ದೇವೇಗೌಡರ ಕುಟುಂಬದಿಂದ ಚುನಾವಣೆಗೆ ಇಳಿಯೋದು ಇವರಿಬ್ಬರೆ
ಬೆಂಗಳೂರು, ಡಿಸೆಂಬರ್ 02 : ದೇವೇಗೌಡ ಅವರ ಕುಟುಂಬದಿಂದ ಯಾರ್ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದು ರಾಜ್ಯದ ಪಾಲಿಗೆ ಸದ್ಯದ ಮಿಲಿಯನ್ ಡಾಲರ್ ಪ್ರಶ್ನೆ. ಆದರೆ ಆ ಪ್ರಶ್ನೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಉತ್ತರ ನೀಡಿದ್ದಾರೆ.
ಈ ಬಾರಿ ಚುನಾವಣೆಗೆ ದೇವೇಗೌಡ ಕುಟುಂಬದಿಂದ ಇಬ್ಬರು ಮಾತ್ರವೇ ಕಣಕ್ಕಿಳಿಯಲಿದ್ದಾರಂತೆ. ಕುಮಾರಸ್ವಾಮಿ ಮತ್ತು ರೇವಣ್ಣ ಅವರು ಬಿಟ್ಟು ಕುಟುಂಬದ ಇನ್ಯಾರೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.

ನಗರದ ಜೆಡಿಎಸ್ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಷಯ ಬಹಿರಂಗ ಪಡಿಸಿದರು. ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಅವರು ಕಡಾಕಂಡಿತವಾಗಿ ಹೇಳಿದರು. ಆದರೆ ಅನಿತಾ ಕುಮಾರಸ್ವಾಮಿ ಅವರು ಚನ್ನಪಟ್ಟಣದಿಂದ ಸ್ಪರ್ಧಿಸುವ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದರು.
ಮಗ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲುವುದಿಲ್ಲ ಎಂದ ಅವರು, ನಿಖಿಲ್ ಗೆ ಪಕ್ಷದ ಯಾವುದೇ ಹುದ್ದೆ ಅಥವಾ ಜವಾಬ್ದಾರಿ ನೀಡುವುದಿಲ್ಲ ಎಂದು ಹೇಳಿದರು. ಆದರೆ ನಿಖಿಲ್ ಅವರು ಚುನಾವಣಾ ಪ್ರಚಾರದಲ್ಲಿ ಮಾತ್ರ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ನೀಡಿದರು.
ಇನ್ನು ಸುದ್ದಿಗೋಷ್ಠಿಯಲ್ಲಿ ಸಿ.ಎಂ ಸಿದ್ದರಾಮಯ್ಯ ಅವರ ಮೇಲೆ ವಾಗ್ದಾಳಿ ನಡೆಸಿದ ಅವರು, ಜೆಡಿಎಸ್ ಗೆದ್ದರೆ ದಲಿತರನ್ನು ಉಪಮುಖ್ಯಮಂತ್ರಿ ಮಾಡುವುದಾಗಿ ಹೇಳಿದ್ದೇವೆ. ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ದಲಿತರನ್ನು ಮು.ಮಂತ್ರಿ ಮಾಡಲಿ ನೋಡೋಣ ಎಂದು ಸವಾಲ್ ಎಸೆದರು.
ಸಿದ್ದರಾಮಯ್ಯ ಅವರು ಜೆಡಿಎಸ್ ನಲ್ಲಿದ್ದಾಗ ಮತ್ತು ಪಕ್ಷ ಬಿಟ್ಟು ಹೋದಾಗ ಜೆಡಿಎಸ್ ನಯಕರ ಬಲಿ ತೆಗೆದುಕೊಂಡು ಹೋದರು ಎಂದು ಅವರು ಆರೋಪಿಸಿದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications