ದ್ರಾಕ್ಷಿ ಬೆಳೆಗೆ ಕೋಲ್ಡ್ ಸ್ಟೋರೆಜ್ಗಳ ಅಲಭ್ಯತೆಯಿಂದ ರಾಜ್ಯಕ್ಕೆ ಸಾವಿರಾರು ಕೋಟಿ ನಷ್ಟ; ಜೆಡಿಎಸ್ ಆತಂಕ
ರಾಜ್ಯದಲ್ಲಿ ವರ್ಷಕ್ಕೆ ಬೆಳೆಯುವ ದ್ರಾಕ್ಷಿಯಲ್ಲಿ 73% ನಷ್ಟು ವಿಜಯಪುರ ಜಿಲ್ಲೆಯೊಂದರಿಂದಲೇ ಬರುತ್ತಿದೆ. ಕೋಲ್ಡ್ ಸ್ಟೋರೆಜ್ ಗಳಿಲ್ಲದಿರುವುದರಿಂದ ರೈತರು ದ್ರಾಕ್ಷಿಯನ್ನು ತಮ್ಮ ಜಿಲ್ಲೆಯಿಂದ ನೆರೆ ರಾಜ್ಯಕ್ಕೆ ಕಳಿಸುತ್ತಿದ್ದಾರೆ.
ಬೆಂಗಳೂರು, ಫೆಬ್ರವರಿ. 23: "ದ್ರಾಕ್ಷಿಗಳನ್ನು ಸಂಗ್ರಹಿಸಿಡಲು ರಾಜ್ಯದಲ್ಲಿ ಅಗತ್ಯವಾಗಿರುವ ಕೋಲ್ಡ್ ಸ್ಟೋರೆಜ್ಗಳ ಅಲಭ್ಯತೆಯಿಂದಾಗಿ ನಮ್ಮ ರಾಜ್ಯವು ಸಾವಿರಾರು ಕೋಟಿ ರೂಪಾಯಿಗಳ ವ್ಯಾಪಾರ - ವಹಿವಾಟು ಕಳೆದುಕೊಳ್ಳುತ್ತಿದೆ. ಇದರಿಂದಾಗಿ ದ್ರಾಕ್ಷಿ ಬೆಳೆಗಾರರು ಅನಿವಾರ್ಯವಾಗಿ ಹಣ್ಣನ್ನು ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾರೆ" ಎಂದು ಜಾತ್ಯಾತೀತ ಜನತಾದಳ ಅಸಮಾಧಾನ ವ್ಯಕ್ತಪಡಿಸಿದೆ.
ದ್ರಾಕ್ಷಿಗಳನ್ನು ಸಂಗ್ರಹಿಸಿಡಲು ಅಗತ್ಯವಾಗಿರುವ ಕೋಲ್ಡ್ ಸ್ಟೋರೆಜ್ ಗಳ ಅಲಭ್ಯತೆಯಿಂದಾಗಿ ನಮ್ಮ ರಾಜ್ಯವು ಸಾವಿರಾರು ಕೋಟಿ ರೂ. ಗಳ ವ್ಯಾಪಾರ-ವಹಿವಾಟು ಕಳೆದುಕೊಳ್ಳುತ್ತಿದೆ. ಇದರಿಂದಾಗಿ ಬೆಳೆಗಾರರು ಅನಿವಾರ್ಯವಾಗಿ ಹಣ್ಣನ್ನು ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾರೆ.1/4 pic.twitter.com/C0MU0e67Wn
— Janata Dal Secular (@JanataDal_S) February 23, 2023
ಈ ಬಗ್ಗೆ ಸರಣಿ ಜಾತ್ಯಾತೀತ ಜನತಾದಳ ತನ್ನ ಅಧೀಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ. "ವಿಜಯಪುರದ ನಾಗಪಟ್ಟಣದ ಜೆಡಿಎಸ್ ಶಾಸಕ ದೇವಾನಂದ್ ಚೌಹಾಣ್ ಅವರು ಈ ಸಂಬಂಧ ಅಧಿವೇಶನದಲ್ಲಿ ಪ್ರಶ್ನೆ ಎತ್ತಿದ ನಂತರ ಈ ಮಾಹಿತಿ ಬಹಿರಂಗವಾಗಿದೆ. ತೋಟಗಾರಿಕೆ ಸಚಿವ ಮುನಿರತ್ನ ಅವರು ದ್ರಾಕ್ಷಿಯೊಂದರಿಂದ 4,000 ಕೋಟಿಯಷ್ಟು ವ್ಯಾಪಾರ - ವಹಿವಾಟು ರಾಜ್ಯದಿಂದ ಕೈತಪ್ಪಿಹೋಗುತ್ತಿದೆ ಎಂದಿದ್ದಾರೆ" ಎಂದಿದೆ.

"ರಾಜ್ಯದಲ್ಲಿ ವರ್ಷಕ್ಕೆ ಬೆಳೆಯುವ ದ್ರಾಕ್ಷಿಯಲ್ಲಿ 73% ನಷ್ಟು ವಿಜಯಪುರ ಜಿಲ್ಲೆಯೊಂದರಿಂದಲೇ ಬರುತ್ತಿದೆ. ಕೋಲ್ಡ್ ಸ್ಟೋರೆಜ್ ಗಳಿಲ್ಲದಿರುವುದರಿಂದ ರೈತರು ದ್ರಾಕ್ಷಿಯನ್ನು ತಮ್ಮ ಜಿಲ್ಲೆಯಿಂದ ನೆರೆ ರಾಜ್ಯಕ್ಕೆ ಕಳಿಸುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ದೇವಾನಂದ್ ಚೌಹಾಣ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಈ ಕಡೆ ಗಮನಹರಿಸಬೇಕಿದೆ" ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೇತೃತ್ವದ ಜಾತ್ಯಾತೀತ ಜನತಾದಳ ಆಗ್ರಹಿಸಿದೆ.
"ಇಷ್ಟು ದೊಡ್ಡ ಮೊತ್ತದ ವ್ಯಾಪಾರ ನಮ್ಮ ರಾಜ್ಯದಲ್ಲೆ ನಡೆದರೆ ಸಾವಿರಾರು ಕುಟುಂಬಗಳು ಬದುಕು ಕಟ್ಟಿಕೊಳ್ಳಬಹುದು. ಬೆಳೆಗಾರರಿಗೆ ಹೆಚ್ಚಿನ ಆದಾಯ ಸಿಗುತ್ತದೆ. ರಾಜ್ಯ ಸರ್ಕಾರದ ಖಜಾನೆಗೆ ತೆರಿಗೆ ಹರಿದು ಬರಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಇಷ್ಟೊತ್ತಿಗಾಗಲೇ, ಕೋಲ್ಡ್ ಸ್ಟೋರೆಜ್ ಗಳನ್ನು ನಿರ್ಮಿಸಬೇಕಿತ್ತು" ಎಂದು ಭಾರತೀಯ ಜನತಾ ಪಕ್ಷ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನು, ಬುಧವಾರ ಲಾಲ್ಬಾಗ್ನಲ್ಲಿರುವ ಹಾಪ್ಕಾಮ್ಸ್ ಪ್ರಧಾನ ಕಚೇರಿಯಲ್ಲಿ 'ದ್ರಾಕ್ಷಿ - ಕಲ್ಲಂಗಡಿ ಮಾರಾಟ ಮೇಳ- 2023' ಉದ್ಘಾಟಿಸಲಾಗಿದೆ. ತೋಟಗಾರಿಕೆ ಸಚಿವ ಮುನಿರತ್ನ ಮೇಳಕ್ಕೆ ಚಾಲನೆ ನೀಡಿದ್ದಾರೆ. ಚಿಕ್ಕಬಳ್ಳಾಪುರ, ವಿಜಯಪುರ, ಬಾಗಲಕೋಟೆ, ಕೋಲಾರ, ಕೊಪ್ಪಳ ಭಾಗದ ಎಲ್ಲಾ ರೈತರಿಂದ ಟನ್ ಗಟ್ಟಲೆ ದ್ರಾಕ್ಷಿ, ಕಲ್ಲಂಗಡಿಯನ್ನು ಖರೀದಿ ಮಾಡಲಾಗಿದೆ. ಸುಮಾರು 13 ವಿಧದ ದ್ರಾಕ್ಷಿಗಳು ಮತ್ತು ನಾಲ್ಕು ವಿಧದ ಕರಬೂಜುಗಳು ಮೇಳದಲ್ಲಿ ಲಭ್ಯವಿವೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications