ಕಸ ಸಮಸ್ಯೆ ಕುರಿತು ಬಿಬಿಎಂಪಿ ಶ್ವೇತ ಪತ್ರ ಹೊರಡಿಸಲಿ
ಬೆಂಗಳೂರು, ನ. 20: ನಗರದ ತ್ಯಾಜ್ಯ ನಿರ್ವಹಣೆ ಸಮಸ್ಯೆ ಸಂಪೂರ್ಣ ಬಗೆಹರಿದಿಲ್ಲ. ಆದ್ದರಿಂದ ಸಮಸ್ಯೆ ನಿವಾರಣೆಗೆ ಬಿಬಿಎಂಪಿ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಲೋಕಸತ್ತಾ ಪಕ್ಷ ಆಗ್ರಹಿಸಿದೆ.
ಸುದ್ದಿಗೋಷ್ಠಿ ನಡೆಸಿದ ಪಕ್ಷದ ಮುಖಂಡ ಸಿ.ಎನ್. ದೀಪಕ್, ಪ್ರತಿವರ್ಷ ನೂರಾರು ಕೋಟಿ ರೂ.ಗಳನ್ನು ಕಸ ನಿರ್ವಹಣೆಗಾಗಿ ವೆಚ್ಚ ಮಾಡಲಾಗುತ್ತಿದೆ. ವೆಚ್ಚ ಕಡಿಮೆ ಮಾಡುವ ಕುರಿತು ಹಾಗೂ ಪರಿಸರ ಸ್ನೇಹಿ ಕ್ರಮ ಕೈಗೊಳ್ಳುವ ಕುರಿತು ಇದುವರೆಗೂ ಯೋಚನೆ ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ. [ಮಂಡೂರಿನಲ್ಲಿ ಕಸ ಹಾಕಲ್ಲ]
ಬೆಂಗಳೂರಿನ ಸುತ್ತಲಿನ ಪ್ರದೇಶಗಳಲ್ಲಿ ಕಸ ಸುರಿಯುವ ಮೂಲಕ ಮತ್ತೆ ಹಳೆಯ ಪದ್ಧತಿಗೇ ಬಿಬಿಎಂಪಿ ಮೊರೆ ಹೋಗಿದೆ ದೀಪಕ್ ಟೀಕಿಸಿದರು. ಕಸವನ್ನು ಮನೆಯಲ್ಲಿಯೇ ವಿಂಗಡಿಸುವ ಕುರಿತು ಕಾಯ್ದೆ ಜಾರಿಗೆ ತರಬೇಕು. ಇಲ್ಲದಿದ್ದರೆ ನ. 29ರಂದು ಬಿಬಿಎಂಪಿ ಕಚೇರಿ ಎದುರು ಕಸ ಸುರಿದು ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. [ಸ್ಯಾನ್ ಫ್ರಾನ್ಸಿಸ್ಕೋ ನೆರವು]
ಪಕ್ಷದ ಮುಖಂಡರಾದ ರೋಹಿಣಿ ಚಂದ್ರಕಾಂತ, ಡಾ. ಮೀನಾಕ್ಷಿ ಭರತ್, ರವಿಕುಮಾರ್, ಫಣಿಸಾಯಿ ಭಾರದ್ವಾಜ್ ಇದ್ದರು.

ಕಸ ಸಂಸ್ಕರಣ ಘಟಕ ಶಾಶ್ವತ ಪರಿಹಾರವೇ?
ನಗರದಲ್ಲಿ ಪ್ರತಿದಿನ ಉತ್ಪಾದನೆಯಾಗುತ್ತಿರುವ ಕಸಗಳನ್ನು ಡೊಡ್ಡಬಳ್ಳಾಪುರ ತಾಲೂಕಿನ ಚಿಗರನಹಳ್ಳಿಯಲ್ಲಿರುವ ಕಸ ಸಂಸ್ಕರಣ ಘಟಕಕ್ಕೆ ಕಳುಹಿಸಲಾಗುತ್ತಿದೆ. 15 ಎಕರೆಯಷ್ಟು ವಿಸ್ತೀರ್ಣದ ಪ್ರದೇಶದಲ್ಲಿ ಪ್ರತಿದಿನ 450 ಟನ್ಗಳಷ್ಟು ಕಸವನ್ನು ಇಲ್ಲಿ ಸಂಸ್ಕರಿಸಲಾಗುತ್ತಿದೆ. ಆದರೆ, ಇದು ಶಾಶ್ವತ ಪರಿಹಾರವೇ ಎಂಬುದನ್ನು ಸರ್ಕಾರ ಖಚಿತಪಡಿಸಿಲ್ಲ. [ಕಸ ಸಮಸ್ಯೆ ನಿವಾರಣೆಗೆ ಗಡುವು]
ಸಂಸ್ಕರಣೆ ಸಾಮರ್ಥ್ಯವನ್ನು 500 ಟನ್ಗೆ ಹೆಚ್ಚಿಸುವುದಾಗಿ ಸರ್ಕಾರ ತಿಳಿಸಿದ್ದರೂ, ಬೆಂಗಳೂರಿನ ಒಟ್ಟೂ ಕಸ ಸಂಸ್ಕರಣೆ ಇಲ್ಲಿ ಸಾಧ್ಯವೇ ಎಂಬುದು ತಿಳಿದಿಲ್ಲ. ಪ್ಲಾಸ್ಟಿಕ್, ಗಾಜು, ಲೋಹಗಳನ್ನು ಬೇರ್ಪಡಿಸಲು ಮನೆಗಳಿಗೇ ಸೂಚಿಸುವುದಾಗಿ ತಿಳಿಸಿದ್ದ ಬಿಬಿಎಂಪಿ ಇದುವರೆಗೂ ಈ ಕುರಿತು ಕ್ರಮ ಕೈಗೊಂಡಿಲ್ಲ.[ಚಿಗರನ ಹಳ್ಳಿಯಲ್ಲಿ ಸಂಸ್ಕರಣಗೊಳ್ಳುತ್ತಿದೆ ಕಸ]
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications