ಕುಮಾರಸ್ವಾಮಿಗೆ ನಿಖಿಲ್ ಸ್ಪರ್ಧೆಯ ಆತಂಕ, ರಾತ್ರೋ ರಾತ್ರಿ ಜ್ಯೋತಿಷಿ ಮನೆಗೆ ದೌಡು
Recommended Video

ಬೆಂಗಳೂರು, ಮಾರ್ಚ್ 13: ನಿಖಿಲ್ ಕುಮಾರಸ್ವಾಮಿ ಈ ಬಾರಿ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸುತ್ತಿರುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ರಾತ್ರೋರಾತ್ರಿ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ.
ಕುಮಾರಸ್ವಾಮಿಯವರಿಗೆ ಮಗನ ಸ್ಪರ್ಧೆ ಕುರಿತು ಆತಂಕ ಶುರುವಾದಂತಿದೆ, ಇದೇ ಕಾರಣಕ್ಕೆ ಅವರು ರಾಜಗುರು ದ್ವಾರಕನಾಥ್ ಅವರ ಮನೆಗೆ ದೌಡಾಯಿಸಿ ಚರ್ಚೆ ನಡೆಸಿದ್ದಾರೆ.
ಕುಮಾರಸ್ವಾಮಿ ಕುಟುಂದಲ್ಲಿ ಎಲ್ಲರೂ ದೈವಭಕ್ತರೇ, ಎಲ್ಲರೂ ಜ್ಯೋತಿಷ್ಯವನ್ನು ಸಾಕಷ್ಟು ನಂಬುತ್ತಾರೆ, ಡಿಕೆ ಶಿವಕುಮಾರ್ ಅವರ ಆಪ್ತರಾಗಿರುವ ರಾಜಗುರು ದ್ವಾರಕನಾಥ್ ಅವರ ಮನೆಗೆ ಮಂಗಳವಾರ ರಾತ್ರಿ ಮಗ ನಿಖಿಲ್ ಅವರನ್ನೂ ಕರೆತಂದು ಮಾತುಕತೆ ನಡೆಸಿದ್ದಾರೆ.
ಈ ವೇಳೆ ತಮ್ಮ ಮಗನ ರಾಜಕೀಯ ಭವಿಷ್ಯ ಏನಾಗಲಿದೆ ಎಂದು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ನಿಖಿಲ್ ಮಂಡ್ಯದಿಂದ ಸ್ಪಸ್ಪರ್ಧಿಸಿದರೆ ಏನಾಗಬಹುದು? ಮುಂದೆ ರಾಜಕೀಯ ಭವಿಷ್ಯ ಹೇಗಿದೆ? ಎಂಬ ಬಗ್ಗೆ ತಿಳಿದುಕೊಳ್ಳಲು ಜ್ಯೋತಿಷ್ಯದ ಮೊರೆ ಹೋದ ಕುಮಾರಸ್ವಾಮಿ ಅವರು ರಾಜಗುರು ದ್ವಾರಕಾನಾಥ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ವಂಶ ಪಾರಂಪರ್ಯ ರಾಜಕಾರಣ ಒಂದು ಕಡೆ ಇರಲಿ, ಯಾರ್ ಯಾರಿಗೆ ಯೋಗ ಇರುತ್ತೊ ಅವರು ಅನುಭವಿಸುತ್ತಾರೆ. ಆ ಹುಡುಗ ಚುನಾವಣೆಗೆ ನಿಲ್ಲಬೇಕು ಎಂಬ ಉತ್ಸಾಹದಲ್ಲಿದ್ದಾನೆ. ಒಬ್ಬ ಗುರುವಾಗಿ ನಮ್ಮ ಮನೆಗೆ ಯಾರೇ ಬಂದರೂ ಧೈರ್ಯ ತುಂಬಿ ಕಳಿಸುತ್ತೇನೆ, ಅದು ನನ್ನ ಕರ್ತವ್ಯ ಎಂದು ದ್ವಾರಕನಾಥ್ ಅವರು ಹೇಳಿದ್ದಾರೆ.

ನಿಖಿಲ್ಗೆ ಸುಮಲತಾ ಎದುರಾಳಿ ಇಬ್ರಲ್ಲಿ ಯಾರು ಗೆಲ್ತಾರೆ?
ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅದವರ ವಿರುದ್ಧ ಸುಮಲತಾ ಅಂಬರೀಶ್ ಸ್ಪರ್ಧಿಸಲಿದ್ದಾರೆ. ಆದರೆ ಯಾವ ಪಕ್ಷದಿಂದ ಸ್ಪರ್ಧಿಸುವುದು ಎಂಬ ಗೊಂದಲದಲ್ಲಿದ್ದಾರೆ. ಮಾರ್ಚ್ 18ರಂದು ತಮ್ಮ ನಿರ್ಧಾರವನ್ನು ಘೋಷಿಸಲಿದ್ದಾರೆ. ಆದರೆ ಇಬ್ಬರೂ ಚುನಾವಣೆಗೆ ನಿಂತರೇ ಇಬ್ಬರೂ ಕೂಡ ಮೊದಲ ಬಾರಿಗೆ ರಾಜಕೀಯ ಪ್ರವೇಶಿಸುತ್ತಿರುವ ಕಾರಣ ತೀವ್ರ ಕುತೂಹಲವಿದೆ.

ಕಾಂಗ್ರೆಸ್, ಜೆಡಿಎಸ್ ಎದುರಾಳಿ
ಈ ಕ್ಷೇತ್ರದ ಇತಿಹಾಸ ನೋಡಿದರೆ ಕಾಂಗ್ರೆಸ್- ಜೆಡಿಎಸ್ಸ್ಇಲ್ಲಿ ಹಿಂದಿನಿಂದಲೂ ಸಮಬಲದ ಹೋರಾಟ ನಡೆಸುತ್ತಾ ಬಂದಿವೆ. ಈ ಹಿಂದೆ 1989,1999, 2014, 2013ರಲ್ಲಿ ಕಾಂಗ್ರೆಸ್ ಪಾಲಾಗಿದ್ದ ಕ್ಷೇತ್ರವನ್ನು 1996, 2009, 2017, 2018ರಲ್ಲಿ ಜೆಡಿಎಸ್ ಬಾಚಿಕೊಂಡಿತ್ತು. ಆದರೆ, 2018ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ನಡುವೆ ನೇರ ಕಾದಾಟ ನಡೆದಿತ್ತು. ಪ್ರಶ್ನೆಯೆಂದರೆ, ಮೈತ್ರಿಯ ಪರಿಣಾಮವಾಗಿ ಸ್ಥಳೀಯ ಕಾಂಗ್ರೆಸ್ ನಾಯಕರು ಮೈತ್ರಿ ಸೂತ್ರಕ್ಕೆ ಬದ್ಧವಾಗಿ ಜೆಡಿಎಸ್ಪರ ಕೆಲಸ ಮಾಡಿ ಅಸ್ತಿತ್ವ ವನ್ನು ಉಳಿಸಿಕೊಳ್ಳುತ್ತಿದ್ದಾರೆ.ಹೀಗಾಗಿ ಸುಮಲತಾ ಅವರಿಗೆ ಬೆಂಬಲ ನೀಡಲು ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ತಯಾರಿಲ್ಲ.

ನಿಖಿಲ್ ರಾಜಕೀಯ ಭವಿಷ್ಯ ಹೇಗಿದೆ?
ಈ ವೇಳೆ ತಮ್ಮ ಮಗನ ರಾಜಕೀಯ ಭವಿಷ್ಯ ಏನಾಗಲಿದೆ ಎಂದು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ನಿಖಿಲ್ ಮಂಡ್ಯದಿಂದ ಸ್ಪಸ್ಪರ್ಧಿಸಿದರೆ ಏನಾಗಬಹುದು? ಮುಂದೆ ರಾಜಕೀಯ ಭವಿಷ್ಯ ಹೇಗಿದೆ? ಎಂಬ ಬಗ್ಗೆ ತಿಳಿದುಕೊಳ್ಳಲು ಜ್ಯೋತಿಷ್ಯದ ಮೊರೆ ಹೋದ ಕುಮಾರಸ್ವಾಮಿ ಅವರು ರಾಜಗುರು ದ್ವಾರಕಾನಾಥ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಯಾರು ಬೇಕಾದರೂ ಚುನಾವಣೆಗೆ ನಿಲ್ಲಬಹುದು: ಕುಮಾರಸ್ವಾಮಿ
ಚುನಾವಣೆಗೆ ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು. ಎಲ್ಲೋ ಹುಟ್ಟಿ, ಮತ್ತೆಲ್ಲೋ ಸ್ಪರ್ಧೆ ಮಾಡಿ ಶಾಸಕ ಮತ್ತು ಸಂಸದರಾಗಿ ಬಹಳಷ್ಟು ಜನ ಆಯ್ಕೆಯಾಗಿದ್ದಾರೆ. ಎಲ್ಲಾ ಕಡೆ ಪರ ವಿರೋಧ ಇದ್ದೇ ಇರುತ್ತದೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಸ್ಪರ್ಧೆಯನ್ನು ಸಮರ್ಥಿಸಿಕೊಂಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications