ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಎಸ್‌ವೈ ಮೊದಲ ದಿನದ ಆಡಳಿತದ ಬಗ್ಗೆ ಎಚ್‌ಡಿಕೆ ಅಭಿಪ್ರಾಯ ಇದು

By Manjunatha
|
Google Oneindia Kannada News

ಬೆಂಗಳೂರು, ಮೇ 17: ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದ ರೇಸಿನಲ್ಲಿರುವ ಕುಮಾರಸ್ವಾಮಿ ಅವರು ಬಿಎಸ್‌ವೈ ಅವರ ಮೊದಲ ದಿನದ ಮು.ಮಂತ್ರಿ ಕಾರ್ಯದ ಬಗ್ಗೆ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ 5 ಜನ ಐಪಿಎಸ್ ಅಧಿಕಾರಿಗಳನ್ನು, 2 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದನ್ನು ಟೀಕಿಸಿರುವ ಅವರು ಅಧಿಕಾರದಲ್ಲಿದ್ದರೇ ಇದೇ ಮುಂದುವರೆಯಲಿದೆ ಎಂದಿದ್ದಾರೆ.

ಈಗಲ್ಟನ್ ನಿಂದ ಕೊಚ್ಚಿಯ 7 ಸ್ಟಾರ್ ಹೋಟೆಲ್ ಗೆ ಶಾಸಕರು ಶಿಫ್ಟ್ ಈಗಲ್ಟನ್ ನಿಂದ ಕೊಚ್ಚಿಯ 7 ಸ್ಟಾರ್ ಹೋಟೆಲ್ ಗೆ ಶಾಸಕರು ಶಿಫ್ಟ್

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ನಂತರ ಮಾತನಾಡುತ್ತಿರುವ ರೀತಿ, ವರ್ತಿಸುತ್ತಿರುವ ರೀತಿ ಆತಂಕ ಉಂಟುಮಾಡಿದೆ ಎಂದಿರುವ ಕುಮಾರಸ್ವಾಮಿ, ಬಹುಮತ ಇಲ್ಲದಿದ್ದರೂ ಸಾಲಮನ್ನಾ ಮತ್ತಿತರೆ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿಯ ನಡೆಗಳು ನಗು ಉಕ್ಕಿಸುತ್ತಿವೆ ಎಂದಿದ್ದಾರೆ.

Kumaraswamy reaction about B S Yeddyurappas CM oath

ಜೆಡಿಎಸ್‌ನ ಎಲ್ಲಾ 38 ಶಾಸಕರು ನನ್ನ ಜೊತೆಗಿದ್ದಾರೆ ಎಂದಿರುವ ಅವರು, ನಮ್ಮ ಶಾಸಕರ ಭದ್ರತೆ ನನ್ನ ಜವಾಬ್ದಾರಿ ಹಾಗಾಗಿ ಅವರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಮನಗರ ಜೆಡಿಎಸ್ ಕಾರ್ಯಕರ್ತರಿಂದ ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ರಾಮನಗರ ಜೆಡಿಎಸ್ ಕಾರ್ಯಕರ್ತರಿಂದ ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಾ ಈ ಬಗ್ಗೆ ಮಾತನಾಡಿದ್ದು, ಬಿಜೆಪಿ ಪಕ್ಷವು 'ಕುದುರೆ ವ್ಯಾಪಾರ'ಕ್ಕೆ ಮುಂದಾಗಿದ್ದು ಇದು ಪ್ರಜಾಪ್ರಭುತ್ವ ನೀತಿಗಳಿಗೆ ವಿರುದ್ಧವಾಗಿದೆ. ಯಾವ ಶಾಸಕರೂ ಅವರ ಆಮೀಷಗಳಿಗೆ ಬಲಿ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

English summary
HD Kumaraswamy said 'Yaddyurappa transfers 5 IPS officers and some IAS officers after he taken oath. BJP's actions were laughable. All JDS MLAs are with me.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X