ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕ್ಯಾರ್ ಚಂಡಮಾರುತ ಪ್ರಭಾವ, ಬೆಂಗಳೂರಲ್ಲೂ ಶುರುವಾಯ್ತು ಮಳೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 25: ಕ್ಯಾರ್ ಚಂಡಮಾರುತ ಪ್ರಭಾವ ಬೆಂಗಳೂರಲ್ಲೂ ಭಾರಿ ಮಳೆ ಶುರುವಾಗಿದೆ.

ಜಯನಗರ, ಬನಶಂಕರಿ, ವಿಧಾನಸೌಧ, ಮಲ್ಲೇಶ್ವರ, ಕೆಂಗೇರಿ, ಉತ್ತರ ಹಳ್ಳಿ, ಮೈಸೂರು ರಸ್ತೆ, ಯಲಹಂಕ , ಹೆಬ್ಬಾಳ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ. ಇಂದು ಸಂಜೆಯೂ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕ್ಯಾರ್ ಚಂಡಮಾರುತ; ಅಸ್ತವ್ಯಸ್ತಗೊಂಡ ಮಂಗಳೂರು, ಉಡುಪಿಕ್ಯಾರ್ ಚಂಡಮಾರುತ; ಅಸ್ತವ್ಯಸ್ತಗೊಂಡ ಮಂಗಳೂರು, ಉಡುಪಿ

ಕಳೆದ ಮೂರ್ನಾಲ್ಕು ದಿನಗಳಿಂದ ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡ ಮಾರುತವಾಗಿ ಪರಿವರ್ತನೆಗೊಂಡಿದ್ದು, ಗೋವಾ, ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಬರುತ್ತಿದೆ.

Kyarr Cyclone Impact Rain In Bengaluru

ಜೊತೆಗೆ ಕಡಲ ತೀರದಲ್ಲಿ ಗಂಟೆಗೆ 45-60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರಿಗೆ ಸಮುದ್ರದ ಬಳಿ ಬಾರದಂತೆ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಹೊರತುಪಡಿಸಿದರೆ ಘಟ್ಟ ಪ್ರದೇಶದ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಉಡುಪಿ , ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಅ. 25 ಹಾಗೂ 26 ಎರಡು ದಿನ 115ರಿಂದ 205 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಮುಂದಿನ 48 ಗಂಟೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

English summary
Cyclone Kyarr Influence Heavy Rain in Bengaluru Next two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X