ಬಿಲ್ಡರ್ ಅಪಹರಣ ಪ್ರಕರಣ: ಐವರು ಅರೆಸ್ಟ್

ರಾಘವೇಂದ್ರ ಬಡಾವಣೆಯ ಶ್ರೀನಿವಾಸ(27), ಮಹಾಲಕ್ಷ್ಮಿ ಲೇಔಟ್ನ ಆರ್ಮುಗಂ(27), ಕೃಷ್ಣನಗರದ ದೊರೆ ಬಿನ್ ಕೃಷ್ಣಮೂರ್ತಿ(20), ಪರಪ್ಪನ ಅಗ್ರಹಾರದ ಹರೀಶ ಬಿನ್ ಭಾಸ್ಕರ್(20), ಮೀನಾಕ್ಷಿ ಲೇಔಟ್ ರಾಯಸಂದ್ರದ ಸತೀಶ ಬಿನ್ ಕೃಷ್ಣ(20) ಬಂಧಿತ ಆರೋಪಿಗಳು.
ಬಂಧಿತರಿಂದ 5 ಲಕ್ಷ ರೂ ಮೌಲ್ಯದ 1 ಚಿನ್ನದ ಮಾಂಗಲ್ಯ ಸರ, ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ಎಸ್ಟೀಮ್ ಕಾರು ಮತ್ತು ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಶ್ರೀನಿವಾಸ ಮತ್ತು ಮುರುಗ ಇವರಿಬ್ಬರು ಸ್ನೇಹಿತರಾಗಿದ್ದು ಇಬ್ಬರ ಮೇಲೂ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನ ಮತ್ತು ಹೆಚ್.ಎಸ್.ಆರ್.ಲೇಔಟ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಬಿಲ್ಡರ್ ಅಪಹರಣ ಪ್ರಕರಣದ ಮುಖ್ಯ ಸೂತ್ರಧಾರರಾಗಿದ್ದ ಇವರನ್ನು ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದಾಗ ಈ ಅಪಹರಣ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳೆಲ್ಲರೂ ಚಿಕ್ಕಂದಿನಿಂದಲೂ ಸ್ನೇಹಿತರಾಗಿದ್ದು, ಸುಲಭವಾಗಿ ಹಣಗಳಿಸುವ ಉದ್ದೇಶದಿಂದ ರಾತ್ರಿ ವೇಳೆಯಲ್ಲಿ ಕಾರಿನಲ್ಲಿ ಬರುವ ಸಾರ್ವಜನಿಕರನ್ನು ಅಪಹರಿಸಿ ಒತ್ತೆಯಾಗಿಟ್ಟುಕೊಂಡು ಹಣಗಳಿಸುವ ಸಂಚು ರೂಪಿಸಿದ್ದರು.
ಜುಲೈ 23ರ ರಾತ್ರಿ ಉತ್ತರಹಳ್ಳಿಯಲ್ಲಿ ವಿನೋದ್ರವರನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟು, ನಂತರ ಆವರ ಮನೆ ಬಳಿ ಬಂದು ತಾಯಿಯ ಮೈಮೇಲಿದ್ದ ಬಂಗಾರದ ಸರವನ್ನು ಕಸಿದುಕೊಂಡು ಹೋಗಿ ಮಾರಾಟ ಮಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಟಿ.ಡಿ.ರಾಜು ನೇತೃತ್ವದ ತಂಡ ಆರೋಪಿಗಳನ್ನು ಒಂದೇ ವಾರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications