Get Updates
Get notified of breaking news, exclusive insights, and must-see stories!

KSRTC ಮುಷ್ಕರ: ಗುರುವಾರ ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ

ಬೆಂಗಳೂರು, ಫೆಬ್ರವರಿ.19: ಸಾರಿಗೆ ನೌಕರರನ್ನೂ ಕೂಡಾ ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಆಗ್ರಹಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಕರೆ ನೀಡಿರುವ ಮುಷ್ಕರಕ್ಕೆ ಪೊಲೀಸರ ಅನುಮತಿ ಸಿಕ್ಕಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಗುರುವಾರ ರಾಜ್ಯಾದ್ಯಂತ ಕೆಎಸ್ಆರ್ ಟಿವಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು, ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಸ್ ಸಂಚಾರವು ಸಹಜ ಸ್ಥಿತಿಯಲ್ಲಿ ಇರುತ್ತದೆ ಎಂದು ಕೆಎಸ್ಆರ್ ಟಿಸಿ ನೌಕರರ ಸಂಘವು ತಿಳಿಸಿದೆ.

ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ನೇತೃತ್ವದಲ್ಲಿ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿಯ 20 ಸಾವಿರಕ್ಕೂ ಅಧಿಕ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಇದಕ್ಕೆ ಪೊಲೀಸರೂ ಸಹ ಅನುಮತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

KSRTC Strike: No Variation In Bus Trafficking

ಈಶಾನ್ಯ ಮತ್ತು ವಾಯುವ್ಯ ಸಾರಿಗೆ ಸಂಸ್ಥೆಗಳ ಬೆಂಬಲ:

ಇನ್ನು, ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ವಾಯುವ್ಯ ಕರ್ನಾಟಕರ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬೆಂಬಲವನ್ನು ಸೂಚಿಸಿದ್ದಾರೆ. ಸರ್ಕಾರಿ ನೌಕರರು ಹಾಗೂ ನಿಗಮ ಮಂಡಳಿ ನೌಕರರ ವೇತನದಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಜೊತೆಗೆ ಸರ್ಕಾರಿ ನೌಕರರಿಗೆ ಸಿಗುತ್ತಿರುವ ಸವಲತ್ತುಗಳನ್ನು ಈ ನಿಗಮ ಮಂಡಳಿ ನೌಕರರಿಗೆ ನೀಡುತ್ತಿಲ್ಲ. ನಿಗಮ ಮಂಡಳಿಗಳು ಆರ್ಥಿಕ ತೊಂದರೆಯಲ್ಲಿದ್ದು, ಈ ಸೌಲಭ್ಯವನ್ನು ನಿಗಮ ಮಂಡಳಿ ನೌಕರರಿಗೂ ಸಿಗುವಂತೆ ಆಗಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+