ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿವೇಶನ ಕಲಹದಿಂದ ಮನನೊಂದು ವಕೀಲೆ ಆತ್ಮಹತ್ಯೆ

|
Google Oneindia Kannada News

ಬೆಂಗಳೂರು, ಜನವರಿ 2: ನಿವೇಶನ ವಿಚಾರಕ್ಕೆ ಬೇಸರಗೊಂಡು ವಕೀಲೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಕಾರ್ಪೊರೇಟರ್ ಕಿರುಕುಳವೇ ಆತ್ಮಹತ್ಯೆಗೆ ಕಾರಣವೆನ್ನುವ ಆರೋಪಗಳು ಕೇಳಿಬಂದಿವೆ. ಉದಯನಗರದ ವಿವೇಕಾನಂದ ಸ್ಟ್ರೀಟ್ ನಿವಾಸಿ ಧರಣಿ(27) ಮೃತ ವಕೀಲೆ.

ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಎ ನಾರಾಯಣಪುರ ವಾರ್ಡ್ ಕಾರ್ಪೊರೇಟರ್ ಸುರೇಶ್ ಕಿರುಕುಳದಿಂದ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಉದಯನಗರದಲ್ಲಿ ಧರಣಿ ತಮ್ಮ ತಾಯಿಯೊಂದಿಗೆ ನೆಲೆಸಿದ್ದರು.

Lady lawyer suicide case, complaint against corporator

ಅಕ್ಕಪಕ್ಕದ ನಿವಾಸಿಗಳು ಮತ್ತು ಧರಣಿ ಕುಟುಂಬಕ್ಕೂ ನೀರು, ಕಸ ಹೀಗೆ ಸಣ್ಣ ಸಣ್ಣ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ 2 ತಿಂಗಳ ಹಿಂದೆ ಧರಣಿ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಸಾಲದ ಹೊರೆ: ಮಂಡ್ಯದಲ್ಲಿ ಜೆಡಿಎಸ್ ಮುಖಂಡ ಆತ್ಮಹತ್ಯೆ ಸಾಲದ ಹೊರೆ: ಮಂಡ್ಯದಲ್ಲಿ ಜೆಡಿಎಸ್ ಮುಖಂಡ ಆತ್ಮಹತ್ಯೆ

ಸುರೇಶ್ ಸಂಧಾನಕ್ಕೆ ಯತ್ನಿಸಿದ್ದರು, ಈ ವೇಳೆ ಧರಣಿ ಕುಟುಂಬಕ್ಕೆ ಅಸಮಾಧಾನವಾಗಿತ್ತು. ಮಂಗಳವಾರ ಮತ್ತೆ ಧರಣಿ ಮತ್ತು ಸ್ಥಳೀಯರಿಗೆ ಜಗಳವಾಗಿತ್ತು. ತಾಯಿ ಜೊತೆಯೂ ಜಗಳವಾಡಿ ರಾತ್ರಿ 11.30ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕ ನಿವೇಶನ ಮಾರಾಟಕ್ಕೂ ಒತ್ತಡ ಹಾಕುತ್ತಿದ್ದರು ಎನ್ನಲಾಗಿದೆ.

English summary
Lady lawyer make suicide and her family members filed a complaint against BBMP corporator over humiliation by him about site.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X