ಮಲ್ಲೇಶ್ವರ ಕೇಂದ್ರೀಯ ವಿದ್ಯಾಲಯದಲ್ಲಿ 2 ಪಾಳಿ ತರಗತಿ: ಪೋಷಕರು ಗರಂ
ಬೆಂಗಳೂರು, ಜು.20: ಮಲ್ಲೇಶ್ವರದ ಕೇಂದ್ರೀಯ ವಿದ್ಯಾಲಯದಲ್ಲಿ ಜು.19ರಿಂದ ಎರಡು ಪಾಳಿ ತರಗತಿಗಳನ್ನು ಆರಂಭಿಸಲಾಗಿದ್ದು, ಪೋಷಕರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಮುಂಜಾನೆಯೇ ಮಕ್ಕಳನ್ನು ಕಳುಹಿಸುವುದು ಹೇಗೆ ಎಂಬ ಆತಂಕ ಪೋಷಕರಲ್ಲಿ ಮೂಡಿದೆ. ಮಲ್ಲೇಶ್ವರಂ ಕೇಂದ್ರೀಯ ವಿದ್ಯಾಲಯದಲ್ಲಿ ಸದ್ಯ 1-12ನೇ ತರಗತಿವರೆಗೆ ಬೋಧಿಸಲಾಗುತ್ತಿದೆ. ಸುಮಾರು 1,800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಕೇಂದ್ರೀಯ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯಿಂದ ದೇಶಾದ್ಯಂತ ಒಟ್ಟಾರೆ ನಾಲ್ಕು ಕೇಂದ್ರೀಯ ವಿದ್ಯಾಲಯಗಳಲ್ಲಿ ಎರಡು ಪಾಳಿಯಲ್ಲಿ ತರಗತಿಗಳನ್ನು ನಡೆಸಲು ಅನುಮತಿ ನೀಡಿದೆ.

ಅದರಲ್ಲಿ ರಾಜ್ಯದಿಂದ ಮಲ್ಲೇಶ್ವರ ಕೇಂದ್ರೀಯ ವಿದ್ಯಾಲಯ ಕೂಡ ಆಯ್ಕೆಯಾಗಿತ್ತು.ಅದರಂತೆ ಗುರುವಾರದಿಂದ ಎರಡು ಪಾಳಿಯಲ್ಲಿ ಈ ಶಾಲೆ ಕಾರ್ಯ ನಿರ್ವಹಿಸಿದೆ. ಎರಡು ಪಾಳಿಗಳನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಈಗ ಶಾಲೆಯ ಮೊದಲ 8.30ರಿಂದ ಮಧ್ಯಾಹ್ನ 2.40ರವರೆಗೂ ಕಾರ್ಯ ನಿರ್ವಹಿಸುತ್ತಿತ್ತು. ಎರಡು ಪಾಳಿ ಜಾರಿ ಹಿನ್ನೆಲೆಯಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 12.45ರವರೆಗೂ ನಡೆಯಲಿದೆ.
ಪ್ರಸ್ತುತ 1ರಿಂದ 12 ನೇ ತರಗತಿಯವರೆಗೆ ಮೊದಲ ಪಾಳಿಯಲ್ಲಿ 1836 ವಿದ್ಯಾರ್ಥಿಗಳು ಹಾಗೂ ಎರಡನೇ ಪಾಳಿಯಲ್ಲಿ 632 ವ್ಯಾಸಂಗ ಮಾಡುತ್ತಿದ್ದಾರೆ. ಮಲ್ಲೇಶ್ವರಕ್ಕೆ ಕೇಂದ್ರೀಯ ವಿದ್ಯಾಲಯಕ್ಕೆ ಈ ಬಾರಿ ಪ್ರವೇಶ ಬಯಸಿ 3634 ಅರ್ಜಿ ಸಲ್ಲಿಕೆಯಾಗಿದ್ದವು. ಈ ಪೈಕಿ 632ಕ್ಕೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6.55ರೊಳಗೆ ಶಾಲೆ ಆವರಣ ತಲುಪಬೇಕಾಗುತ್ತದೆ. ಬೆಳಗ್ಗೆ 8.30ರಿಂದ ಇಪ್ಪತ್ತು ನಿಮಿಷಗಳ ಮಧ್ಯಂತರ ಅವಧಿ ನೀಡಲಾಗುತ್ತದೆ. ತಿಂಡಿಗೆ ಬೆಳಗ್ಗೆ 10.35ರಿಂದ ಹತ್ತು ನಿಮಿಷ ಮಾತ್ರ ಕಾಲಾವಕಾಶ ನೀಡಲಾಗುತ್ತದೆ. ಎರಡನೇ ಪಾಳಿಯ ವೇಳಾಪಟ್ಟಿ ಮಧ್ಯಾಹ್ನ 12.30ರಿಂದ ಸಂಜೆ 6ರವರೆಗೆ ಇರಲಿದೆ. ಮಧ್ಯಾಹ್ನ 2 ರಿಂದ ಇಪ್ಪತ್ತು ನಿಮಿಷ ಮಧ್ಯಂತರ ಅವಧಿ ಹಾಗೂ 4.05 ರಿಂದ ಹತ್ತು ನಿಮಿಷ ಮಧ್ಯಂತರ ಅವಧಿ ನಿಗದಿ ಮಾಡಲಾಗಿದೆ.
ಆದರೆ ಮಧ್ಯಾಹ್ನ ಊಟಕ್ಕೆ ಯಾವ ಸಮಯವೆಂದು ಸುತ್ತೋಲೆಯಲ್ಲಿ ನಮೂದಿಸಿಲ್ಲ. ಈ ಪಾಳಿಕೆ ಸೇರುವ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹೊಸದಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆದಿದೆ. ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ 6.55ಕ್ಕೆ ಮಕ್ಕಳನ್ನು ಬಿಡುವ ಕುರಿತು ಆತಂಕ ಪ್ರಾರಂಭವಾಗಿದೆ.
-
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್ಇ ಸ್ಪಷ್ಟನೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications