ಕಸ ಸಮಸ್ಯೆ ಕುರಿತು ಬಿಬಿಎಂಪಿ ಶ್ವೇತ ಪತ್ರ ಹೊರಡಿಸಲಿ
ಬೆಂಗಳೂರು, ನ. 20: ನಗರದ ತ್ಯಾಜ್ಯ ನಿರ್ವಹಣೆ ಸಮಸ್ಯೆ ಸಂಪೂರ್ಣ ಬಗೆಹರಿದಿಲ್ಲ. ಆದ್ದರಿಂದ ಸಮಸ್ಯೆ ನಿವಾರಣೆಗೆ ಬಿಬಿಎಂಪಿ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಲೋಕಸತ್ತಾ ಪಕ್ಷ ಆಗ್ರಹಿಸಿದೆ.
ಸುದ್ದಿಗೋಷ್ಠಿ ನಡೆಸಿದ ಪಕ್ಷದ ಮುಖಂಡ ಸಿ.ಎನ್. ದೀಪಕ್, ಪ್ರತಿವರ್ಷ ನೂರಾರು ಕೋಟಿ ರೂ.ಗಳನ್ನು ಕಸ ನಿರ್ವಹಣೆಗಾಗಿ ವೆಚ್ಚ ಮಾಡಲಾಗುತ್ತಿದೆ. ವೆಚ್ಚ ಕಡಿಮೆ ಮಾಡುವ ಕುರಿತು ಹಾಗೂ ಪರಿಸರ ಸ್ನೇಹಿ ಕ್ರಮ ಕೈಗೊಳ್ಳುವ ಕುರಿತು ಇದುವರೆಗೂ ಯೋಚನೆ ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ. [ಮಂಡೂರಿನಲ್ಲಿ ಕಸ ಹಾಕಲ್ಲ]
ಬೆಂಗಳೂರಿನ ಸುತ್ತಲಿನ ಪ್ರದೇಶಗಳಲ್ಲಿ ಕಸ ಸುರಿಯುವ ಮೂಲಕ ಮತ್ತೆ ಹಳೆಯ ಪದ್ಧತಿಗೇ ಬಿಬಿಎಂಪಿ ಮೊರೆ ಹೋಗಿದೆ ದೀಪಕ್ ಟೀಕಿಸಿದರು. ಕಸವನ್ನು ಮನೆಯಲ್ಲಿಯೇ ವಿಂಗಡಿಸುವ ಕುರಿತು ಕಾಯ್ದೆ ಜಾರಿಗೆ ತರಬೇಕು. ಇಲ್ಲದಿದ್ದರೆ ನ. 29ರಂದು ಬಿಬಿಎಂಪಿ ಕಚೇರಿ ಎದುರು ಕಸ ಸುರಿದು ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. [ಸ್ಯಾನ್ ಫ್ರಾನ್ಸಿಸ್ಕೋ ನೆರವು]
ಪಕ್ಷದ ಮುಖಂಡರಾದ ರೋಹಿಣಿ ಚಂದ್ರಕಾಂತ, ಡಾ. ಮೀನಾಕ್ಷಿ ಭರತ್, ರವಿಕುಮಾರ್, ಫಣಿಸಾಯಿ ಭಾರದ್ವಾಜ್ ಇದ್ದರು.

ಕಸ ಸಂಸ್ಕರಣ ಘಟಕ ಶಾಶ್ವತ ಪರಿಹಾರವೇ?
ನಗರದಲ್ಲಿ ಪ್ರತಿದಿನ ಉತ್ಪಾದನೆಯಾಗುತ್ತಿರುವ ಕಸಗಳನ್ನು ಡೊಡ್ಡಬಳ್ಳಾಪುರ ತಾಲೂಕಿನ ಚಿಗರನಹಳ್ಳಿಯಲ್ಲಿರುವ ಕಸ ಸಂಸ್ಕರಣ ಘಟಕಕ್ಕೆ ಕಳುಹಿಸಲಾಗುತ್ತಿದೆ. 15 ಎಕರೆಯಷ್ಟು ವಿಸ್ತೀರ್ಣದ ಪ್ರದೇಶದಲ್ಲಿ ಪ್ರತಿದಿನ 450 ಟನ್ಗಳಷ್ಟು ಕಸವನ್ನು ಇಲ್ಲಿ ಸಂಸ್ಕರಿಸಲಾಗುತ್ತಿದೆ. ಆದರೆ, ಇದು ಶಾಶ್ವತ ಪರಿಹಾರವೇ ಎಂಬುದನ್ನು ಸರ್ಕಾರ ಖಚಿತಪಡಿಸಿಲ್ಲ. [ಕಸ ಸಮಸ್ಯೆ ನಿವಾರಣೆಗೆ ಗಡುವು]
ಸಂಸ್ಕರಣೆ ಸಾಮರ್ಥ್ಯವನ್ನು 500 ಟನ್ಗೆ ಹೆಚ್ಚಿಸುವುದಾಗಿ ಸರ್ಕಾರ ತಿಳಿಸಿದ್ದರೂ, ಬೆಂಗಳೂರಿನ ಒಟ್ಟೂ ಕಸ ಸಂಸ್ಕರಣೆ ಇಲ್ಲಿ ಸಾಧ್ಯವೇ ಎಂಬುದು ತಿಳಿದಿಲ್ಲ. ಪ್ಲಾಸ್ಟಿಕ್, ಗಾಜು, ಲೋಹಗಳನ್ನು ಬೇರ್ಪಡಿಸಲು ಮನೆಗಳಿಗೇ ಸೂಚಿಸುವುದಾಗಿ ತಿಳಿಸಿದ್ದ ಬಿಬಿಎಂಪಿ ಇದುವರೆಗೂ ಈ ಕುರಿತು ಕ್ರಮ ಕೈಗೊಂಡಿಲ್ಲ.[ಚಿಗರನ ಹಳ್ಳಿಯಲ್ಲಿ ಸಂಸ್ಕರಣಗೊಳ್ಳುತ್ತಿದೆ ಕಸ]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications