ಹೈಕಮಾಂಡ್ ಗೆ ಕಪ್ಪ ವಿವಾದ: ಕುಮಾರಸ್ವಾಮಿ ಹೇಳಿದ್ದೇನು?
ಯಡಿಯೂರಪ್ಪ- ಅನಂತ ಕುಮಾರ್ ಸಂಭಾಷಣೆಯಿರುವ ಸಿಡಿ ಬಿಡುಗಡೆ ಮಾಡಿದ ಕಾಂಗ್ರೆಸ್; ಸಿಡಿ ಬಿಡುಗಡೆ ನಂತರ ಪ್ರತಿಕ್ರಿಯಿಸಿರುವ ಕುಮಾರ ಸ್ವಾಮಿ.
ಬೆಂಗಳೂರು, ಫೆಬ್ರವರಿ 13: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ, ತಮ್ಮ ಹೈಕಮಾಂಡ್ ಗಳಿಗೆ ಕಪ್ಪ ಕಾಣಿಕೆ ಸಲ್ಲಿಸಿವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ರು. ಹಣ ನೀಡಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಇತ್ತೀಚೆಗೆ ಸಿಡಿಸಿದ್ದ ಬಾಂಬ್ ಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಪಕ್ಷ ಸೋಮವಾರ ಮಧ್ಯಾಹ್ನ ಸಿಡಿಯೊಂದನ್ನು ಬಿಡುಗಡೆ ಮಾಡಿದೆ.[ಅರ್ಕಾವತಿ ಹಗರಣ : ಎಚ್ಡಿಕೆಯಿಂದ 490 ಪುಟದ ಪುಸ್ತಕ ಬಿಡುಗಡೆ]

ಇದರಲ್ಲಿ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಇಬ್ಬರೂ ಕಾಂಗ್ರೆಸ್ ಪಕ್ಷವನ್ನು ಹಣಿಯಲು ನಿರ್ಧರಿಸಿದ್ದು, ಚುನಾವಣೆಯ ಹೊಸ್ತಿಲಲ್ಲಿರುವಾಗ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕಪ್ಪ ವಿಚಾರವನ್ನು ಪ್ರಸ್ತಾಪಿಸಬೇಕೆಂದು ಮಾತನಾಡಿಕೊಂಡಿದ್ದಾರೆನ್ನಲಾಗಿದೆ.
ಈ ವೇಳೆಯ ಮಾತುಕತೆಯಲ್ಲಿ ಯಡಿಯೂರಪ್ಪ ಅವರು, ''ಹೈಕಮಾಂಡ್ ಗೆ ನಾವೂ ನೀಡಿದ್ದೇವೆ (ಹಣ). ಆದರೆ, ಸಾವಿರವಲ್ಲ (ಸಾವಿರ ಕೋಟಿಯಷ್ಟಲ್ಲ)'' ಎಂಬ ಮಾತುಗಳನ್ನಾಡಿರುವುದಾಗಿ ಹೇಳಲಾಗಿದೆ.
ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿಯೂ ಆದ ಕುಮಾರ ಸ್ವಾಮಿ, ''ಅನಂತ ಕುಮಾರ್ ಹಾಗೂ ಯಡಿಯೂರಪ್ಪ ಅವರ ನಡುವಿನ ಸಂಭಾಷಣೆಯಿಂದ ಹಾಗೂ ಯಡಿಯೂರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಗಳಿಂದ ಎರಡೂ ಪಕ್ಷಗಳು ತಮ್ಮ ಅಧಿಕಾರಾವಧಿಯಲ್ಲಿ ತಮ್ಮ ತಮ್ಮ ಪಕ್ಷಗಳ ಹೈಕಮಾಂಡ್ ಗೆ ಹಣ ಸಂದಾಯ ಮಾಡಿರುವುದು ತಿಳಿಯುತ್ತದೆ'' ಎಂದರು.
ಆನಂತರ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ''ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಆರ್ಥಿಕ ಅವ್ಯವಹಾರಗಳನ್ನು ನಡೆಸಿದ್ದಾರೆ. ಅರ್ಕಾವತಿ ಬಡಾವಣೆ ವಿಚಾರದಲ್ಲಿ ಅವರಿಗೆ 350 ಕೋಟಿ ರು. ಸಂದಾಯವಾಗಿದೆ'' ಎಂದು ತಿಳಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications