ಏರ್ ಪೋರ್ಟ್ ಟ್ಯಾಕ್ಸಿ ಆನ್ ಲೈನ್ ನೋಂದಣಿ ಮಾಡದಿದ್ದರೆ ಸೇವೆ ರದ್ದು
ಬೆಂಗಳೂರು, ಜನವರಿ 04 : ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ ಸೇರಿರುವ ವಿಮಾನ ನಿಲ್ದಾಣಕ್ಕೆ ಸಾರಿಗೆ ಸೇವೆ ನೀಡುವ ಟ್ಯಾಕ್ಸಿ ಗಳು ಜ.7ರೊಳಗೆ ಆನ್ ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಸಿದ್ದರೆ ಸೇವೆಯನ್ನು ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಈ ಟ್ಯಾಕ್ಸಿ ಎಲ್ಲ ಬಗೆಯ ಮಾಹಿತಿ ಆನ್ ಲೈನ್ ನಲ್ಲಿ ಲಭ್ಯವಾಗುವಂತೆ ಮಾಡಲು ನೋಂದಣಿ ಮಾಡಿಕೊಳ್ಳಬೇಕೆಂದು ಇದುವರೆಗೆ ಆರು ಬಾರಿ ಸೂಚನೆ ನೀಡಲಾಗಿದೆ. ಸೇವೆ ನೀಡುತತ್ಇರುವ 400 ಟ್ಯಾಕ್ಸಿಗಳ ಪೈಕಿ 134 ಎಸಿ ಹಾಗೂ 17 ಎಸಿ ರಹಿತ ಟ್ಯಾಕ್ಸಿಗಳು ಮಾತ್ರ ಆನ್ ಲೈನ್ ನಲ್ಲಿ ನೋಂದಣಿ ಮಾಡಿಕೊಂಡಿದೆ.

ಜನವರಿ 7 ರೊಳಗೆ ಎಲ್ಲ ಟ್ಯಾಕ್ಸಿಗಳು ನೋಂದಣಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸೇವೆ ರದ್ದು ಗೊಳಿಸಲಾಗುವುದು ಎಂದು ನೋಟಿಸ್ ನಲ್ಲಿ ತಿಳಿಸಿದೆ. ಲೈಸನ್ಸ್, ವಿಮೆ ನವೀಕರಣಗೊಳಸದಿರುವುದು, ಟ್ಯಾಕ್ಸಿಯನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದು ಸೇರಿದಂತೆ ಅನೇಕ ಟ್ಯಾಕ್ಸಿಗಳು ನಿಯಮಗಳನ್ನು ಉಲ್ಲಂಘನೆ ಮಾಡುತ್ತಿವೆ.
ಇದಕ್ಕೆ ಕಡಿವಾಣ ಹಾಕಲು ಆನ್ ಲೈನ್ ನೋಂದಣಿ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಆರು ಬಾರಿ ಸೂಚನೆ ನೀಡಿದ್ದರೂ ಚಾಲಕರು ಪ್ರತಿಕ್ರಿಯಿಸಿಲ್ಲ. ಹೀಗಾಗಿ ಕೊನೆ ಅವಕಾಶ ನೀಡಿ ಸೂಚನೆ ಹೊರಡಿಸಲಾಗಿದೆ.
ಸೇವೆ ರದ್ದು: ಕೆಎಸ್ಟಿಡಿಸಿ ಹಾಗೂ ಬಿಐಎಎಲ್ ಮಾಡಿಕೊಂಡ ಒಪ್ಪಂದದ ಪ್ರಕಾರ, ಟ್ಯಾಕ್ಸಿಗಳು 4 ವರ್ಷ ಮಾತ್ರ ಸೇವೆ ನೀಡಬೇಕು. ಈ ಹಿಂದೆ ಕೆಲ ಚಾಲಕರು ಲೋಕಾಯುಕ್ತದ ಮೊರೆ ಹೋದಾಗ ಅವರ ಪರವಾನಗಿಯನ್ನು4 ವರ್ಷದಿಂದ 7ವರ್ಷಕ್ಕೆ ವಿಸ್ತರಣೆ ಮಾಡಲಾಗಿತ್ತು.
ಆನ್ ಲೈನ್ ನಲ್ಲಿ ಟ್ಯಾಕ್ಸಿಗಳ ಲೈಸೆನ್ಸ್, ಫಿಟ್ ನೆಸ್ ಸರ್ಟಿಫಿಕೇಟ್, ವಿಮೆ , ಮಾಲಿನ್ಯ ಪ್ರಮಾಣ ಸೇರಿದಂತೆ ಎಲ್ಲ ಮಾಹಿತಿಗಳನ್ನು ಅಪ್ ಲೋಡ್ ಮಾಡಲಾಗುತ್ತದ. ಇದರಲ್ಲಿ ಯಾವುದಾದರೂ ದಾಖಲೆ ನವೀಕರಣಗೊಳ್ಳುವ ಸಮಯ ಬಂದರೆ ಸ್ವಯಂಚಾಲಿತವಾಗಿ ಚಾಲಕರ ಮೊಬೈಲೆ ಗೆ ಸಂದೇಶ ಬರುತ್ತದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications