ಲಾಲ್ಬಾಗ್ ಕೆರೆಯಲ್ಲಿ ಇನ್ನುಮುಂದೆ ಜಲಚರಗಳು ಸುರಕ್ಷಿತ
ಬೆಂಗಳೂರು, ಏಪ್ರಿಲ್ 10: ಲಾಲ್ಬಾಗ್ನ ಕೆರೆಯ ನೀರನ್ನು ಶುದ್ಧಿಕರಣಗೊಳಿಸಲು ಕೆರೆಯಲ್ಲಿ ಎಂಟು ಏರಿಯೇಟರ್ಸ್ ಗಳನ್ನು ಅಳವಡಿಸಲಾಗಿದೆ.
ಮಲಿನಗೊಂಡು ಪಾಚಿಗಟ್ಟಿರುವ ಕೆರೆ ನೀರಿನಲ್ಲಿ ಆಮ್ಲಜನಕ ಕೊರತೆ ಇದ್ದು, ಇದಕ್ಕಾಗಿ ಏರಿಯೇಟರ್ಸ್ ಗಳನ್ನು ಅಳವಡಿಸಲಾಗಿದೆ. ಇವುಗಳು ಕೆರೆಯಲ್ಲಿ ಆಮ್ಲಜನಕ ಹೆಚ್ಚಿಸುವುದರಿಂದ ಜಲಚರಗಳ ಉಳಿವಿಗೆ ಕಾರಣವಾಗುತ್ತವೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಏರಿಯೇಟರ್ಸ್ ಗಳನ್ನು ಅಳವಡಿಕೆಗೆ ತಗಲುವ ವೆಚ್ಚ ಮತ್ತು ಮೂರು ವರ್ಷಗಳ ಕಾಲ ಅವುಗಳ ನಿರ್ವಹಣೆಯನ್ನು ಬಾಷ್ ಕಂಪನಿ ವಹಿಸಿಕೊಂಡಿದೆ. ಇದಕ್ಕೆ ಸರ್ಕಾರ ಕೂಡ ಒಪ್ಪಿಗೆ ನೀಡಿದೆ.

ಸದ್ಯ ಕೆರೆಯಲ್ಲಿ ಒಂಬತ್ತು ಏರಿಯೇಟರ್ ಗಳನ್ನು ಅಳವಡಿಸಲಾಗಿದೆ. ಸದ್ಯ 14 ಅಡಿ ಎತ್ತರದ ಎಂಟು ಸಾಮಾನ್ಯ ಏರಿಯೇಟರ್ ಗಳ ಅಳವಡಿಕೆ ಮಾಡಲಾಗಿದೆ. ನಾಳೆ 50 ಅಡಿ ಎತ್ತರದ ಒಂದು ಹೈ ಜೆಟ್ ಏರಿಯೇಟರ್ ಅನ್ನು ಅಳವಡಿಸಲಾಗುತ್ತದೆ. ಈ ಏರಿಯೇಟರ್ ಗಳ ಅಳವಡಿಕೆಯಿಂದಾಗಿ ಕೆರೆಯಲ್ಲಿ ಆಮ್ಲಜನಕದ ಪ್ರಮಾಣ ಹೆಚ್ಚಾಗಲಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಂ. ಜಗದೀಶ್ ತಿಳಿಸಿದ್ದಾರೆ.
ಏರಿಯೇಟರ್ಸ್ ಗಳು : ಸಾಮಾನ್ಯವಾಗಿ ಗಾಳಿಯಲ್ಲಿ ಕನಿಷ್ಠ ಶೇ.21ರಷ್ಟು ಆಮ್ಲಜನಕವಿರುತ್ತದೆ. ಆದರೆ ನೀರಿನಲ್ಲಿ ಕನಿಷ್ಠ ಶೇ. ನಾಲ್ಕರಿಂದ ಐದರಷ್ಟಿರಬೇಕು. ಆದರೆ ನೀರಿನಲ್ಲಿ ಆಮ್ಲಜನಕದ ಪ್ರಮಾಣ ಶೇ.4ಕ್ಕಿಂತ ಕಡಿಮೆಯಾದರೆ ಅಲ್ಲಿನ ಬ್ಯಾಕ್ಟೀರಿಯಾಗಳು ಸಾವನ್ನಪ್ಪುತ್ತವೆ.
ಇದರಿಂದ ನೀರಿನಲ್ಲಿ ಆಮ್ಲಜನಕ ತೀವ್ರ ಪ್ರಮಾಣದಲ್ಲಿ ಕಡಿಮೆಯಾಗತ್ತದೆ. ಆಗ ಕೆರೆಯೊಳಗೆ ಜೀವಿಸುವ ಇತರೆ ಜಲಚರಗಳು ಕೂಡ ಸಾವನ್ನಪ್ಪುತ್ತವೆ. ಹೀಗಾಗಿ ಕೆರೆಯೊಳಗೆ ಏರಿಯೇಟರ್ಗಳನ್ನು ಅಳವಡಿಸುವುದರಿಂದ ನೀರು ಕಾರಂಜಿಗಳ ರೀತಿ ಮೇಲಿಂದ ಕೆಳಗೆ ರಭಸವಾಗಿ ಬಿದ್ದಾಗ ಪರಸ್ಪರ ಅಲೆಗಳ ಮೂಲಕ ಆಮ್ಲಜನಕ ಉತ್ಪತ್ತಿಯಾಗುತ್ತದೆ. ಇದರಿಂದ ಜಲಚರಗಳಿಗೆ ಪ್ರಾಣಾಪಾಯ ಉಂಟಾಗುವುದಿಲ್ಲ.
-
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ











Click it and Unblock the Notifications