ಬೆಂಗಳೂರು; ಲಾಲ್ ಬಾಗ್ ಪ್ರವೇಶ, ಪಾರ್ಕಿಂಗ್ ಶುಲ್ಕ ಏರಿಕೆ
ಬೆಂಗಳೂರು, ಫೆಬ್ರವರಿ 02; ತೋಟಗಾರಿಕಾ ಇಲಾಖೆ ಬೆಂಗಳೂರಿನ ಲಾಲ್ ಬಾಗ್ ಪ್ರವೇಶ, ವಾಹನ ನಿಲುಗಡೆ ಶುಲ್ಕವನ್ನು ಏರಿಕೆ ಮಾಡಿ ಆದೇಶ ಹೊರಡಿಸಿದೆ. ಫೆಬ್ರವರಿ 2ರ ಮಂಗಳವಾರದಿಂದಲೇ ಹೊಸ ಆದೇಶ ಜಾರಿಗೆ ಬಂದಿದೆ.
ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಜಿ. ಕುಸುಮಾ ಈ ಕುರಿತು ಮಾಹಿತಿ ನೀಡಿದ್ದಾರೆ. "ದೇಶದ ಇತರೆ ಉದ್ಯಾನಗಳಲ್ಲಿ ಪ್ರವೇಶ ಶುಲ್ಕ 50 ರೂ. ಇದೆ. ಆದರೆ, ಸಾರ್ವಜನಿಕರಿಗೆ ಹೊರೆಯಾಗದಂತೆ ಕೇವಲ 5 ರೂ. ಹೆಚ್ಚಿಸಲಾಗಿದೆ" ಎಂಮದುದ ಹೇಳಿದ್ದಾರೆ.

ಸಮಿತಿಯ ಸಭೆಯಲ್ಲಿ ಚರ್ಚಿಸಿ ಪ್ರವೇಶ ಶುಲ್ಕ, ವಾಹನ ನಿಲುಗಡೆ ಶುಲ್ಕವನ್ನು ಹೆಚ್ಚಳ ಮಾಡಲು ತೀರ್ಮಾನ ಮಾಡಲಾಗಿದೆ. ಪರಿಷ್ಕೃತ ದರಗಳು ಮಂಗಳವಾರದಿಂದಲೇ ಜಾರಗೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದರ ಎಷ್ಟಾಗಿದೆ? : ವಯಸ್ಕರು ಲಾಲ್ ಬಾಗ್ಗೆ ಭೇಟಿ ನೀಡಲು 25 ರೂ. ಪ್ರವೇಶ ಶುಲ್ಕವನ್ನು ನೀಡಬೇಕಿತ್ತು. ಅದನ್ನು ಈಗ 30 ರೂ.ಗಳಿಗೆ ಏರಿಕೆ ಮಾಡಲಾಗಿದೆ.
ಮಕ್ಕಳಿಗೆ ಉದ್ಯಾನಕ್ಕೆ ಪ್ರವೇಶ ಉಚಿತವಾಗಿತ್ತು. ಈಗ 6-12 ವರ್ಷದ ಮಕ್ಕಳಿಗೆ 10 ರೂ. ಮತ್ತು 12 ವರ್ಷ ಮೇಲ್ಪಟ್ಟ ಮಕ್ಕಳಿಗೆ 30 ರೂ.ಪ್ರವೇಶ ದರವನ್ನು ನಿಗದಿ ಮಾಡಲಾಗಿದೆ.
ವಾಹನಗಳ ಪಾರ್ಕಿಂಗ್; ಲಾಲ್ ಬಾಗ್ನಲ್ಲಿ ವಾಹನಗಳ ಪ್ರವೇಶ ಶುಲ್ಕವನ್ನು ಸಹ 5 ರೂ. ಏರಿಕೆ ಮಾಡಲಾಗಿದೆ. ಮೂರು ಗಂಟೆಗಳ ಅವಧಿಗೆ ಈಗಿರುವ ದರಕ್ಕಿಂತ 5 ರೂ. ಹೆಚ್ಚು ಪಾವತಿ ಮಾಡಬೇಕು. ಮೂರು ಗಂಟೆಗಳ ಬಳಿಕ ಪ್ರತಿ ಗಂಟೆಗೆ 5 ರಿಂದ 25 ರೂ. ತನಕ ದರವನ್ನು ಹೆಚ್ಚಳ ಮಾಡಲಾಗಿದೆ.
ಪ್ರತಿವರ್ಷ ಲಾಲ್ ಬಾಗ್ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಫಲಪುಷ್ಪ ಪ್ರದರ್ಶನ ಇರುತ್ತಿತ್ತು. ಆದರೆ, ಕೋವಿಡ್ ಕಾರಣದಿಂದಾಗಿ ಈ ಬಾರಿ ಫಲಪುಷ್ಪ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications