Namma Clinics: ತಡವಾಗಿ ಆರಂಭವಾದ ನಮ್ಮ ಕ್ಲಿನಿಕ್ಗಳು, ಆದರೂ ಸಿಬ್ಬಂದಿ ಕೊರತೆ
ನಮ್ಮ ಚಿಕಿತ್ಸಾಲಯಗಳಲ್ಲಿ ಚಿಕಿತ್ಸೆಗಾಗಿ ಸಾಕಷ್ಟು ಮಂದಿ ಬರುತ್ತಿದ್ದು, ಇಲ್ಲಿ ಗ್ರೂಪ್ ಡಿ ಸಿಬ್ಬಂದಿಯನ್ನು ನೇಮಿಸಿಲ್ಲ
ಬೆಂಗಳೂರು, ಫೆಬ್ರವರಿ. 12: ಸಿಲಿಕಾನ್ ಸಿಟಿಯಲ್ಲಿ ನಮ್ಮ ಕ್ಲಿನಿಕ್ಗಳ ಉದ್ಘಾಟನೆ ಈಗಾಗಲೇ ಹೇಳಿದ ಸಮಯಕ್ಕಿಂತ ಹೆಚ್ಚು ವಿಳಂಬವಾಗಿ ನಡೆದಿದೆ. ಆದರೂ ಅದರ ಸೌಕರ್ಕಗಳಲ್ಲಿಯೂ ಅನೇಕ ಕೊರತೆಗಳು ಎದ್ದು ಕಾಣುತ್ತಿವೆ. ಸಂಪೂರ್ಣ ಸಿದ್ಧತೆಯಿಂದ ಕ್ಲಿನಿಕ್ ಸಾರ್ವಜನಿಕರಿಗಾಗಿ ತೆರೆಯಲಾಗಿದೆ ಎಂದು ಹೇಳಿದ್ದರೂ ಕೂಡ ಹಲವು ಕ್ಲಿನಿಕ್ಗಳು ಸಾಕಷ್ಟು ಸಿಬ್ಬಂದಿ ಕೊರತೆ ಸೇರಿದಂತೆ ಕೆಲವು ಸಮಸ್ಯೆಗಳಿಂದ ಪರದಾಡುತ್ತಿವೆ.
ನಮ್ಮ ಚಿಕಿತ್ಸಾಲಯಗಳಲ್ಲಿ ಚಿಕಿತ್ಸೆಗಾಗಿ ಸಾಕಷ್ಟು ಮಂದಿ ಬರುತ್ತಿದ್ದು, ಇಲ್ಲಿ ಗ್ರೂಪ್ ಡಿ ಸಿಬ್ಬಂದಿಯನ್ನು ನೇಮಿಸಿಲ್ಲ, ಇದರಿಂದ ಕೆಲಸ ಮಾಡಲು ಸಾಕಷ್ಟು ತೊಂದರೆಯಾಗಿದೆ ಎಂದು ವೈದ್ಯಾಧಿಕಾರಿಗಳು ದೂರಿದ್ದರೆ. ಇನ್ನು ಕೆಲವೆಡೆ ಸ್ಟಾಫ್ ನರ್ಸ್ಗಳು ಮತ್ತು ಲ್ಯಾಬ್ ಟೆಕ್ನಿಷಿಯನ್ಸ್ಗಳು ಬಂದಿಲ್ಲ.
ಶಾಂತಲಾ ನಗರದ ನಮ್ಮ ಕ್ಲಿನಿಕ್ನ ವೈದ್ಯಾಧಿಕಾರಿಯೊಬ್ಬರು, ತಮ್ಮ ಕ್ಲಿನಿಕ್ಗೆ ಇನ್ನೂ ಸ್ಟಾಫ್ ನರ್ಸ್ ಇಲ್ಲ ಎಂದಿದ್ದಾರೆ. ಜೀವನ್ ಭೀಮಾ ನಗರದಲ್ಲಿರುವ ಕ್ಲಿನಿಕ್ನ ಮತ್ತೊಬ್ಬ ವೈದ್ಯಾಧಿಕಾರಿ, ಆವರಣವನ್ನು ಸ್ವಚ್ಛವಾಗಿಡಲು ಗ್ರೂಪ್ ಡಿ ಉದ್ಯೋಗಿಯನ್ನು ನೇಮಿಸಲಾಗಿಲ್ಲ ಇದರಿಂದ ಸ್ವಚ್ಛತೆ ಮಾಯವಾಗಿದೆ ಎಂದು ದೂರಿದ್ದಾರೆ.

ನಮ್ಮ ಕ್ಲಿನಿಕ್ಗಳಲ್ಲಿ ಕೆವಲ ಮಾನವ ಸಂಪನ್ಮೂಲದ ಕೊರತೆಯಷ್ಟೇಯಲ್ಲ, ಈಗ ತಾನೇ ಉದ್ಘಾಟನೆಯಾಗಿರುವ ಈ ಚಿಕಿತ್ಸಾಲಯಗಳಲ್ಲಿ ಸಮರ್ಪಕವಾದ ಸೌಲಭ್ಯಗಳೂ ಇಲ್ಲ. ಕೆಲವು ಕೇಂದ್ರಗಳಲ್ಲಿ ವೈದ್ಯರ ಪರೀಕ್ಷಾ ಕೊಠಡಿಗಳಲ್ಲಿ ಹಾಸಿಗೆಗಳು ಮಾಯಾವಾಗಿವೆ. ಆದರೆ ವೈದ್ಯಾಧಿಕಾರಿಗಳು ಮೇಜಿನ ಮೇಲೆ ಬೆಡ್ ಸ್ಪ್ರೆಡ್ಗಳನ್ನು ಹಾಕುವ ಮೂಲಕ ತಮ್ಮ ಕೆಲಸ ನಿರ್ವಹಿಸುತ್ತಿದ್ದಾರೆ.
ಆದರೆ ಈ ಆರೋಪಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ.ತ್ರಿಲೋಕ್ ಚಂದ್ರ ನಿರಾಕರಿಸಿದ್ದಾರೆ. ವೈದ್ಯರ ಪರೀಕ್ಷಾ ಕೊಠಡಿಗಳಲ್ಲಿ ಟೇಬಲ್ಗೆ ಹಾಸಿಗೆಗಳಿಲ್ಲ ಎಂಬುದನ್ನು ಅಲ್ಲಗೆಲೆದು, ಎಲ್ಲಾ ಚಿಕಿತ್ಸಾಲಯಗಳು ಸುಸಜ್ಜಿತವಾಗಿವೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆರೋಗ್ಯಾಧಿಕಾರಿ ಡಾ.ಎ.ಎನ್.ಬಾಲಸುಂದರ್ ಮಾತನಾಡಿ, ಬೆಂಗಳೂರಿನಲ್ಲಿ ಎಲ್ಲಾ 108 ಕ್ಲಿನಿಕ್ಗಳನ್ನು ಉದ್ಘಾಟಿಸಲು ಕೇವಲ ಮೂರು ದಿನಗಳ ನೋಟಿಸ್ ನೀಡಲಾಗಿದೆ. ಇತರ ಎಲ್ಲ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ನಮ್ಮ ಕ್ಲಿನಿಕ್ಗಳನ್ನು ಸಿದ್ಧಪಡಿಸಲಾಗಿದ್ದರೂ, ಉದ್ಘಾಟನೆಗೆ ಮುನ್ನ ವೆಚ್ಚವನ್ನು ತಪ್ಪಿಸಲು ಗ್ರೂಪ್ ಡಿ ಉದ್ಯೋಗಿಗಳನ್ನು ನೇಮಿಸಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಗ್ರೂಪ್ ಡಿ ಕಾರ್ಮಿಕರನ್ನು ನೇಮಿಸಿಕೊಳ್ಳಲು ಗುತ್ತಿಗೆದಾರರು ಸಿಬ್ಬಂದಿಯನ್ನು ಗುರುತಿಸಿ ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಕ್ಲಿನಿಕ್ಗಳು ಉದ್ಘಾಟನೆಗೊಂಡಿರುವುದರಿಂದ ಈ ಸಮಸ್ಯೆಗಳು ತಾತ್ಕಾಲಿಕವಾಗಿವೆ. ಕೆಲವೇ ವಾರಗಳಲ್ಲಿ, ಎಲ್ಲಾ ಕ್ಲಿನಿಕ್ಗಳು ಸುಗಮವಾಗಿ ನಡೆಯುತ್ತವೆ. ವಿಶೇಷವಾಗಿ ಬಡ ಜನರಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಕ್ಲಿನಿಕ್ಗಳು ಉತ್ತಮ ಯೋಜನೆ ಎಂದು ಹಲವಾರು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮ ಕ್ಲಿನಿಕ್ಗಳಲ್ಲಿ ಗರ್ಭಧಾರಣೆ, ಪ್ರಸವಪೂರ್ವ ಆರೈಕೆ, ನವಜಾತ ಶಿಶುಗಳ ಆರೈಕೆ, ಬಾಲ್ಯ ಮತ್ತು ಹದಿಹರೆಯದವರ ಆರೈಕೆ, ಸಾರ್ವತ್ರಿಕ ರೋಗನಿರೋಧಕ ಸೇವೆಗಳು, ಕುಟುಂಬ ಕಲ್ಯಾಣ, ಗರ್ಭನಿರೋಧಕಗಳು, ಸಾಂಕ್ರಾಮಿಕ ರೋಗ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಕಾಯಿಲೆಗಳ ಆರೈಕೆ, ಮಧುಮೇಹ, ರಕ್ತದೊತ್ತಡ , ದೀರ್ಘಕಾಲದ ಕಾಯಿಲೆಗಳು ಮತ್ತು ಬಾಯಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಉಚಿತವಾಗಿ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುತ್ತದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?










Click it and Unblock the Notifications