ಮಹೇಂದ್ರ ಕುಮಾರ್ ನಿಧನಕ್ಕೆ ಮಾಜಿ ಸಿಎಂ ಎಚ್ಡಿಕೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ
ಬೆಂಗಳೂರು, ಏ. 25: ಭಜರಂಗ ದಳದ ಮಾಜಿ ಸಂಚಾಲಕ, ಪ್ರಗತಿಪರ ಚಿಂತಕ ನಾಯಕ ಮಹೇಂದ್ರ ಕುಮಾರ್ ನಿಧನಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದದಾರೆ.
Recommended Video
ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಬ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ. ಹಿಂದೂಪರ ಸಂಘಟನೆಗಳ ಮೂಲಕ ಗುರುತಿಸಿಕೊಂಡಿದ್ದ ಮಹೇಂದ್ರಕುಮಾರ್ ಇದ್ದಕ್ಕಿದ್ದಂತೆ ಬದಲಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ನನ್ನೊಂದಿಗೆ ಮುಕ್ತವಾಗಿ ಸಮಾಜದ ತಲ್ಲಣಗಳ ಬಗ್ಗೆ ಚರ್ಚಿಸುತ್ತಿದ್ದರು. ಆನಂತರ ಪಕ್ಷ ರಾಜಕೀಯದಿಂದ ದೂರ ಸರಿದ ಅವರು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪ್ರಗತಿಪರ ಚಿಂತಕ ಗುಣವನ್ನು ಬಿಡಲೇ ಇಲ್ಲ. ಆದರೆ ಸಿದ್ಧಾಂತಗಳು ಬದಲಾಗಿದ್ದನ್ನು ನಾನು ಹತ್ತಿರದಿಂದ ಕಂಡಿದ್ದೆ. ಅಕಾಲಿಕ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ: ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ. ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಹಯುವ ನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ದುಃಖಪಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪದಲ್ಲಿ ತಿಳಿಸಿದ್ದಾರೆ.

ಆರಂಭದಲ್ಲಿ ಭಜರಂಗ ದಳದಲ್ಲಿ ಸಕ್ರೀಯರಾಗಿದ್ದ ಮಹೇಂದ್ರ ಕುಮಾರ್ ಅವರು ನಂತರ ಭಜರಂಗದಳಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷ ಸೇರಿದ್ದರು. ನಂತರದ ದಿನಗಳಲ್ಲಿ ಸಂಘ ಪರಿವಾರ ಕಟು ಟೀಕಾಕಾರರಾಗಿ ಸಾಮಾಜಿಕ, ಜಾಗೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. 'ನಮ್ಮ ಧ್ವನಿ' ಎಂಬ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿದ್ದ ಮಹೇಂದ್ರ ಕುಮಾರ್, ಸಮಾಜದ ಪರ ದನಿಯಾಗಿದ್ದರು. ಕೇಂದ್ರ ಸರ್ಕಾರರ ಸಿಎಎ ಕಾಯ್ದೆ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು.
-
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications