ಕನ್ನಡ ಮಾಧ್ಯಮ- ಸುಪ್ರೀಂ ತೀರ್ಪು ಸ್ವಾಗತಾರ್ಹ: ಕುಸ್ಮಾ
ಬೆಂಗಳೂರು, ಮೇ. 7: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಕರ್ನಾಟಕ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಸ್ವಾಗತಿಸಿದೆ.
ಕುಸ್ಮಾ ಅಧ್ಯಕ್ಷ ವಿ.ಆರ್.ಎನ್. ರೆಡ್ಡಿ ಒನ್ಇಂಡಿಯಾ ಕನ್ನಡದೊಂದಿಗೆ ಮಾತನಾಡಿ ಕುಸ್ಮಾ ಕನ್ನಡ ಭಾಷಾ ವಿರೋಧಿ ಸಂಘಟನೆ ಎಂಬ ಹಲವರಲ್ಲಿ ಬಂದಿದೆ. ನಿಜವಾಗಿಯೂ ಇದು ತಪ್ಪು ಭಾವನೆ. ಕುಸ್ಮಾ ವಿದ್ಯಾರ್ಥಿಗಳ ಪೋಷಕರ ಪರವಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ. ಈ ತೀರ್ಪಿನಿಂದ ಸರ್ಕಾರಕ್ಕೆ ಮುಖಭಂಗವಾಗಿದೆ, ಕುಸ್ಮಾ ಹೋರಾಟಕ್ಕೆ ಜಯವಾಗಿದೆ ಎಂದು ಬಿಂಬಿಸಲಾಗುತ್ತಿದೆ. ನಿಜವಾಗಿಯೂ ಇದು ಮಕ್ಕಳ ಪೋಷಕರಿಗೆ ಸಂದ ಜಯ ಎಂದು ತೀರ್ಪನ್ನು ಸ್ವಾಗತಿಸಿದ್ದಾರೆ.[ಕನ್ನಡದ ಭವಿಷ್ಯಕ್ಕೆ ಮಾರಕವಾದ ಸುಪ್ರೀಂ ತೀರ್ಪು]
ಭಾರತದಲ್ಲಿ ಎಲ್ಲಾ ಕಡೆ ಒಂದೇ ರೀತಿಯ ಒಂದೇ ರೀತಿಯ ಪಠ್ಯ ಶಿಕ್ಷಣವನ್ನು ಜಾರಿಗೆ ತಂದಲ್ಲಿ ಈ ರೀತಿಯ ಸಮಸ್ಯೆಯನ್ನು ನಿವಾರಿಸಹುದು. ಸರ್ಕಾರ ಮತ್ತೊಮ್ಮೆ ಮೇಲ್ಮನವಿ ಸಲ್ಲಿಸಿದರೂ ಸರ್ಕಾರದ ಪರವಾಗಿ ತೀರ್ಪು ಬರುವ ಸಾಧ್ಯತೆ ಕಡಿಮೆ ಎಂದು ಅವರು ಹೇಳಿದರು.[ಕನ್ನಡ ಮಾಧ್ಯಮ ಕಡ್ಡಾಯವಲ್ಲ : ಸುಪ್ರೀಂ ತೀರ್ಪು]

ಬಡ ಪೋಷಕರ ಮೇಲೆ ಸರ್ಕಾರ ಬಲವಂತವಾಗಿ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಕಲಿಕಾ ಮಾಧ್ಯಮವಾಗಿ 'ಮಾತೃಭಾಷೆಯನ್ನು' ಹೇರಿದ್ದೇ ತಪ್ಪು. ಬಳಿಕ ಈ ಸಮಸ್ಯೆ ನಿವಾರಣೆಗೆ ಸರ್ಕಾರ ಸಂಧಾನವೇನದರೂ ನಡೆಸುತ್ತಿದ್ದರೆ ಪರಿಹಾರ ಮಾಡಬಹುದಿತ್ತು. ಈಗ ಸುಪ್ರೀಂ ಕೋರ್ಟ್ ಕಲಿಕಾ ಮಾಧ್ಯಮ ಪೋಷಕರ ಹಕ್ಕು ಎಂದು ಹೇಳಿರುವುದರಿಂದ ಸಾಕಷ್ಟು ಸಂಖ್ಯೆಯ ಬಡ ಪೋಷಕರಿಗೆ ನೆಮ್ಮದಿ ಸಿಕ್ಕಿದಂತಾಗಿದೆ ಎಂದು ನುಡಿದರು.[ಸುಪ್ರೀಂ ತೀರ್ಪು : ಅನಂತಮೂರ್ತಿ ಹೇಳಿದ್ದೇನು?]
ಜಾಗತೀಕರಣದ ಸಂದರ್ಭದಲ್ಲಿ ಪೋಷಕರಿಗೆ ಮಕ್ಕಳ ಭವಿಷ್ಯ ಮುಖ್ಯ. ಯಾವ ಮಾಧ್ಯಮದಲ್ಲಿ ತಮ್ಮ ಮಕ್ಕಳು ಶಿಕ್ಷಣ ಪಡೆದರೆ ಒಳ್ಳೇದಾಗುತ್ತದೆ ಎನ್ನುವ ಬಗ್ಗೆ ಪೋಷಕರಿಗೆ ಚೆನ್ನಾಗಿ ಅರಿವಿದೆ. ರಾಜ್ಯ ಸರ್ಕಾರ ಈ ವಿಚಾರವನ್ನು ಬದಿಗೊತ್ತಿ, ಕನ್ನಡ ಮಾಧ್ಯಮದ ಶಾಲೆ ಅಭಿವೃದ್ಧಿಯ ಕಡೆ ಮೊದಲು ಗಮನ ಕೊಡಲಿ ಎಂದು ಅವರು ಸರ್ಕಾರಕ್ಕೆಸಲಹೆ ನೀಡಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications