ಕೆಎಸ್ಆರ್ಟಿಸಿಗೆ ಸಿಬ್ಬಂದಿ ಗೈರುಹಾಜರಿಯೇ ದೊಡ್ಡ ಸಮಸ್ಯೆ!
ಬೆಂಗಳೂರು, ಮೇ 02: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (ಕೆಎಸ್ಆರ್ಟಿಸಿ) ಸಿಬ್ಬಂದಿ ಗೈರುಹಾಜರಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಒಂದು ವರ್ಗದ ನೌಕರರು ಪೂರ್ವ ಮಾಹಿತಿ ಇಲ್ಲದೆ ಬಂಕ್ (ಗೈರು) ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ.
ಕೋವಿಡ್ ಲಾಕ್ಡೌನ್ ನಂತರ ಪ್ರಾಥಮಿಕ ಹಂತದಿಂದ ಬಸ್ಗಳನ್ನು ಓಡಿಸುವಲ್ಲಿ ಕೆಎಸ್ಆರ್ಟಿಸಿ ತೊಡಗಿಸಿಕೊಂಡಿರುವುದರಿಂದ, ಸಿಬ್ಬಂದಿ ಹಠಾತ್ ಗೈರಾಗುವುದು ತನ್ನ ದೈನಂದಿನ ವ್ಯವಹಾರ ಮತ್ತು ಆದಾಯಕ್ಕೆ ಅಪಾಯವನ್ನುಂಟು ಮಾಡುತ್ತದೆ.
ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆಯಲ್ಲಿ 35,000 ಉದ್ಯೋಗಿಗಳನ್ನು ಹೊಂದಿರುವ ದೇಶದ ಅತಿದೊಡ್ಡ ಸಾರಿಗೆ ನೌಕರರ ಸಂಸ್ಥೆಗಳಲ್ಲಿ ಒಂದಾಗಿದೆ. 35,000 ಮಂದಿಯಲ್ಲಿ 8.414 ಮಂದಿ ಶಿಸ್ತಿನ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಸುಮಾರು 7,200 ಶಿಸ್ತಿನ ಪ್ರಕರಣಗಳನ್ನು ಕೊನೆಗೊಳಿಸಲಾಗಿದ್ದು, ಕನಿಷ್ಠ 100, 200 ಮತ್ತು ಗರಿಷ್ಠ 500 ರೂ. ದಂಡ ವಿಧಿಸಲಾಗಿದ್ದು, ಈ ಪ್ರಕರಣಗಳಿಗೆ ಕನಿಷ್ಠವೆಂದರೂ 25,000 ರೂ. ದಂಡ ವಿಧಿಸಬಹುದಾಗಿದೆ.

ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ವಿ. ಅನ್ಬುಕುಮಾರ್, "10 ತಿಂಗಳಿಗಿಂತ ಕಡಿಮೆ ಅವಧಿಗೆ ಕರ್ತವ್ಯಕ್ಕೆ ಗೈರುಹಾಜರಾದ ನೌಕರರಿಗೆ ಯಾವುದೇ ಶಿಸ್ತು ಕ್ರಮದಿಂದ ವಿನಾಯಿತಿ ನೀಡಿ ವರದಿ ಆದೇಶ ಹೊರಡಿಸಿ ಬಸ್ ಓಡಿಸಲು ಅವಕಾಶ ಕಲ್ಪಿಸಲಾಗಿದೆ," ಎಂದು ಹೇಳಿದರು.
"ಅದರಂತೆ ಕಳೆದ ಮೂರು ದಿನಗಳಿಂದ 110 ಗೈರು ಹಾಜರಾದ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಾರಿಗೆ ಸಂಸ್ಥೆಗೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ 7,200 ಶಿಸ್ತಿನ ಮೊಕದ್ದಮೆಗಳನ್ನು ಏಕಕಾಲದಲ್ಲಿ ಪರಿಹಾರ ಮತ್ತು ಸದ್ಭಾವನೆಯಿಂದ ಮನ್ನಾ ಮಾಡಲಾಗಿದೆ, ನೌಕರರನ್ನು ಶಿಕ್ಷಿಸುವುದು ಮಾತ್ರವಲ್ಲದೆ ಅವರ ಕಲ್ಯಾಣಕ್ಕಾಗಿ ಪ್ರೋತ್ಸಾಹ, ಪ್ರೇರಣೆ ಮತ್ತು ಕೆಲಸ ಮಾಡುವುದು ನಮ್ಮ ಕರ್ತವ್ಯ," ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಹೇಳಿದರು.
Recommended Video

"ಕಳ್ಳತನ/ಅಪಘಾತ/ಗೈರುಹಾಜರಿ ಪ್ರಕರಣಗಳಲ್ಲಿ ಭಾಗಿಯಾಗದಂತೆ ನೌಕರರಿಗೆ ಇದು ಕೇವಲ ಒಂದು ಬಾರಿ ಸಡಿಲಿಕೆಯಾಗಿದೆ," ಎಂದು ವಿ. ಅನ್ಬುಕುಮಾರ್ ಒತ್ತಿ ಹೇಳಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್












Click it and Unblock the Notifications