ಬಿಎಸ್ವೈ ವಿಶ್ವಾಸಮತ ಯಾಚನೆ ಹಿನ್ನೆಲೆ ಕುಮಾರಸ್ವಾಮಿ ಮಹತ್ವದ ಸಭೆ
Recommended Video
ಬೆಂಗಳೂರು, ಜುಲೈ 29: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸಮತ ಯಾಚನೆ ಮಾಡಲಿರುವ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ಜೆಡಿಎಸ್ ಮಹತ್ವದ ಸಭೆ ಕರೆದಿದೆ.
ಶಾಸಕರ ಮಹತ್ವ ಸಭೆ ಕರೆದ ಮಾಜಿ ಸಿಎಂ ಕುಮಾರಸ್ವಾಮಿ, ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ದಳಪತಿಗಳ ಸಭೆ ಬಿಜೆಪಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಕುರಿತು ಚರ್ಚೆ ನಡೆಯಲಿದೆ. ಇಂದಿನಿಂದ ಸದನದಲ್ಲಿ ತಾನು ಏನು ಮಾಡಬೇಕು, ವಿರೋಧ ಪಕ್ಷವಾದ ಕಾಂಗ್ರೆಸ್ ಜೊತೆಯಲ್ಲಿ ಇದ್ದು ಬಿಜೆಪಿ ವಿರುದ್ಧ ಹೋರಾಟ ಮಾಡಬೇಕಾ ಎನ್ನುವ ಕುರಿತು ಚರ್ಚೆ ನಡೆಯಲಿದೆ.
ಬಿಜೆಪಿಯ ಕೆಲ ನಿರ್ಧಾರಗಳ ಖಂಡಿಸಿ ಜನಪರ ನಿಲ್ಲುವ ಕುರಿತು ಚರ್ಚೆ ನಡೆಯಲಿದೆ. ಬಿಜೆಪಿಯ ಫೈನಾನ್ಸ್ ಬಿಲ್ ಪಾಸ್ ಗೆ ವಿರೋಧ ಮಾಡದೆ ಇರೋ ಬಗ್ಗೆಯೂ ಕೂಡ ಚರ್ಚೆ ನಡೆಯಲಿದೆ. ಅಲ್ಲದೆ ಇಂದಿನಿಂದ ಆರಂಭವಾಗುವ ಸದನದಲ್ಲಿ ತಾವು ಏನೂ ಮಾಡಬೇಕು ಎಂಬುದರ ಬಗ್ಗೆ ಶಾಸಕರಿಗೆ ತಿಳಿಸಲಿದ್ದಾರೆ. ಜೆಡಿಎಸ್ ಮೂವರು ಶಾಸಕರ ಅರ್ಹತೆ ಮಾಡಿರುವ ಬಗ್ಗೆ ಚರ್ಚೆ ನಡೆಯಲಿದೆ.

ಆ ಮೂರು ಕ್ಷೇತ್ರದಲ್ಲಿ ಮುಂದಿನ ರಾಜಕೀಯ ನೆಡೆ ಕುರಿತು ಶಾಸಕರ ಜೊತೆ ಮಾಜಿ ಸಿಎಂ ಮುಕ್ತವಾಗಿ ಚರ್ಚೆ ನಡೆಸಲಿದ್ದಾರೆ. ಸಭೆ ಮುಗಿದ ಬಳಿಕ ವಿಧಾನಸೌಧಕ್ಕೆ ಕುಮಾರಸ್ವಾಮಿ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಸ್ಕಿ ಶಾಸಕ ಪ್ರತಾಪ್ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಹೀಗೆ ಎಲ್ಲ 14 ಶಾಸಕರನ್ನೂ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.
ಅದಕ್ಕೂ ಮೊದಲು ಸುದ್ದಿಗೋಷ್ಠಿ ಕರೆದಿದ್ದ ಸ್ಪೀಕರ್ ಅವರು ಕಾಂಗ್ರೆಸ್ಸಿನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ರಾಣೆಬೆನ್ನೂರು ಶಾಸಕ ಆರ್ ಶಂಕರ್ ಅವರನ್ನು ಅನರ್ಹ ಗೊಳಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications