ಲಾಲ್ ಬಾಗ್ ನಲ್ಲಿ ಗಾಂಧಿಜೀ ಆತ್ಮಚರಿತ್ರೆಯ ಪುಸ್ತಕಗಳ ವಿತರಣೆ
ಬೆಂಗಳೂರು, ಜನವರಿ 20 2018: ಇಂದಿನ ತಲೆಮಾರಿನ ಮಕ್ಕಳಲ್ಲಿ ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಬಿತ್ತುವುದು ಬಹಳ ಅವಶ್ಯಕ ಎಂದು ಎ ಎಸ್ ಬಿ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಎಸ್ ಭಗೀರಥ್ ಅಭಿಪ್ರಾಯಪಟ್ಟರು.
ನಗರದ ಲಾಲ್ ಭಾಗ್ ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಿ ಮಾತನಾಡಿದರು.
ಸೇವೆ ಮತ್ತು ಸಹ ಬಾಳ್ವೆಯ ಪಾಠ ಭೋಧಿಸಿದ ಬಾಪೂಜಿಗೆ "ಬಾಪು ಕುಟೀರದ" ಮೂಲಕ ಪುಷ್ಪ ನಮನವನ್ನು ಎ ಎಸ್ ಬಿ ಸಲ್ಲಿಸುತ್ತಿದೆ. ಬಾಪು ಕುಟೀರದ ಪ್ರಾಯೋಕತ್ವ ವಹಿಸಿಕೊಳ್ಳುವುದು ನಮ್ಮ ಸೌಭಾಗ್ಯವೇ ಸರಿ.

ಇದೇ ರೀತಿ ಇಂದಿನ ಮಕ್ಕಳಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳ ಬಗ್ಗೆ ತಿಳುವಳಿಕೆ ಮೂಡಿಸುವುದು ನಮ್ಮ ಗುರಿಯಾಗಿದೆ. ಈ ಹಿನ್ನಲೆಯಲ್ಲಿ ಮಹಾತ್ಮ ಗಾಂಧೀಜಿವರ ಆತ್ಮ ಚರಿತ್ರೆಯ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸುತ್ತಿದ್ದೇವೆ. ಈ ಮಕ್ಕಳು ಗಾಂಧೀಜಿಯವರ ಜೀವನ ದ ಬಗ್ಗೆ ತಿಳಿದುಕೊಳ್ಳುವ ಮೂಲಕ ಆದರ್ಶ ವ್ಯಕ್ತಿಗಳಾಗಿ ಬೆಳೆಯಲಿ ಎನ್ನು ಆಶಯ ನಮ್ಮದು ಎಂದರು.
ಮಹಾತ್ಮ ಗಾಂಧೀಜಿಯವರ 150 ಜನ್ಮ ದಿನಾಚರಣೆಯ ವರ್ಷಾಚರಣೆಯ ಸಂಧರ್ಬದಲ್ಲಿ, ಮುಂದಿನ ದಿನಗಳಲ್ಲೂ ಶಾಲಾ ವಿದ್ಯಾರ್ಥಿಗಳಲ್ಲಿ ಬಾಪೂಜಿಯವರ ಸಂದೇಶಗಳನ್ನು ತಲುಪಿಸುವ ಕಾರ್ಯಕ್ಕೂ ಎ ಎಸ್ ಬಿ ಮುಂದಾಗಲಿದೆ ಎಂದರು.

ರಾಷ್ಟ್ರಪಿತ ಮಹಾತ್ಮಾಗಾಂಧೀಜಿಯವರ 150ನೇ ಜನ್ಮ ವರ್ಷದ ಅಂಗವಾಗಿ ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು ಗಾಂಧೀಜಿಗೆ ಮೀಸಲಿಡಲಾಗಿದೆ. ಇದು 209ನೇ ಫಲಪುಷ್ಪ ಪ್ರದರ್ಶನವಾಗಿದೆ. ಎಲ್ಲೆಲ್ಲೂ ಹೂಗಳ ಪರಿಮಳ, ಒಂದೆಡೆ ಗಾಂಧಿ ಪ್ರತಿಮೆ, ಇನ್ನೊಂದೆಡೆ ಸಬರಮತಿ ಆಶ್ರಮ, ಇನ್ನೊಂದೆಡೆ ಚರಕ, ಮತ್ತೊಂದೆಡೆ ಕಟ್ಟದನ್ನು ಕೇಳಬೇಡ, ಕೆಟ್ಟದ್ದನ್ನು ಮಾತನಾಡಬೇಡ, ಕೆಟ್ಟದ್ದನ್ನು ನೋಡಬೇಡ ಎಂದು ಸೂಚಿಸುವ ಮೂರು ಕೋತಿಗಳು ಕಂಡು ಬರುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications