ಕಾಂಗ್ರೆಸ್ ದರಿದ್ರ ಪಕ್ಷ, ಅಲ್ಲಿ ವಲಸಿಗರದ್ದೇ ದರ್ಬಾರ್: ಎಚ್ಡಿಕೆ
Recommended Video

ಬೆಂಗಳೂರು, ಮಾರ್ಚ್ 23: ಇಂದು ಮುಕ್ತಾಯವಾದ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.
ಜೆಡಿಎಸ್ ಉಚ್ಛಾಟಿತ ಶಾಸಕರರು ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡದಂತೆ ತಡೆಯಲು ವಿಫಲವಾಗಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಎಣಿಕೆಯಂತೆ ಮತದಾನ ನಡೆಯದ ಕಾರಣ ಹತಾಶರಾದಂತಾಗಿದ್ದ ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷವನ್ನು ಹಾಗೂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಸಂಭೋಧಿಸಿ ಟೀಕಿಸಿರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಕಾಂಗ್ರೆಸ್ ದರಿದ್ರ ಪಕ್ಷ' ಎಂದು ಹೀನಾಯವಾಗಿ ಬೈಯ್ದರು. ಸಿದ್ದರಾಮಯ್ಯ ಅವರನ್ನೂ ತರಾಟೆಗೆ ತೆಗೆದುಕೊಂಡ ಅವರು ಅವರೊಬ್ಬ ಅವಕಾಶವಾದಿ ರಾಜಕಾರಣಿ, ಅವರ ಚಿಂತನೆ ಏನಿದ್ದರು ಸ್ವಹಿತಕ್ಕೆ ಅಷ್ಟೆ ಎಂದು ಹರಿಹಾಯ್ದರು.

ಕಾಂಗ್ರೆಸ್ ಪಕ್ಷದಲ್ಲಿ ಮೂಲ ಪಕ್ಷದವರಿಗೆ ಬೆಲೆಯೇ ಇಲ್ಲದಂತಾಗಿದೆ, ಅಲ್ಲಿ ಈಗ ವಲಸಿಗರದ್ದೇ ಕಾರುಬಾರು. ಸಿದ್ದರಾಮಯ್ಯ ತನ್ನ ತಾಳಕ್ಕೆ ಎಲ್ಲರನ್ನೂ ಕುಣಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ನಷ್ಟು ಹೀನಾಯ ಸ್ಥಿತಿ ಜೆಡಿಎಸ್ಗೆ ಬಂದಿಲ್ಲ ಎಂದ ಅವರು 'ಪಾಲಿಕೆ ಮೇಯರ್ ವಿಷಯಕ್ಕೆ ಅವರು ನನ್ನ ಮನೆ ಬಾಗಿಲಿಗೆ ಬಂದಿದ್ದರು' ಎಂದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಇದಕ್ಕೂ ಮುನ್ನಾ ರಾಜ್ಯಸಭಾ ಚುನಾವಣೆ ಮತದಾನ ಪ್ರತಿಕ್ರಿಯೆ ನಡೆಯುವ ಸಮಯದಲ್ಲಿ ಕೂಡಾ ಕುಮಾರಸ್ವಾಮಿ ಅವರು ಚುನಾವಣಾ ಅಧಿಕಾರಿಗಳ ವಿರುದ್ಧ ಗುಟುರು ಹಾಕಿದ್ದರು. ಚಿಂಚನಸೂರು ಮತ್ತು ಕಾಗೋಡು ತಿಮ್ಮಪ್ಪ ಅವರಿಗೆ ಎರಡು ಬಾರಿ ಮತದಾನ ಮಾಡಲು ಅವಕಾಶ ಕೊಟ್ಟಿದ್ದಾರೆ ಎಂದು ಆರೋಪಿಸಿ ಕುಮಾರಸ್ವಾಮಿ, ರೇವಣ್ಣ ಮತ್ತಿತರ ಜೆಡಿಎಸ್ ಶಾಸಕರು ಕೆಲ ಕಾಲ ಮತದಾನ ಪ್ರಕ್ರಿಯೆಯನ್ನು ತಡೆದಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications