ವಕೀಲರಿಂದ ನಾಟಕ ಪ್ರದರ್ಶನ, ಬಂದ ಹಣ ಕೊಡಗು ಸಂತ್ರಸ್ತರಿಗೆ
ಬೆಂಗಳೂರು, ಆಗಸ್ಟ್ 22: ಸದಾ ಗಂಭೀರ ಮುಖಭಾವದ, ಕೋರ್ಟು, ಕಟ್ಟಳೆಗಳ ಜಂಜಾಟದಲ್ಲಿ ಪ್ರತಿದಿನ ದೂಡುವ ವಕೀಲರು ಹೊಸದೊಂದು ಪ್ರಯೋಗಕ್ಕೆ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.
ನಗರದ ಲಹರಿ ವಕೀಲರ ವೇದಿಕೆಯಿಂದ ಆಗಸ್ಟ್ 24-25 ರಂದು ಎರಡು ದಿನಗಳ ಏಕಾಂಕ ನಾಟಕ ಸ್ಪರ್ಧೆಯನ್ನು ನಗರದ ರವಿಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.
ರಾಜ್ಯದ ವಿವಿಧ ಭಾಗಗಳಿಂದ ವಕೀಲರನ್ನು ಸೇರಿಸಿ ಏಕಾಂಕ ನಾಟಕಗಳ ಸ್ಪರ್ದೆಯನ್ನು ಏರ್ಪಡಿಸುವ ಮೂಲಕ ಲಹರಿ ವಕೀಲರ ವೇದಿಕೆ ರಂಗ ಭೂಮಿಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಎರಡು ದಿನಗಳ ಕಾಲ ನಡೆಯುವ ಲಹರಿ ಲಾಯರ್ಸ್ ಆಕ್ಟ್ -2018 ನಾಟಕ ಪ್ರದರ್ಶನವು ಇದೇ ಅಗಸ್ಟ್ 24 ರಂದು ಉದ್ಘಾಟನೆಗೊಳ್ಳಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಶ್ರೀ ಉದಯ ಹೊಳ್ಳ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಧಾರವಾಡ, ಶಿವಮೊಗ್ಗ, ದಾವರಣಗೆರೆ, ಮೈಸೂರು ಹಾಗೂ ಬೆಂಗಳೂರಿನ ಐದು ತಂಡಗಳ ನಡುವೆ ಮೊದಲ ಸ್ಥಾನಕ್ಕೆ ಪೈಪೋಟಿ ನಡೆಯಲಿದೆ. ವಿಜೇತರಾಗುವ ಮೊದಲ ತಂಡ ರೂ. 75 ಸಾವಿರ ನಗದು ಬಹುಮಾನ ಹಾಗೂ ಪಾರಿತೋಷಕವನ್ನು ನೀಡಲಾಗುತ್ತಿದೆ.
ದ್ವಿತೀಯ ಬಹುಮಾನವಾಗಿ ರೂ.50 ಸಾವಿರ ನಗದು ಹಾಗೂ ಪಾರಿತೋಷಕ ಮತ್ತು ತೃತೀಯ ಬಹುಮಾನವಾಗಿ ರೂ. 25 ಸಾವಿರ ನಗದು ಮತ್ತು ಪಾರಿತೋಷಕ ನೀಡಲಾಗುವುದು. ಅಲ್ಲದೇ, ಅತ್ಯುತ್ತಮ ನಿರ್ದೇಶನಕ್ಕೆ ರೂ. 10 ಸಾವಿರ. ಅತ್ಯುತ್ತಮ ನಟ/ನಟಿ, ಅತ್ಯುತ್ತಮ ರಂಗಪರಿಕರ ಮತ್ತು ರಂಗ ಸಜ್ಜಿಕೆ, ಅತ್ಯುತ್ತಮ ವಸ್ತ್ರ ವಿನ್ಯಾಸಕ್ಕೆ ತಲಾ ರೂ. 5 ಸಾವಿರ ನಗದು ಮತ್ತು ಪಾರಿತೋಷಕ ನೀಡಲಾಗುವುದು ಎಂದು ಲಹರಿ ವಕೀಲರ ವೇದಿಕೆಯ ಅಧ್ಯಕ್ಷೆ ಪಿ.ಅನು ಚೆಂಗಪ್ಪ ತಿಳಿಸಿದ್ದಾರೆ.
ನಾಟಕ ವಿಕ್ಷಣೆಗೆ ರೂ.50 ಪ್ರವೇಶದರವನ್ನು ನಿಗದಿಪಡಿಸಲಾಗಿದ್ದು ಸಂಗ್ರಹವಾಗುವ ಸಂಪೂರ್ಣ ಹಣವನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ನೀಡಲು ಲಹರಿ ವಕೀಲರ ವೇದಿಕೆ ನಿರ್ಧರಿಸಿದೆ ಎಂದು ವೇದಿಕೆಯ ಸಂಚಾಲಕ ಶ್ರೀಕಾಂತ ಪಾಟೀಲ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications