ಎಚ್ಡಿಕೆ ಮಾಡಿದ ಸಹಾಯದಿಂದ ಬೇಕರಿ ಆರಂಭಿಸಿದ ಸವಿತಾ
ಬೆಂಗಳೂರು, ಜೂನ್ 09 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ದಲಿತ ಮಹಿಳೆ ಸವಿತಾ ಅವರು ಆರಂಭಿಸಿರುವ ನೂತನ ಬೇಕರಿಯನ್ನು ಉದ್ಘಾಟಿಸಿದರು. ಸವಿತಾ ಅವರು ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮಕ್ಕೆ ಬಂದಾಗ ಅವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವಿದೆ.
ನೊಂದ ಮಹಿಳೆಗೆ ಸಹಾಯ ಮಾಡಲು ಸರ್ಕಾರಕ್ಕೆ ಕುಮಾರಸ್ವಾಮಿ ಅವರು ಮೂರು ದಿನಗಳ ಗಡುವು ನೀಡಿದ್ದರು. ಆದರೆ, ಸರ್ಕಾರ ಸಹಾಯ ಮಾಡಿರಲಿಲ್ಲ. ಕುಮಾರಸ್ವಾಮಿ ಅವರು ಸವಿತಾ ಅವರ ಜೀವನ ನಿರ್ವಹಣೆಗಾಗಿ ಬೇಕರಿ ಸ್ಥಾಪನೆ ಮಾಡಲು 2 ಲಕ್ಷ ರೂ.ಗಳ ಸಹಾಯ ಮಾಡಿದ್ದರು. [ದಲಿತ ಮಹಿಳೆಗೆ ಆರ್ಥಿಕ ಸಹಾಯ ಮಾಡಿದ]

ಕುಮಾರಸ್ವಾಮಿ ಅವರು ಮಾಡಿದ ಹಣದ ಸಹಾಯದಿಂದ ಸವಿತಾ ಅವರು 'ಎಸ್ ಮೈ ಬೇಕರಿ ಮತ್ತು ಕಾಂಡಿಮೆಂಟ್ಸ್ ಜ್ಯೂಸ್ ಮತ್ತು ಚಾಟ್ಸ್' ಎಂಬ ಬೇಕರಿ ತೆರೆದಿದ್ದಾರೆ. ಗುರುವಾರ ಕುಮಾರಸ್ವಾಮಿ ಅವರು ಬೇಕರಿಯನ್ನು ಉದ್ಘಾಟನೆ ಮಾಡಿದರು. [ಮಹಿಳೆಗೆ ಕಿರುಕುಳ, ಸರ್ಕಾರಕ್ಕೆ ಗಡುವು ಕೊಟ್ಟ ಎಚ್ಡಿಕೆ]
ಯಾರು ಈ ಸವಿತಾ? : ಬೆಂಗಳೂರಿನ ಹೊಸಹಳ್ಳಿ ನಿವಾಸಿ ಸವಿತಾ ಅವರು ಮೇ 17ರಂದು ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಹೋಗಿದ್ದರು. ಆದರೆ, ಮುಖ್ಯಮಂತ್ರಿಗಳ ಗೃಹ ಕಚೇರಿ ಬಳಿ ಇದ್ದ ಪೊಲೀಸರು ರಾತ್ರಿ 8 ಗಂಟೆಯ ತನಕ ಸವಿತಾ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಅವಕಾಶ ಕೊಟ್ಟಿರಲಿಲ್ಲ.

ಸವಿತಾ ಅವರನ್ನು ಸಿಎಂ ಮನೆ ಬಳಿಯಿಂದ ಹೈಗೌಂಡ್ಸ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಅಮಾನವೀಯವಾಗಿ ವರ್ತಿಸಲಾಗಿದೆ. ವೇಶ್ಯಾವಾಟಿಕೆ ಕೇಸು ದಾಖಲು ಮಾಡುವುದಾಗಿ ಬೆದರಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬುದು ಆರೋಪ.
ಧರಣಿ ನಡೆಸುವ ಎಚ್ಚರಿಕೆ : ಸವಿತಾ ಅವರಿಗೆ ಸಹಾಯ ಮಾಡಲು ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದರು. ಆದರೆ, ಸರ್ಕಾರ ಸಹಾಯ ಮಾಡಿಲ್ಲ. 'ಚುನಾವಣೆ ಇರುವುದರಿಂದ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸುವುದನ್ನು ಮುಂದೂಡಿದ್ದೇನೆ. ಮಹಿಳೆಗೆ ನ್ಯಾಯ ಸಿಗದಿದ್ದರೆ ಧರಣಿ ನಡೆಸುವುದು ಖಂಡಿತ' ಎಂದು ಕುಮಾರಸ್ವಾಮಿ ಕೆಲವು ದಿನಗಳ ಹಿಂದೆ ಹೇಳಿದ್ದರು.

-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications