ಲಾಲ್ ಬಾಗ್ ನಲ್ಲಿ ಗಾಂಧಿಜೀ ಆತ್ಮಚರಿತ್ರೆಯ ಪುಸ್ತಕಗಳ ವಿತರಣೆ
ಬೆಂಗಳೂರು, ಜನವರಿ 20 2018: ಇಂದಿನ ತಲೆಮಾರಿನ ಮಕ್ಕಳಲ್ಲಿ ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಬಿತ್ತುವುದು ಬಹಳ ಅವಶ್ಯಕ ಎಂದು ಎ ಎಸ್ ಬಿ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಎಸ್ ಭಗೀರಥ್ ಅಭಿಪ್ರಾಯಪಟ್ಟರು.
ನಗರದ ಲಾಲ್ ಭಾಗ್ ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಿ ಮಾತನಾಡಿದರು.
ಸೇವೆ ಮತ್ತು ಸಹ ಬಾಳ್ವೆಯ ಪಾಠ ಭೋಧಿಸಿದ ಬಾಪೂಜಿಗೆ "ಬಾಪು ಕುಟೀರದ" ಮೂಲಕ ಪುಷ್ಪ ನಮನವನ್ನು ಎ ಎಸ್ ಬಿ ಸಲ್ಲಿಸುತ್ತಿದೆ. ಬಾಪು ಕುಟೀರದ ಪ್ರಾಯೋಕತ್ವ ವಹಿಸಿಕೊಳ್ಳುವುದು ನಮ್ಮ ಸೌಭಾಗ್ಯವೇ ಸರಿ.

ಇದೇ ರೀತಿ ಇಂದಿನ ಮಕ್ಕಳಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳ ಬಗ್ಗೆ ತಿಳುವಳಿಕೆ ಮೂಡಿಸುವುದು ನಮ್ಮ ಗುರಿಯಾಗಿದೆ. ಈ ಹಿನ್ನಲೆಯಲ್ಲಿ ಮಹಾತ್ಮ ಗಾಂಧೀಜಿವರ ಆತ್ಮ ಚರಿತ್ರೆಯ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸುತ್ತಿದ್ದೇವೆ. ಈ ಮಕ್ಕಳು ಗಾಂಧೀಜಿಯವರ ಜೀವನ ದ ಬಗ್ಗೆ ತಿಳಿದುಕೊಳ್ಳುವ ಮೂಲಕ ಆದರ್ಶ ವ್ಯಕ್ತಿಗಳಾಗಿ ಬೆಳೆಯಲಿ ಎನ್ನು ಆಶಯ ನಮ್ಮದು ಎಂದರು.
ಮಹಾತ್ಮ ಗಾಂಧೀಜಿಯವರ 150 ಜನ್ಮ ದಿನಾಚರಣೆಯ ವರ್ಷಾಚರಣೆಯ ಸಂಧರ್ಬದಲ್ಲಿ, ಮುಂದಿನ ದಿನಗಳಲ್ಲೂ ಶಾಲಾ ವಿದ್ಯಾರ್ಥಿಗಳಲ್ಲಿ ಬಾಪೂಜಿಯವರ ಸಂದೇಶಗಳನ್ನು ತಲುಪಿಸುವ ಕಾರ್ಯಕ್ಕೂ ಎ ಎಸ್ ಬಿ ಮುಂದಾಗಲಿದೆ ಎಂದರು.

ರಾಷ್ಟ್ರಪಿತ ಮಹಾತ್ಮಾಗಾಂಧೀಜಿಯವರ 150ನೇ ಜನ್ಮ ವರ್ಷದ ಅಂಗವಾಗಿ ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು ಗಾಂಧೀಜಿಗೆ ಮೀಸಲಿಡಲಾಗಿದೆ. ಇದು 209ನೇ ಫಲಪುಷ್ಪ ಪ್ರದರ್ಶನವಾಗಿದೆ. ಎಲ್ಲೆಲ್ಲೂ ಹೂಗಳ ಪರಿಮಳ, ಒಂದೆಡೆ ಗಾಂಧಿ ಪ್ರತಿಮೆ, ಇನ್ನೊಂದೆಡೆ ಸಬರಮತಿ ಆಶ್ರಮ, ಇನ್ನೊಂದೆಡೆ ಚರಕ, ಮತ್ತೊಂದೆಡೆ ಕಟ್ಟದನ್ನು ಕೇಳಬೇಡ, ಕೆಟ್ಟದ್ದನ್ನು ಮಾತನಾಡಬೇಡ, ಕೆಟ್ಟದ್ದನ್ನು ನೋಡಬೇಡ ಎಂದು ಸೂಚಿಸುವ ಮೂರು ಕೋತಿಗಳು ಕಂಡು ಬರುತ್ತದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications