ಬೆಂಗಳೂರು; ಲಾಲ್ ಬಾಗ್ ಪ್ರವೇಶ, ಪಾರ್ಕಿಂಗ್ ಶುಲ್ಕ ಏರಿಕೆ
ಬೆಂಗಳೂರು, ಫೆಬ್ರವರಿ 02; ತೋಟಗಾರಿಕಾ ಇಲಾಖೆ ಬೆಂಗಳೂರಿನ ಲಾಲ್ ಬಾಗ್ ಪ್ರವೇಶ, ವಾಹನ ನಿಲುಗಡೆ ಶುಲ್ಕವನ್ನು ಏರಿಕೆ ಮಾಡಿ ಆದೇಶ ಹೊರಡಿಸಿದೆ. ಫೆಬ್ರವರಿ 2ರ ಮಂಗಳವಾರದಿಂದಲೇ ಹೊಸ ಆದೇಶ ಜಾರಿಗೆ ಬಂದಿದೆ.
ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಜಿ. ಕುಸುಮಾ ಈ ಕುರಿತು ಮಾಹಿತಿ ನೀಡಿದ್ದಾರೆ. "ದೇಶದ ಇತರೆ ಉದ್ಯಾನಗಳಲ್ಲಿ ಪ್ರವೇಶ ಶುಲ್ಕ 50 ರೂ. ಇದೆ. ಆದರೆ, ಸಾರ್ವಜನಿಕರಿಗೆ ಹೊರೆಯಾಗದಂತೆ ಕೇವಲ 5 ರೂ. ಹೆಚ್ಚಿಸಲಾಗಿದೆ" ಎಂಮದುದ ಹೇಳಿದ್ದಾರೆ.

ಸಮಿತಿಯ ಸಭೆಯಲ್ಲಿ ಚರ್ಚಿಸಿ ಪ್ರವೇಶ ಶುಲ್ಕ, ವಾಹನ ನಿಲುಗಡೆ ಶುಲ್ಕವನ್ನು ಹೆಚ್ಚಳ ಮಾಡಲು ತೀರ್ಮಾನ ಮಾಡಲಾಗಿದೆ. ಪರಿಷ್ಕೃತ ದರಗಳು ಮಂಗಳವಾರದಿಂದಲೇ ಜಾರಗೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದರ ಎಷ್ಟಾಗಿದೆ? : ವಯಸ್ಕರು ಲಾಲ್ ಬಾಗ್ಗೆ ಭೇಟಿ ನೀಡಲು 25 ರೂ. ಪ್ರವೇಶ ಶುಲ್ಕವನ್ನು ನೀಡಬೇಕಿತ್ತು. ಅದನ್ನು ಈಗ 30 ರೂ.ಗಳಿಗೆ ಏರಿಕೆ ಮಾಡಲಾಗಿದೆ.
ಮಕ್ಕಳಿಗೆ ಉದ್ಯಾನಕ್ಕೆ ಪ್ರವೇಶ ಉಚಿತವಾಗಿತ್ತು. ಈಗ 6-12 ವರ್ಷದ ಮಕ್ಕಳಿಗೆ 10 ರೂ. ಮತ್ತು 12 ವರ್ಷ ಮೇಲ್ಪಟ್ಟ ಮಕ್ಕಳಿಗೆ 30 ರೂ.ಪ್ರವೇಶ ದರವನ್ನು ನಿಗದಿ ಮಾಡಲಾಗಿದೆ.
ವಾಹನಗಳ ಪಾರ್ಕಿಂಗ್; ಲಾಲ್ ಬಾಗ್ನಲ್ಲಿ ವಾಹನಗಳ ಪ್ರವೇಶ ಶುಲ್ಕವನ್ನು ಸಹ 5 ರೂ. ಏರಿಕೆ ಮಾಡಲಾಗಿದೆ. ಮೂರು ಗಂಟೆಗಳ ಅವಧಿಗೆ ಈಗಿರುವ ದರಕ್ಕಿಂತ 5 ರೂ. ಹೆಚ್ಚು ಪಾವತಿ ಮಾಡಬೇಕು. ಮೂರು ಗಂಟೆಗಳ ಬಳಿಕ ಪ್ರತಿ ಗಂಟೆಗೆ 5 ರಿಂದ 25 ರೂ. ತನಕ ದರವನ್ನು ಹೆಚ್ಚಳ ಮಾಡಲಾಗಿದೆ.
ಪ್ರತಿವರ್ಷ ಲಾಲ್ ಬಾಗ್ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಫಲಪುಷ್ಪ ಪ್ರದರ್ಶನ ಇರುತ್ತಿತ್ತು. ಆದರೆ, ಕೋವಿಡ್ ಕಾರಣದಿಂದಾಗಿ ಈ ಬಾರಿ ಫಲಪುಷ್ಪ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications