ಕಾಂಗ್ರೆಸ್ ದರಿದ್ರ ಪಕ್ಷ, ಅಲ್ಲಿ ವಲಸಿಗರದ್ದೇ ದರ್ಬಾರ್: ಎಚ್ಡಿಕೆ
Recommended Video

ಬೆಂಗಳೂರು, ಮಾರ್ಚ್ 23: ಇಂದು ಮುಕ್ತಾಯವಾದ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.
ಜೆಡಿಎಸ್ ಉಚ್ಛಾಟಿತ ಶಾಸಕರರು ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡದಂತೆ ತಡೆಯಲು ವಿಫಲವಾಗಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಎಣಿಕೆಯಂತೆ ಮತದಾನ ನಡೆಯದ ಕಾರಣ ಹತಾಶರಾದಂತಾಗಿದ್ದ ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷವನ್ನು ಹಾಗೂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಸಂಭೋಧಿಸಿ ಟೀಕಿಸಿರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಕಾಂಗ್ರೆಸ್ ದರಿದ್ರ ಪಕ್ಷ' ಎಂದು ಹೀನಾಯವಾಗಿ ಬೈಯ್ದರು. ಸಿದ್ದರಾಮಯ್ಯ ಅವರನ್ನೂ ತರಾಟೆಗೆ ತೆಗೆದುಕೊಂಡ ಅವರು ಅವರೊಬ್ಬ ಅವಕಾಶವಾದಿ ರಾಜಕಾರಣಿ, ಅವರ ಚಿಂತನೆ ಏನಿದ್ದರು ಸ್ವಹಿತಕ್ಕೆ ಅಷ್ಟೆ ಎಂದು ಹರಿಹಾಯ್ದರು.

ಕಾಂಗ್ರೆಸ್ ಪಕ್ಷದಲ್ಲಿ ಮೂಲ ಪಕ್ಷದವರಿಗೆ ಬೆಲೆಯೇ ಇಲ್ಲದಂತಾಗಿದೆ, ಅಲ್ಲಿ ಈಗ ವಲಸಿಗರದ್ದೇ ಕಾರುಬಾರು. ಸಿದ್ದರಾಮಯ್ಯ ತನ್ನ ತಾಳಕ್ಕೆ ಎಲ್ಲರನ್ನೂ ಕುಣಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ನಷ್ಟು ಹೀನಾಯ ಸ್ಥಿತಿ ಜೆಡಿಎಸ್ಗೆ ಬಂದಿಲ್ಲ ಎಂದ ಅವರು 'ಪಾಲಿಕೆ ಮೇಯರ್ ವಿಷಯಕ್ಕೆ ಅವರು ನನ್ನ ಮನೆ ಬಾಗಿಲಿಗೆ ಬಂದಿದ್ದರು' ಎಂದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಇದಕ್ಕೂ ಮುನ್ನಾ ರಾಜ್ಯಸಭಾ ಚುನಾವಣೆ ಮತದಾನ ಪ್ರತಿಕ್ರಿಯೆ ನಡೆಯುವ ಸಮಯದಲ್ಲಿ ಕೂಡಾ ಕುಮಾರಸ್ವಾಮಿ ಅವರು ಚುನಾವಣಾ ಅಧಿಕಾರಿಗಳ ವಿರುದ್ಧ ಗುಟುರು ಹಾಕಿದ್ದರು. ಚಿಂಚನಸೂರು ಮತ್ತು ಕಾಗೋಡು ತಿಮ್ಮಪ್ಪ ಅವರಿಗೆ ಎರಡು ಬಾರಿ ಮತದಾನ ಮಾಡಲು ಅವಕಾಶ ಕೊಟ್ಟಿದ್ದಾರೆ ಎಂದು ಆರೋಪಿಸಿ ಕುಮಾರಸ್ವಾಮಿ, ರೇವಣ್ಣ ಮತ್ತಿತರ ಜೆಡಿಎಸ್ ಶಾಸಕರು ಕೆಲ ಕಾಲ ಮತದಾನ ಪ್ರಕ್ರಿಯೆಯನ್ನು ತಡೆದಿದ್ದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications