ಯುನೈಟೆಡ್ ಬೆಂಗಳೂರಿನಿಂದ ಶನಿವಾರ ಕೆರೆಗಳ ಪರಿಶೀಲನೆ
ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ ಕೆರೆಗಳ ಉಳಿವಿಗಾಗಿ ಹಾಗೂ ಅವುಗಳ ಸ್ವಚ್ಛತೆಗಾಗಿ ಉತ್ತಮ ಕೆಲಸ ಮಾಡುತ್ತಿರುವ ಯುನೈಟೆಡ್ ಬೆಂಗಳೂರು ಸಂಸ್ಥೆಯಿಂದ ಜೂನ್ ಹದಿನೇಳರ ಶನಿವಾರ ಕೂಡ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಮ್ಮ ಕೆರೆಗಳನ್ನು ಉಳಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಿರುವ ಈ ಕಾರ್ಯಕ್ರಮಗಳ ಉದ್ದೇಶ ಕೆರೆಗಳ ಪರಿಶೀಲನೆ.
ಬೆಳಗ್ಗೆ ಹತ್ತು ಗಂಟೆಗೆ ಗುಬ್ಬಲಾಳ ಕೆರೆ, ಹನ್ನೊಂದು ಗಂಟೆಗೆ ತಲಘಟ್ಟಪುರ ಕೆರೆ ಹಾಗೂ ಮಧ್ಯಾಹ್ನ ಹನ್ನೆರಡಕ್ಕೆ ಸೋಮಪುರ ಕೆರೆಯ ಪರಿಶೀಲನೆ ನಡೆಸಲಾಗುತ್ತದೆ. ಶನಿವಾರದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರೆಲ್ಲ ಪಾಲ್ಗೊಳ್ಳಲು ಅವಕಾಶವಿದೆ. ಬೆಂಗಳೂರಿನ ಕೆರೆಗಳನ್ನು ಉಳಿಸಲು ನೀವೂ ಕೈ ಜೋಡಿಸಬಹುದು.

ಇತ್ತೀಚೆಗಷ್ಟೇ ಬೆಂಗಳೂರಿನ ರಾಜರಾಜೇಶ್ವರಿ ನಗರದ ಹಲಗೆವಡೇರಹಳ್ಳಿ ಕೆರೆಯನ್ನು ಸ್ವಚ್ಛಗೊಳಿಸಿದ ಯುನೈಟೆಡ್ ಬೆಂಗಳೂರು ಸದಸ್ಯರು, ಅಲ್ಲಿ ಗಿಡಗಳನ್ನು ನೆಟ್ಟಿದ್ದರು. ಅಂದಿನ ಕಾರ್ಯಕ್ರಮದಲ್ಲಿ ಚಿತ್ರ ಕಲಾವಿದರಾದ ಗಣೇಶ್, ಮಾಳವಿಕಾ ಅವಿನಾಶ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
More From
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications