ಮಲ್ಲೇಶ್ವರಂ ಕೇಂದ್ರೀಯ ವಿದ್ಯಾಲಯದಲ್ಲಿ ಪಾಳಿ ತರಗತಿ: ವಿರೋಧ
ಬೆಂಗಳೂರು, ಜುಲೈ 2: ಮಲ್ಲೇಶ್ವರದ ಕೇಂದ್ರೀಯ ವಿದ್ಯಾಲಯದಲ್ಲಿ ಎರಡು ಪಾಳಿಯಲ್ಲಿ ತರಗತಿ ಆರಂಭಿಸುವ ಪ್ರಸ್ತಾಪಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರೆ ಬರೆದಿದ್ದಾರೆ.
ಈ ತೀರ್ಮಾನವನ್ನು ಈ ವರ್ಷಕ್ಕೆ ಕೈಬಿಟ್ಟು ಮುಂದಿನ ವರ್ಷಕ್ಕೆ ಮುಂದೂಡಲು ಒತ್ತಾಯಿಸಲಾಗುತ್ತಿದೆ. ಈ ಸಾಲಿನಲ್ಇ ಈಗಾಗಲೇ ತರಗತಿ ಆರಂಭವಾಗಿದ್ದು, ಜು.18ರಿಂದ ಪಾಳಿಯಲ್ಲಿ ತರಗತಿಗಳು ನಡೆಯಲಿವೆ ಎಂಬ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಮುಂಜಾನೆಯೇ ಮಕ್ಕಳನ್ನು ಕಳುಹಿಸುವುದು ಹೇಗೆ ಎಂಬ ಆತಂಕ ಪೋಷಕರಲ್ಲಿ ಮೂಡಿದೆ. ಮಲ್ಲೇಶ್ವರಂ ಕೇಂದ್ರೀಯ ವಿದ್ಯಾಲಯದಲ್ಲಿ ಸದ್ಯ 1-12ನೇ ತರಗತಿವರೆಗೆ ಬೋಧಿಸಲಾಗುತ್ತಿದೆ. ಸುಮಾರು 1,800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಬೆಳಗ್ಗೆ 8.30ರಿಂದ ಮಧ್ಯಾಹ್ನ 2.30ರವರೆಗೆ ತರಗತಿಗಳು ನಡೆಯುತ್ತಿದೆ. ಎಎರಡು ಪಾಳಿಯ ತರಗತಿಗಳು ಆರಂಭವಾದಲ್ಲಿ ಈಗಿರುವ ವ್ಯಾಸಂಗನಿರತ ಎಲ್ಲ ವಿದ್ಯಾರ್ಥಿಗಳು ಮೊದಲ ಪಾಳಿಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 12.25ರವರೆಗಿನ ಸಮಯಕ್ಕೆ ಬದಲಾಯಿಸಿಕೊಳ್ಳಬೇಕು.
ಬೆಳಗ್ಗೆ 6.55ರೊಳಗೆ ಶಾಲೆ ಆವರಣ ತಲುಪಬೇಕಾಗುತ್ತದೆ. ಬೆಳಗ್ಗೆ 8.30ರಿಂದ ಇಪ್ಪತ್ತು ನಿಮಿಷಗಳ ಮಧ್ಯಂತರ ಅವಧಿ ನೀಡಲಾಗುತ್ತದೆ. ತಿಂಡಿಗೆ ಬೆಳಗ್ಗೆ 10.35ರಿಂದ ಹತ್ತು ನಿಮಿಷ ಮಾತ್ರ ಕಾಲಾವಕಾಶ ನೀಡಲಾಗುತ್ತದೆ.
ಎರಡನೇ ಪಾಳಿಯ ವೇಳಾಪಟ್ಟಿ ಮಧ್ಯಾಹ್ನ 12.30ರಿಂದ ಸಂಜೆ 6ರವರೆಗೆ ಇರಲಿದೆ. ಮಧ್ಯಾಹ್ನ 2 ರಿಂದ ಇಪ್ಪತ್ತು ನಿಮಿಷ ಮಧ್ಯಂತರ ಅವಧಿ ಹಾಗೂ 4.05ರಿಂದ ಹತ್ತು ನಿಮಿಷಮಧ್ಯಂತರ ಅವಧಿ ನಿಗದಿ ಮಾಡಲಾಗಿದೆ. ಆದರೆ ಮಧ್ಯಾಹ್ನ ಊಟಕ್ಕೆ ಯಾವ ಸಮಯವೆಂದು ಸುತ್ತೋಲೆಯಲ್ಲಿ ನಮೂದಿಸಿಲ್ಲ.
ಈ ಪಾಳಿಕೆ ಸೇರುವ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹೊಸದಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆದಿದೆ. ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ 6.55ಕ್ಕೆ ಮಕ್ಕಳನ್ನು ಬಿಡುವ ಕುರಿತು ಆತಂಕ ಪ್ರಾರಂಭವಾಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್ಇ ಸ್ಪಷ್ಟನೆ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications