ಕುರುಬ ಸಮಾವೇಶದಿಂದ ಟ್ರಾಫಿಕ್ ಜಾಮ್, ಬದಲಿ ಮಾರ್ಗ ಏನಿದೆ?
ಬೆಂಗಳೂರು, ಫೆಬ್ರವರಿ 7: ರಾಷ್ಟ್ರೀಯ ಹೆದ್ದಾರಿ 4 ರ ಮಾದಾವರ ಸಮೀಪದ ಬಿಐಇಸಿಯಲ್ಲಿ ಕುರುಬ ಜನಾಂಗದ ಸಮಾವೇಶ ಜಾರಿಯಲ್ಲಿದೆ. ಈ ಸಮಾವೇಶಕ್ಕೆ ನಾಡಿನ ವಿವಿಧೆಡೆಗಳಿಂದ ಲಕ್ಷಾಂತರ ಮಂದಿ ಆಗಮಿಸುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.
ಕಾಗಿನೆಲೆ ನಿರಂಜನಾನಂದಪುರಿ ಶ್ರೀಗಳ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ಸಮಾವೇಶವಿದ್ದರೂ ಮುಂಜಾನೆ 8 ಗಂಟೆ ವೇಳೆಗೆ ಸಾವಿರಾರು ವಾಹನಗಳು ಸುಮಾರು 2-3 ಕಿ.ಮೀ ತನಕ ನಿಂತಲ್ಲೆ ನಿಂತಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಬೆಂಗಳೂರು -ತುಮಕೂರು ರಸ್ತೆಯ ಒಂದು ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಕುರುಬ ಜನಾಂಗವನ್ನು ಪರಿಶಿಷ್ಟ ಜನಾಂಗ(ಎಸ್ಟಿ) ಎಂದು ಪರಿಗಣಿಸಿ ಸೂಕ್ತ ಮೀಸಲಾತಿ ನೀಡಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ಶ್ರೀಗಳು ಜನವರಿ 15 ರಂದು ಕಾಗಿನೆಲೆಯಿಂದ ಪಾದಯಾತ್ರೆ ಆರಂಭಿಸಿದ್ದರು. ಫೆಬ್ರವರಿ 4 ರಂದು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಪಾದಯಾತ್ರೆ ಅಂತ್ಯಗೊಂಡಿದ್ದು, ಫೆ.7ರಂದು ಮಾದಾವರದಲ್ಲಿ ಸಮಾರೋಪ ಸಮಾರಂಭ ನಡೆಯುತ್ತಿದೆ.
ಸಮಾವೇಶದ ಭದ್ರತೆಗಾಗಿ 2000 ಪೊಲೀಸರ ನಿಯೋಜನೆ ಮಾಡಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ಭಾರೀ ವಾಹನಗಳಿಗೆ ಮಾರ್ಗ ಬದಲಾಯಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತಾರ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣವರ್ ಹೇಳಿದ್ದಾರೆ.

ಬೆಂಗಳೂರು ನಗರದಿಂದ ತುಮಕೂರು ರಸ್ತೆ ಕಡೆಗೆ
ಬೆಂಗಳೂರು ನಗರದಿಂದ ತುಮಕೂರು ರಸ್ತೆ ಹಾಗೂ ನೆಲಮಂಗಲ ಮೂಲಕ ಹಾಸನ ರಸ್ತೆಗೆ ತೆರಳುವವರಿಗೆ: ಮಾಗಡಿ ರಸ್ತೆ ಬಳಸಲು ಸೂಚಿಸಲಾಗಿದೆ. ಮಾರ್ಗಹೀಗಿದೆ: ಬೆಂಗಳೂರು ನಗರ -ಮಾಗಡಿ ರಸ್ತೆ - ಮಾಗಡಿ - ಗುಡೆಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಮೂಲಕ ಹಾಸನ ರಸ್ತೆ ತಲುಪಬಹುದು. ಇನ್ನೊಂದು ಮಾರ್ಗ: ಬೆಂಗಳೂರು ನಗರ -ಮಾಗಡಿ ರಸ್ತೆ - ಮಾಗಡಿ - ಗುಡೆಮಾರನಹಳ್ಳಿ ಹ್ಯಾಂಡ್ - ದಾಬಸ್ಪೇಟೆ ಮುಖಾಂತರ ತುಮಕೂರು ರಸ್ತೆ ತಲುಪಬಹುದಾಗಿದೆ.

ತುಮಕೂರು ಮೂಲಕ ಹೈದರಾಬಾದ್ ರಸ್ತೆ
ಈ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರು ಬದಲಿ ಮಾರ್ಗ ಕಲ್ಪಿಸಿದ್ದಾರೆ. ತುಮಕೂರು ಮೂಲಕ ಹೈದರಾಬಾದ್ ರಸ್ತೆ ತಲುಪಬೇಕಾದರೆ ದಾಬಸ್ಪೇಟೆಯಿಂದ ದೊಡ್ಡಬಳ್ಳಾಪುರದ ಕಡೆಗೆ ವಾಹನ ತಿರುಗಿಸಿ ನಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮೂಲಕ ತಲುಪಬಹುದಾಗಿದೆ.
ಇದೇ ರೀತಿ ಹೈದರಾಬಾದ್ ರಸ್ತೆಯಿಂದ ತುಮಕೂರು ರಸ್ತೆ ಪ್ರವೇಶಿಸುವವರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ - ದೊಡ್ಡಬಳ್ಳಾಪುರ - ಡಾಬಸ್ಪೇಟೆ ಮಾರ್ಗವಾಗಿ ತುಮಕೂರು ರಸ್ತೆಯನ್ನು ತಲುಪಬೇಕು.

ತುಮಕೂರು ರಸ್ತೆಯಿಂದ ಮೈಸೂರು ರಸ್ತೆ ಮಾರ್ಗ
ತುಮಕೂರು ರಸ್ತೆಯಿಂದ ಹೊಸೂರು ಹಾಗೂ ಮೈಸೂರು ರಸ್ತೆ ಮಾರ್ಗ ಪ್ರವೇಶಿಸಲು ಬಯಸುವ ವಾಹನ ಸವಾರರು ದಾಬಸ್ಪೇಟೆಯಿಂದ ಮಾಗಡಿ ಕಡೆಗೆ ತೆರಳಿ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್, ಮಾಗಡಿ - ಮಾಗಡಿ ರಸ್ತೆ ನೈಸ್ ರಸ್ತೆ ಮೂಲಕ ಹೊಸೂರು, ಮೈಸೂರು ರಸ್ತೆಯನ್ನು ಸಂಪರ್ಕಿಸಬಹುದು.
Recommended Video

ಹೊಸೂರು ರಸ್ತೆಯಿಂದ ತುಮಕೂರು ರಸ್ತೆ ಪ್ರವೇಶ
ಮೈಸೂರು ಹಾಗೂ ಹೊಸೂರು ರಸ್ತೆಯಿಂದ ತುಮಕೂರು ರಸ್ತೆ ಪ್ರವೇಶಿಸಲು ಬಯಸುವವರು ನೈಸ್ ಜಂಕ್ಷನ್ - ಮಾಗಡಿ ರಸ್ತೆ ನೈಸ್ ರಸ್ತೆ - ಮಾಗಡಿ - ಗುಡೆಮಾರನಹಳ್ಳಿ ಹ್ಯಾಂಡ್ ಪೋಸ್ಟ್ - ಡಾಬಸ್ಪೇಟೆ ಮಾರ್ಗವಾಗಿ ತುಮಕೂರು ತಲುಪಬೇಕು. ಬೆಂಗಳೂರಿಗೆ ನೇರ ತಲುಪಬೇಕಾದ ಭಾರೀ ವಾಹನಗಳು ಸಂಜೆಯವರೆಗೂ ದಾಬಸ್ಪೇಟೆ ಪಾರ್ಕಿಂಗ್ ಸ್ಥಳದಲ್ಲಿ ಕಾಯಬೇಕಾಗಿದ್ದು, ಸಮಾವೇಶ ಮುಗಿದ ಬಳಿಕ ನಗರ ಪ್ರವೇಶ ಅವಕಾಶ ಸಿಗಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications