ಹಲಸೂರು ಕೆರೆಯಲ್ಲಿ ಶೀಘ್ರ ಬೋಟಿಂಗ್ ಸೌಲಭ್ಯ
ಬೆಂಗಳೂರು, ಅಕ್ಟೋಬರ್, 19: ಹಲಸೂರು ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ ಹೆಜ್ಜೆ ಇಟ್ಟಿದೆ. ಕೆರೆಯಲ್ಲಿ ಶೀಘ್ರವೇ ಬೋಟಿಂಗ್ ಸೌಲಭ್ಯ ಆರಂಭಿಸಲು ಮುಂದಾಗಿದೆ.
ಕೆರೆ ಅಭಿವೃದ್ಧಿಗಾಗಿ ಬಿಬಿಎಂಪಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಕೆರೆಯಲ್ಲಿ ದೋಣಿ ವಿಹಾರ ಏರ್ಪಡಿಸಿಲು ನಿರ್ಧರಿಸಿದೆ. ಮತ್ತು ಇದರ ಹೊಣೆಗಾರಿಕೆಯನ್ನು ಕೆಎಸ್ ಟಿಡಿಸಿಗೆ ವಹಿಸಿದೆ.

ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ಎಂಟು ದೋಣಿಗಳನ್ನು ಖರೀದಿಸಲು ನಿರ್ಧರಿಸಿದ್ದಾರೆ. ದೋಣಿಗಳು ಬಂದ ನಂತರ ಪರಿಶೀಲಿಸಿ, ಪ್ರಾಯೋಗಿಕ ಸಂಚಾರ ನಡೆಸಿ 3-4 ತಿಂಗಳು ಬಳಿಕ ದೋಣಿ ವಿಹಾರ ಆರಂಭಿಸಲಾಗುವುದು ಎಂದು ಇಲಾಖೆ ತಿಳಿಸಿದೆ.[ಹಲಸೂರು ಕೆರೆ ಸಂರಕ್ಷಣೆ ಹೊಣೆ ಯಾರದ್ದು?]
5ಲಕ್ಷ ರೂ. ವಾರ್ಷಿಕ ಗುತ್ತಿಗೆ:
ದೋಣಿ ವಿಹಾರಕ್ಕೆ ಅನುಮತಿ ಕೋರಿ ಕೆಎಸ್ ಟಿಡಿಸಿ ಸಲ್ಲಿಸಿದ್ದ ಮನವಿಯನ್ನು ಬಿಬಿಎಂಪಿ ಪುರಸ್ಕರಿಸಿದ್ದು, ವಾರ್ಷಿಕವಾಗಿ 5 ಲಕ್ಷ ರೂ. ಮೊತ್ತಕ್ಕೆ ಗುತ್ತಿಗೆ ನಿಗದಿಪಡಿಸಿದೆ.
ಕೆಎಸ್ ಟಿಡಿಸಿಯೂ ಈ ಹಿಂದೆಯೂ ಸಹ ಹಲಸೂರು ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಿತ್ತು. ಇದಕ್ಕಾಗಿ ಇಲಾಖೆಗೆ ವಾರ್ಷಿಕವಾಗಿ 2ಲಕ್ಷ ರೂ. ಗುತ್ತಿಗೆ ಕಟ್ಟುತ್ತಿತ್ತು. ಗುತ್ತಿಗೆ ಅವಧಿ ಮುಗಿದಿದ್ದರಿಂದ ಬೋಟಿಂಗ್ ಸೌಲಭ್ಯ ಸ್ಥಗಿತಗೊಳಿಸಿತ್ತು.
ಬೋಟ್ ಖರೀದಿಗೆ ಟೆಂಡರ್ ಆಹ್ವಾನ:
ಬೋಟ್ ಖರೀದಿಸಲು ಪ್ರವಾಸೋದ್ಯಮ ಇಲಾಖೆ ಟೆಂಡರ್ ಆಹ್ವಾನಿಸಿದ್ದು, ನಾಲ್ಕು ಜನರು ಪ್ರಯಾಣಿಸಬಹುದಾದ ಆರು ಹಾಗು ಇಬ್ಬರು ಪ್ರಯಾಣಿಸಬಹುದಾದ 2 ಪೆಡಲ್ ಬೋಟ್ ಗಳನ್ನು ಸರಬರಾಜು ಮಾಡುವಂತೆ ಸಂಸ್ಥೆಗಳಲ್ಲಿ ತಿಳಿಸಿದೆ.
ಟೆಂಡರ್ ಪಡೆದಿರುವ ಸಂಸ್ಥೆ ಎರಡು ತಿಂಗಳ ಅವಧಿಯೊಳಗೆ ಬೋಟ್ ಗಳನ್ನು ಪೂರೈಸಬೇಕು ಎಂದು ಇಲಾಖೆ ತಿಳಿಸಿದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್











Click it and Unblock the Notifications