ಕುರುಬರ ಸಮಾವೇಶದಲ್ಲಿ ಸಿಎಂ ಸಿದ್ದುಗೆ 'ಕಿಸ್ ಭಾಗ್ಯ'
ಬೆಂಗಳೂರು, ಜೂನ್ 26: ಕುರುಬ ಸಮುದಾಯದ ರಾಜ್ಯ ಮಟ್ಟದ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಹಿ ಮುತ್ತಿನ ಭಾಗ್ಯ ಸಿಕ್ಕಿದೆ. ಮಹಿಳೆಯೊಬ್ಬರು ವೇದಿಕೆಯಲ್ಲಿ ಎಲ್ಲರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳ ಕೆನ್ನೆಗೆ ಮುತ್ತಿಟ್ಟ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ ರಾಮಯ್ಯ, ಆ ಹೆಣ್ಣು ಮಗಳು ನನ್ನ ಮಗಳ ಸಮಾನದ ಹುಡುಗಿ ಎಂದರು.
ಅರಮನೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂಗೆ ಮುತ್ತಿಟ್ಟ ಮಹಿಳೆಯನ್ನು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಅಮೃತಪುರ ತಾಲೂಕು ಪಂಚಾಯಿತಿ ಸದಸ್ಯೆ ಗಿರಿಜಾ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. [ಮಾತು ಮನೆ ಕೆಡಿಸಿತು, ಮುತ್ತು ಮದುವೆಯನ್ನೇ ಕೆಡಿಸಿತು!]
ಸಮಾರಂಭದಲ್ಲಿ ಎಲ್ಲರಂತೆ ವೇದಿಕೆ ಏರಿ ಸಿಎಂ ರನ್ನು ಕಂಡ ಗಿರಿಜಾ ಅವರು ಗ್ರೂಪ್ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ನಂತರ ಸಿಎಂ ಅವರಿಗೆ ಮುತ್ತಿಟ್ಟು ತೆರಳಿದ್ದಾರೆ. ಸಿಎಂ ಅವರು ಇದರಿಂದ ಗಾಬರಿಯಾದಂತೆ ಕಂಡು ಬರಲಿಲ್ಲ. [ನ್ಯಾಯವಾದಿ ಜೇಠ್ಮಲಾನಿ ಲಿಪ್ ಲಾಕ್]

ನಂತರ ಈ ಬಗ್ಗೆ ಸಂತಸದಿಂದ ಮಾತನಾಡಿದ ಗಿರಿಜಾ, ನಾನು ಮೂಲತಃ ಸಿದ್ದರಾಮಯ್ಯ ಅವರ ವರಣಾ ಕ್ಷೇತ್ರದವಳು, ನಮ್ಮ ಜನಾಂಗದ ನಾಯಕರೊಬ್ಬರು ಮುಖ್ಯಮಂತ್ರಿ ಸ್ಥಾನಕ್ಕೇರಿರುವುದು ನನಗೆ ಹೆಮ್ಮೆಯ ವಿಷಯ. ಸಿದ್ದರಾಮಯ್ಯ ಅವರು ನನಗೆ ತಂದೆ ಸಮಾನ, ಅವರನ್ನು ಹತ್ತಿರದಿಂದ ಕಾಣುವ ಸೌಭಾಗ್ಯ ಈ ದಿನ ಒದಗಿ ಬಂದಿತು. ಇದು ನನ್ನ ಜೀವನದ ಅವಿಸ್ಮರಣೀಯ ದಿನ ಎಂದಿದ್ದಾರೆ.

ನನ್ನ ಪತ್ನಿ, ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ, ಜನ ಸಾಮಾನ್ಯರು ಸಿಎಂ ಬಳಿ ಹೋಗುವುದೇ ಕಷ್ಟ, ಇಂದು ಈಕೆಗೆ ಹತ್ತಿರದಿಂದ ಫೋಟೊ ತೆಗೆಸಿಕೊಳ್ಳುವ ಅವಕಾಶ ಒದಗಿ ಬಂದಿದೆ, ಆರಾಧ್ಯ ದೈವವನ್ನು ಕಂಡಾಗ ಭಾವುಕಳಾಗಿ ಮುತ್ತಿಟ್ಟಿದ್ದರಲ್ಲಿ ತಪ್ಪೇನಿಲ್ಲ, ಆಕೆಯ ಸಂತಸ ಕಂಡು ನಾನು ಸಹಜವಾಗಿ ಖುಷಿಯಾದೆ ಎಂದು ಗಿರಿಜಾ ಅವರ ಪತಿ ಶ್ರೀನಿವಾಸ್ ಅವರು ಖಾಸಗಿ ವಾಹಿನಿಗೆ ಪ್ರತಿಕ್ರಿಯಿಸಿದ್ದಾರೆ.

ನಂತರ ರಾಜ್ಯ ಕುರುಬ ಜನಾಂಗದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ನಾನು ಒಂದು ಜನಾಂಗದ ಪ್ರತಿನಿಧಿಯಲ್ಲ, ನಾನು ಈ ರಾಜ್ಯದ ಸಿಎಂ, ಎಲ್ಲರ ಆಶೀರ್ವಾದ ಪಡೆದು ಈ ಹುದ್ದೆಗೆ ಬಂದಿದ್ದೇನೆ, ಎಲ್ಲರ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿ ಹೊತ್ತಿದ್ದೇನೆ ಎಂದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications