LalBagh Flower Show: ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಸಮಯ, ಟಿಕೆಟ್ ದರ, ಪಾರ್ಕಿಂಗ್ ವ್ಯವಸ್ಥೆ ಮಾಹಿತಿ
ಬೆಂಗಳೂರು, ಆಗಸ್ಟ್ 2: 214ನೇ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ಆಗಸ್ಟ್ 4 ರಿಂದ 15 ರವರೆಗೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಅವರ ಜೀವನ, ಸಾಧನೆ ಕುರಿತಂತೆ ಪುಷ್ಪ ನಮನ ಸಲ್ಲಿಸಲು ತೀರ್ಮಾನಿಸಲಾಗಿದೆ.
ಆಗಸ್ಟ್ 4ರಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ವಿಧಾನಸೌಧವನ್ನು ನಿರ್ಮಿಸಿದ ಹನುಮಂತಯ್ಯನವರ ಜೀವನ, ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆ, ಅವರ ಒಡನಾಟವನ್ನು ಬಿಂಬಿಸುವ ಪುಷ್ಪ ನಮನ ಇದಾಗಿರಲಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆಯಲ್ಲಿ ಭಾರತೀಯ ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಕರ್ನಾಟಕ ಏಕೀಕರಣದಲ್ಲಿ ಕೆಂಗಲ್ ಹನುಮಂತಯ್ಯ ಅವರ ಮಹತ್ವದ ಪಾತ್ರವನ್ನು ಪ್ರದರ್ಶಿಸಲಾಗುವುದು ಎಂದು ತೋಟಗಾರಿಕಾ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಸುದ್ದಿಗಾರರಿಗೆ ತಿಳಿಸಿದರು.
ವಿಧಾನಸೌಧ, ಶಿವಪುರ ಸತ್ಯಾಗ್ರಹ ಸೌಧ ಪ್ರತಿಕೃತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿರುವ ಕಾರ್ಯಕ್ರಮದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೋಟಗಾರಿಕೆ ಸಚಿವರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ತರಕಾರಿ ಕೆತ್ತನೆ ಮತ್ತು ಬೋನ್ಸಾಯ್ ಸ್ಪರ್ಧೆಗಳು ನಡೆಯಲಿವೆ.
10 ಲಕ್ಷ ಹೂವುಗಳನ್ನು ಬಳಸಲಿ ವಿಧಾನಸೌಧ ಮತ್ತು ಶಿವಪುರ ಸತ್ಯಾಗ್ರಹ ಸೌಧದ ಪ್ರತಿಕೃತಿಯನ್ನು ಈ ಬಾರಿ ನೋಡಬಹುದಾಗಿದೆ. ಇದಲ್ಲದೆ ಲಾಲ್ ಬಾಗ್ನಲ್ಲಿ ಹತ್ತು ಹೂವಿನ ಪಿರಮಿಡ್ಗಳು ಇರುತ್ತವೆ ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಹೇಳಿದರು.
ಪ್ರದರ್ಶನದಲ್ಲಿ 815 ಪ್ರದರ್ಶಕರು ಭಾಗವಹಿಸಲಿದ್ದು, 138 ಪ್ರದರ್ಶಕರು ಹೂವಿನ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಗಾರ್ಡನ್ ಸ್ಪರ್ಧೆಯಲ್ಲಿ 525 ಪ್ರದರ್ಶಕರು ಭಾಗವಹಿಸಲಿದ್ದು, 102 ಮಂದಿ ಗಾಜಿನ ಮನೆಯಲ್ಲಿ ಪ್ರದರ್ಶಿಸಲಿದ್ದಾರೆ.
ಪ್ರದರ್ಶನ ಸಮಯ, ಟಿಕೆಟ್ ದರ, ಪಾರ್ಕಿಂಗ್ ವ್ಯವಸ್ಥೆ
ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಲಾಲ್ಬಾಗ್ನ ಪಶ್ಚಿಮ ಗೇಟ್, ಈಸ್ಟ್ ಗೇಟ್ ಮತ್ತು ಸೌತ್ ಎಂಡ್ ಸರ್ಕಲ್ನಿಂದ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ, ಜೆಸಿ ರಸ್ತೆ ಬಿಬಿಎಂಪಿ ಸಂಕೀರ್ಣ ಮತ್ತು ಲಾಲ್ ಬಾಗ್ ರಸ್ತೆಯ ಅಲ್ ಅಮೀನ್ ಕಾಲೇಜಿನಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
ಭದ್ರತೆಗಾಗಿ, ಎಲ್ಲಾ ಗೇಟ್ಗಳಿಗೆ ಮೆಟಲ್ ಡಿಟೆಕ್ಟರ್ಗಳನ್ನು ಅಳವಡಿಸಲಾಗುವುದು ಮತ್ತು ಭದ್ರತಾ ಸಿಬ್ಬಂದಿ ಬ್ಯಾಗೇಜ್ ಅನ್ನು ಸ್ಕ್ಯಾನ್ ಮಾಡುತ್ತಾರೆ. ಆರೋಗ್ಯ ತುರ್ತು ಪರಿಸ್ಥಿತಿಗಳಿಗಾಗಿ, ಆಂಬ್ಯುಲೆನ್ಸ್ಗಳು ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಇದಲ್ಲದೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ.
ಆಗಸ್ಟ್ 4ರಿಂದ ಆಗಸ್ಟ್ 15ರವರೆಗೆ ಪಲಫುಷ್ಪ ಪ್ರದರ್ಶನ ನಡೆಯಲಿದ್ದು, ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ಇರುತ್ತದೆ. ಪ್ರವೇಶ ದರವನ್ನು ವಾರದ ದಿನಗಳಲ್ಲಿ ವಯಸ್ಕರಿಗೆ 70 ರೂಪಾಯಿ ಮತ್ತು ವಾರಾಂತ್ಯದಲ್ಲಿ 80 ರೂಪಾಯಿ ನಿಗದಿಪಡಿಸಲಾಗಿದೆ. 12 ವರ್ಷದೊಳಗಿನ ಮಕ್ಕಳಿಗೆ 30 ರೂಪಾಯಿ ನಿಗದಿ ಮಾಡಲಾಗಿದೆ.
-
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications