ಪ್ರತಿಭಟನೆಗೆ ಅವಕಾಶ ಕೊಡದ ಪೊಲೀಸ್ ಆಯುಕ್ತರ ವಿರುದ್ಧ ಕಾರ್ಮಿಕರ ಆಕ್ರೋಶ
ಬೆಂಗಳೂರು, ಜನವರಿ 08: ಕೇಂದ್ರ ಸರ್ಕಾರದ ವಿರುದ್ದ ಭಾರತ್ ಬಂದ್ ಮಾಡಲು ಕರೆ ಕೊಟ್ಟಿದ್ದ ಕಾರ್ಮಿಕ ಸಂಘಟನೆಯವರಿಗೆ ಪ್ರತಿಭಟನೆಗೆ ಅವಕಾಶ ಕೊಡದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವಿರುದ್ಧ ಕಾರ್ಮಿಕ ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉದ್ಯಾನ ನಗರಿಯಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಭಟನೆಯ ಕಿಚ್ಚು ಎಲ್ಲಿಯೂ ಜಾಸ್ತಿಯಾಗಿಲ್ಲ. ಟೌನ್ ಹಾಲ್ ಎದುರು ಪ್ರತಿಭಟನೆ ಮಾಡಲು ಅವಕಾಶ ನಿರಾಕರಿಸಿದ್ದಕ್ಕೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಭಾರತ ಬಂದ್ನಲ್ಲಿ ಪಾಲ್ಗೊಂಡ ಕಾರ್ಮಿಕರಿಗೆ ಅಭಿನಂದನೆ ತಿಳಿಸಿದ ರಾಹುಲ್ ಗಾಂಧಿ
ಕೇಂದ್ರ ಸರ್ಕಾರದ ಬದಲು ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡಿದ್ದಕ್ಕೆ ಮತ್ತು ಮೆರವಣಿಗೆ ಮಾಡಲು ಅವಕಾಶ ಕೊಡದ ಪೊಲೀಸ್ ಆಯುಕ್ತರ ವಿರುದ್ಧ ಕಿಡಿಕಾರಿದ್ದಾರೆ.
ಭಾರತ್ ಬಂದ್; ಕರ್ನಾಟಕದ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ?
ಕಾರ್ಮಿಕ ಸಂಘಟನೆ ಮುಖಂಡ ಮೀನಾಕ್ಷಿ ಸುಂದರಂ ಮಾತನಾಡಿ, ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಕಾಪಿ ಮಾಡಿ ಐಪಿಎಸ್ ಪಾಸ್ ಮಾಡಿರಬೇಕು. ಅಧಿಕಾರದಲ್ಲಿರುವವರು ಹೇಳಿದ ಹಾಗೆ ಕೇಳುತ್ತಾರೆ. ನಾವು ಮನಸ್ಸು ಮಾಡಿದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಅಸಮಾಧಾನಗೊಂಡರು