರ್ಷಗಳ ಸೇವೆಯನ್ನು ಆಚರಿಸುತ್ತಿದೆ.
ಧ್ವನಿ ಸ್ಪಂದನ - ಆನ್ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್, ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ದೆಹಲಿಯ ರೈಸ್್ಡ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿದ ತಂತ್ರಜ್ಞಾನವಾಗಿದೆ. ಮೈಸೂರು ನಗರ ಬಸ್ಸುಗಳಲ್ಲಿ ದೃಷ್ಟಿ ಸಮಸ್ಯೆಯುಳ್ಳ ಪ್ರಯಾಣಿಕರ ಸ್ವತಂತ್ರ ಚಲನವಲನವನ್ನು ಸುಗಮಗೊಳಿಸಲು ಜಾರಿಗೆ ತರಲಾಗಿದೆ.
ಯಶಸ್ವಿ ಯೋಜನೆಗೆ ಪ್ರಶಸ್ತಿ
ಈ ವ್ಯವಸ್ಥೆಯು ಬಳಕೆದಾರರಿಗೆ ಬರುತ್ತಿರುವ ಬಸ್ಗಳನ್ನು ಗುರುತಿಸಲು ಹಾಗೂ ಧ್ವನಿ ಆಧಾರಿತ ಸೂಚನೆಗಳ ಮೂಲಕ ಬಸ್ ಪ್ರವೇಶದ ಸ್ಥಳವನ್ನು ಸುರಕ್ಷಿತವಾಗಿ ಕಂಡುಹಿಡಿಯಲು ಸಹಾಯ ಮಾಡುತ್ತದೆ. ಈಗಾಗಲೇ 200 ಕ್ಕೂ ಹೆಚ್ಚು ನಗರ ಬಸ್ಸುಗಳಲ್ಲಿ ಈ ವ್ಯವಸ್ಥೆ ಅಳವಡಿಸಲಾಗಿದೆ. 400 ಕ್ಕೂ ಹೆಚ್ಚು ದೃಷ್ಟಿ ವಿಕಲ ಬಳಕೆದಾರರಿಗೆ ಇದರ ಬಳಕೆಯ ಕುರಿತು ತರಬೇತಿ ನೀಡಲಾಗಿದೆ. ಈ ಯೋಜನೆಯಿಂದ ದೃಷ್ಟಿ ವಿಕಲ ಪ್ರಯಾಣಿಕರ ಪ್ರಯಾಣ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದ್ದು, ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸ್ವಾತಂತ್ರ್ಯದಲ್ಲಿ ದೊಡ್ಡ ಮಟ್ಟದ ಪ್ರಗತಿ ಕಂಡುಬಂದಿದೆ.
ಈ ಯೋಜನೆಯ ಯಶಸ್ಸಿಗೆ ಜರ್ಮನಿಯ ಡಾಯಿಚೆ ಗೆಸೆಲ್ಶಾಫ್ಟ್ ಫ್ಯೂರ್ ಇಂಟರ್ನ್ಯಾಷನಾಲೆ ಜುಸಮ್ಮೆನಾರ್ಬೈಟ್ (GIZ) GmbH ಸಂಸ್ಥೆಯು ತಾಂತ್ರಿಕ ಸಹಯೋಗ ನೀಡಿದೆ. ಈ ಸಹಯೋಗವು SUM-ACA ಯೋಜನೆಯ ಅಡಿಯಲ್ಲಿ, ಎಲ್ಲರಿಗೂ ಸಮಾನ ಅವಕಾಶದ ನಗರ ಸಾರಿಗೆಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ ಎಂದು KSRTC ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications