Lalbagh Entry Fee: ಲಾಲ್ಬಾಗ್ ಪ್ರವೇಶ ಶುಲ್ಕ ಏರಿಕೆ.! ಯಾರಿಗೆ ಎಷ್ಟು?-ಮಾಹಿತಿ ಇಲ್ಲಿದೆ
ಬೆಂಗಳೂರು, ನವೆಂಬರ್, 09: ಲಾಲ್ಬಾಗ್ ಬೆಂಗಳೂರಿನ ಸಸ್ಯಕಾಶಿ ಅಂತಲೇ ಪ್ರಸಿದ್ಧಿಯಾಗಿದೆ. ಅಲ್ಲದೆ, ಇದನ್ನು ಕೆಂಪು ತೋಟ ಅಂತಲೂ ಕರೆಯುತ್ತಾರೆ. ಇಲ್ಲಿದೆ ಪ್ರತಿದಿನವೂ ಸಾವಿರಾರು ಜನ ಅಂತೂ ಇಲ್ಲಿಗೆ ಭೇಟಿ ನೀಡುತ್ತಾರೆ.
ಇನ್ನು ತೋಟಗಾರಿಕೆ ಇಲಾಖೆಯು ಸಸ್ಯಕಾಶಿ ಲಾಲ್ಬಾಗ್ನಲ್ಲಿ ಸಾರ್ವಜನಿಕರ ಪ್ರವೇಶ ಶುಲ್ಕ ಹಾಗೂ ವಾಹನಗಳ ನಿಲುಗಡೆ ಶುಲ್ಕವನ್ನು ಹೆಚ್ಚಿಸಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ
ಎಷ್ಟು ದರ ಏರಿಕೆ?: ತೋಟಗಾರಿಕೆ ಇಲಾಖೆಯಿಂದ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಸಾರ್ವಜನಿಕರ ಪ್ರವೇಶ ಶುಲ್ಕವನ್ನು ಏರಿಕೆ ಮಾಡಲಾಗಿದೆ. ವಯಸ್ಕರಿಗೆ 50 ರೂಪಾಯಿ & ಮಕ್ಕಳಿಗೆ 20 ರೂಪಾಯಿ ಪ್ರವೇಶ ದರವನ್ನು ನಿಗದಿಪಡಿ ಮಾಡಲಾಗಿದೆ.

ಈ ಹಿಂದೆ ದರ ಎಷ್ಟಿತ್ತು?: 2018ರಲ್ಲಿ ನಿಗದಿಪಡಿಸಿದ್ದ ದರವನ್ನು 6 ವರ್ಷಗಳ ಬಳಿಕ ಏರಿಕೆ ಮಾಡಲಾಗಿದೆ. ಈ ಹಿಂದೆ ವಯಸ್ಕರರಿಗೆ ತಲಾ 30 ರೂಪಾಯಿ ಹಾಗೂ ಮಕ್ಕಳಿಗೆ 10 ರೂಪಾಯಿ ಪ್ರವೇಶ ದರ ಇತ್ತು. ಇದನ್ನು ಇದೀಗ ವಯಸ್ಕರಿಗೆ 50 ರೂಪಾಯಿ ಮತ್ತು ಮಕ್ಕಳಿಗೆ 20 ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ.
ವಾಹನಗಳಿಗೆ ದರ ಎಷ್ಟು?: ಅದೇ ರೀತಿಯಾಗಿ ವಾಹನ ನಿಲುಗಡೆ ದರದಲ್ಲಿಯೂ ಏರಿಕೆ ಮಾಡಲಾಗಿದೆ. ಕಾರು ನಿಲುಗಡೆಗೆ 40 ರೂಪಾಯಿ ಇದ್ದದ್ದನ್ನು 60 ರೂಪಾಯಿಗೆ, ಟೆಂಪೋ ಟ್ರಾವೆಲ್ 80-100 ರೂಪಾಯಿಗೆ ಮತ್ತು ಬಸ್ಗಳಿಗೆ 120-200 ರೂಪಾಯಿಗೆ ಏರಿಕೆ ಮಾಡಲಾಗಿದೆ. ಆದರೆ, ದ್ವಿಚಕ್ರ ವಾಹನ ನಿಲುಗಡೆ ದರ ಬದಲಾಯಿಸಿಲ್ಲ.
ನಿರ್ವಹಣಾ ಕಾರ್ಯ, ನೀರಿನ ನಿರ್ವಹಣೆ, ವಿದ್ಯುತ್ ಬಳಕೆ, ಭದ್ರತಾ ವ್ಯವಸ್ಥೆಯ ವೆಚ್ಚ ವರ್ಷದಿಂದ ವರ್ಷಕ್ಕೆ ದುಬಾರಿ ಆಗುತ್ತಿದೆ. ಜೊತೆಗೆ ಲಾಲ್ಬಾಗ್ಗೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದ್ದರಿಂದ ಉದ್ಯಾನದ ಸ್ವತ್ಛತೆ ಕಾರ್ಯವೂ ಅಧಿಕ ಆಗುತ್ತದೆ. ಈ ಹಿನ್ನೆಲೆ ಸಾರ್ವಜನಿಕರ ಪ್ರವೇಶ ದರ ಏರಿಕೆ ಮಾಡಲಾಗಿದೆ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್ ತಿಳಿಸಿದ್ದಾರೆ.
ಪರಿಸರ ತಜ್ಞ ಯಲ್ಲಪ್ಪ ರೆಡ್ಡಿ ಅಧ್ಯಕ್ಷತೆಯಲ್ಲಿ ಮೊದಲ ಸಭೆ ನಡೆಸಲಾಗಿದ್ದು, ಫ್ಲೈವುಡ್ ಸಂಶೋಧನಾ ಕೇಂದ್ರದಿಂದಲೂ ವರದಿ ಸಲ್ಲಿಸುವುದು ಬಾಕಿ ಇದೆ. ನಂತರ ಪುರಾತತ್ವ ಇಲಾಖಾ ತಜ್ಞರಿಂದ ಸಭೆ ಜರುಗಲಿದೆ. ಒಟ್ಟಾರೆ ತಜ್ಞರ ಸಲಹೆ ಮೇರೆಗೆ ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಗದೀಶ್ ತಿಳಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications