ದೀಪಾವಳಿː ಹೆಚ್ಚುವರಿ ಬಸ್ ಬಿಡಲಿರುವ ಕೆಎಸ್ ಆರ್ ಟಿಸಿ
ಬೆಂಗಳೂರು, ಅ.19: ದಸರಾ ಸಂದರ್ಭ ಊರಿಗೆ ತೆರಳಲು ಬಸ್ ಸಿಗದೇ ಪರದಾಡಿದ್ದೀರಾ? ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡು ಬಸ್ ತಪ್ಪಿಸಿಕೊಂಡಿದ್ದೀರಾ? ಈ ಬಾರಿ ಈ ಎಲ್ಲ ಚಿಂತೆ ಬಿಡಿ. ಮುಂಗಡ ಟಿಕೆಟ್ ಕಾಯ್ದಿರಿಸಿ ಊರಿಗೆ ಹಾಯಾಗಿ ತೆರಳಿ.
ಹೌದು... ಈ ಬಾರಿ ಕೆಎಸ್ಆರ್ ಟಿಸಿ ಜನರಿಗೆ ಸಮಸ್ಯೆಯಾಗಬಾರದೆಂದು ದೀಪಾವಳಿಗೆ ಹೆಚ್ಚುವರಿ ಬಸ್ ಸೇವೆ ನೀಡಲಿದೆ. ಅಕ್ಟೋಬರ್ 21ರಿಂದ 24ರವರೆಗೆ ಬಸ್ಗಳು ಸಂಚರಿಸಲಿವೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.[ಪ್ರಯಾಣ ದರ ಕಡಿತವಿಲ್ಲ, ಸಚಿವರ ಸ್ಪಷ್ಟನೆ]

ದಸರಾದಂತೆ ಈ ಬಾರಿ ದೀಪಾವಳಿಗೂ ಸರಣಿ ರಜೆ ಬಂದಿದೆ. ಹಾಗಾಗಿ ಪ್ರಯಾಣಿಕರ ಒತ್ತಡ ಹೆಚ್ಚಾಗಲಿದೆ. 22ಕ್ಕೆ ನರಕ ಚತುರ್ದಶಿ, 24ರಂದು ಬಲಿಪಾಡ್ಯಮಿಯಿದ್ದು, 26 ಭಾನುವಾರವಾಗಿದೆ. ಇದರೊಂದಿಗೆ 23 ಮತ್ತು 25ರಂದು ರಜೆ ಪಡೆದರೆ ಒಟ್ಟು ಐದು ದಿನವಾಗಲಿದ್ದು ಬೆಂಗಳೂರಿನಲ್ಲಿ ನೆಲೆಸಿರುವ ರಾಜ್ಯದ ವಿವಿಧ ಮೂಲೆಯ ಜನ ಊರಿಗೆ ತೆರಳಿದ್ದಾರೆ ಎಂದು ಕೆಎಸ್ ಆರ್ ಟಿಸಿ ತಿಳಿಸಿದೆ.
ಮಹಾನಗರದ ವಿವಿಧ ಪಿಕ್ ಅಪ್ ಪಾಯಿಂಟ್ ಗಳಿಂದಲೇ ಮುಂಗಡ ಬುಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಬಸ್ಗಳು ಮೈಸೂರು ರಸ್ತೆ ಬಸ್ ನಿಲ್ದಾಣ, ಆರ್ ಪಿಸಿ ಲೇಔಟ್ ಬಸ್ ನಿಲ್ದಾಣ, ವಿಜಯನಗರ ಟಿಟಿಎಂಸಿ, ಯಶವಂತಪುರ ಟಿಟಿಎಂಸಿ, ಗಂಗಾನಗರ, ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಜಯನಗರ 4ನೇ ಬ್ಲಾಕ್, ಬನಶಂಕರಿ ಟಿಟಿಎಂಸಿ ಮುಂತಾದ ಸ್ಥಳಗಳಿಂದ ಸಂಚರಿಸಲಿವೆ. ದೀಪಾವಳಿ ಹಿಂದಿನ ದಿನವೇ(ಅಕ್ಟೋಬರ್ 21) ಹೆಚ್ಚುವರಿ ಬಸ್ ಸೇವೆ ಆರಂಭವಾಗಲಿದೆ.
ಪೀಣ್ಯಕ್ಕೆ ತೆರಳುವವರಿಗೆ ವಿನಾಯಿತಿ ಇಲ್ಲ
ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಕೊಲ್ಲಾಪುರ, ಹೊಸಪೇಟೆ, ಗಂಗಾವತಿ, ಕೊಪ್ಪಳ, ಬಾಗಲಕೋಟೆ, ಗುಲ್ಬರ್ಗ, ರಾಯಚೂರು, ಬೀದರ್ ಮೊದಲಾದ ಉತ್ತರ ಕರ್ನಾಟಕದ ಭಾಗಗಳಿಗೆ ತೆರಳುವವರು ಪೀಣ್ಯಕ್ಕೆ ತೆರಳುವುದು ಕಡ್ಡಾಯ. ಆದರೆ ಶಿವಮೊಗ್ಗ ಮಾರ್ಗದಿಂದ ಮುಂಗಡ ಕಾಯ್ದಿರಿಸದ ಪ್ರಯಾಣಿಕರಿಗೆ ಕೆಂಪೇಗೌಡ ಬಸ್ ನಿಲ್ದಾಣದ ಬಿಎಂಟಿಸಿ ಸರ್ವೀಸ್ ರಸ್ತೆ ಮೂಲಕ ಬಸ್ ಸೇವೆ ಒದಗಿಸಲಾಗಿದೆ.[ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ ಹೇಗಿದೆ ಗೊತ್ತೆ?]
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications