ಮಲ್ಲೇಶ್ವರಂ ಕೇಂದ್ರೀಯ ವಿದ್ಯಾಲಯದಲ್ಲಿ ಪಾಳಿ ತರಗತಿ: ವಿರೋಧ
ಬೆಂಗಳೂರು, ಜುಲೈ 2: ಮಲ್ಲೇಶ್ವರದ ಕೇಂದ್ರೀಯ ವಿದ್ಯಾಲಯದಲ್ಲಿ ಎರಡು ಪಾಳಿಯಲ್ಲಿ ತರಗತಿ ಆರಂಭಿಸುವ ಪ್ರಸ್ತಾಪಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರೆ ಬರೆದಿದ್ದಾರೆ.
ಈ ತೀರ್ಮಾನವನ್ನು ಈ ವರ್ಷಕ್ಕೆ ಕೈಬಿಟ್ಟು ಮುಂದಿನ ವರ್ಷಕ್ಕೆ ಮುಂದೂಡಲು ಒತ್ತಾಯಿಸಲಾಗುತ್ತಿದೆ. ಈ ಸಾಲಿನಲ್ಇ ಈಗಾಗಲೇ ತರಗತಿ ಆರಂಭವಾಗಿದ್ದು, ಜು.18ರಿಂದ ಪಾಳಿಯಲ್ಲಿ ತರಗತಿಗಳು ನಡೆಯಲಿವೆ ಎಂಬ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಮುಂಜಾನೆಯೇ ಮಕ್ಕಳನ್ನು ಕಳುಹಿಸುವುದು ಹೇಗೆ ಎಂಬ ಆತಂಕ ಪೋಷಕರಲ್ಲಿ ಮೂಡಿದೆ. ಮಲ್ಲೇಶ್ವರಂ ಕೇಂದ್ರೀಯ ವಿದ್ಯಾಲಯದಲ್ಲಿ ಸದ್ಯ 1-12ನೇ ತರಗತಿವರೆಗೆ ಬೋಧಿಸಲಾಗುತ್ತಿದೆ. ಸುಮಾರು 1,800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಬೆಳಗ್ಗೆ 8.30ರಿಂದ ಮಧ್ಯಾಹ್ನ 2.30ರವರೆಗೆ ತರಗತಿಗಳು ನಡೆಯುತ್ತಿದೆ. ಎಎರಡು ಪಾಳಿಯ ತರಗತಿಗಳು ಆರಂಭವಾದಲ್ಲಿ ಈಗಿರುವ ವ್ಯಾಸಂಗನಿರತ ಎಲ್ಲ ವಿದ್ಯಾರ್ಥಿಗಳು ಮೊದಲ ಪಾಳಿಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 12.25ರವರೆಗಿನ ಸಮಯಕ್ಕೆ ಬದಲಾಯಿಸಿಕೊಳ್ಳಬೇಕು.
ಬೆಳಗ್ಗೆ 6.55ರೊಳಗೆ ಶಾಲೆ ಆವರಣ ತಲುಪಬೇಕಾಗುತ್ತದೆ. ಬೆಳಗ್ಗೆ 8.30ರಿಂದ ಇಪ್ಪತ್ತು ನಿಮಿಷಗಳ ಮಧ್ಯಂತರ ಅವಧಿ ನೀಡಲಾಗುತ್ತದೆ. ತಿಂಡಿಗೆ ಬೆಳಗ್ಗೆ 10.35ರಿಂದ ಹತ್ತು ನಿಮಿಷ ಮಾತ್ರ ಕಾಲಾವಕಾಶ ನೀಡಲಾಗುತ್ತದೆ.
ಎರಡನೇ ಪಾಳಿಯ ವೇಳಾಪಟ್ಟಿ ಮಧ್ಯಾಹ್ನ 12.30ರಿಂದ ಸಂಜೆ 6ರವರೆಗೆ ಇರಲಿದೆ. ಮಧ್ಯಾಹ್ನ 2 ರಿಂದ ಇಪ್ಪತ್ತು ನಿಮಿಷ ಮಧ್ಯಂತರ ಅವಧಿ ಹಾಗೂ 4.05ರಿಂದ ಹತ್ತು ನಿಮಿಷಮಧ್ಯಂತರ ಅವಧಿ ನಿಗದಿ ಮಾಡಲಾಗಿದೆ. ಆದರೆ ಮಧ್ಯಾಹ್ನ ಊಟಕ್ಕೆ ಯಾವ ಸಮಯವೆಂದು ಸುತ್ತೋಲೆಯಲ್ಲಿ ನಮೂದಿಸಿಲ್ಲ.
ಈ ಪಾಳಿಕೆ ಸೇರುವ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹೊಸದಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆದಿದೆ. ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ 6.55ಕ್ಕೆ ಮಕ್ಕಳನ್ನು ಬಿಡುವ ಕುರಿತು ಆತಂಕ ಪ್ರಾರಂಭವಾಗಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ












Click it and Unblock the Notifications