ಸ್ವಾತಂತ್ರ್ಯೋತ್ಸವ ಪುಷ್ಪಪ್ರದರ್ಶನಕ್ಕೆ ಮನಸೋತವರು 5 ಲಕ್ಷ ಮಂದಿ
ಬೆಂಗಳೂರು, ಆಗಸ್ಟ್ 16: ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ಬಾಗ್ನಲ್ಲಿ ಆಗಸ್ಟ್ 4ರಿಂದ ಪುಷ್ಪ ಪ್ರದರ್ಶನ ಆರಂಭಗೊಂಡಿತ್ತು. ಆಗಸ್ಟ್ 15ರಂದು ಕೊನೆಯ ದಿನ 5 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದಾರೆ.
ಲಾಲ್ಬಾಗ್ಗೆ ನಿರೀಕ್ಷೆಗಿಂತಲೂ ಹೆಚ್ಚಿನ ಮಂದಿ ಭೇಟಿ ನೀಡಿದ್ದು, ಸುಸೂತ್ರವಾಗಿ ಪ್ರದರ್ಶನ ಮುಕ್ತಾಯಗೊಂಡಿದೆ. 2.36 ಕೋಟಿಗೂ ಅಧಿಕ ಟಿಕೆಟ್ ಹಣ ಸಂಗ್ರಹವಾಗಿದೆ. ಪ್ರದರ್ಶನದ ಕೊನೆಯ ದಿನವಾದ ಬುಧವಾರ 1,28,407 ವಯಸ್ಕರು, 48500 ಮಕ್ಕಳು ಸೇರಿ 1,76,907 ಜನ ಭೇಟಿ ನೀಡಿದ್ದು ಟಿಕೆಟ್ ಶುಲ್ಕದ ಮೂಲಕ 75.18 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿದೆ.
ವಾಹನ ನಿಲುಗಡೆಗೆ ಶಾಂತಿನಗರ ಬಸ್ ನಿಲ್ದಾಣ, ಬಿಬಿಎಂಪಿ ಬಹುಮಹಡಿ ವಾಹನ ನಿಲುಗಡೆ, ಅಲ್ಅಮೀನ್ ಕಾಲೇಜುಗಳ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ನಿರೀಕ್ಷೆಗೂ ಮೀರಿ ಹೆಚ್ಚಿನ ವಾಹನಗಳು ಬಂದಿದ್ದರಿಂದ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

ಲಾಲ್ಬಾಗ್ನ ಮುಖ್ಯದ್ವಾರ, ಹೊಸೂರು ರಸ್ತೆ,ಶಾಂತಿನಗರ ಬಸ್ ನಿಲ್ದಾಣ, ಬಳಿ ಭಾರಿ ಸಂಖ್ಯೆಯಲ್ಲಿ ವಾಹನಗಳು ಜಮಾವಣೆಗೊಂಡಿದ್ದವು. ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸಪಡಬೇಕಾಯಿತು.
ಬುಧವಾರ ಬೆಳಗ್ಗೆಯಿಂದಲೇ ಪ್ರದರ್ಶನಕ್ಕೆ ಜನಸಾಗರ ಹರಿದುಬಂದಿತ್ತು, ಮಧ್ಯಾಹ್ನದ ವೇಳೆಗೆ ಲಾಲ್ಬಾಗ್ನಾದ್ಯಂತ ಜನಜಂಗುಳಿ ಕಂಡುಬಂತು. ಗಾಜಿನ ಮನೆಗೆ ತಲುಪಲು ಜನರು ಕಷ್ಟಪಡಬೇಕಾಯಿತು. ಲಾಲ್ಬಾಗ್ನ ನಾಲ್ಕು ದ್ವಾರಗಳಲ್ಲೂ ಜನಸಂದಣಿ ಕಂಡುಬಂದಿತ್ತು. ಯೋಧರಿಗೆ ಪುಷ್ಪನಮನ ಸಲ್ಲಿಸಲು ಈ ಬಾರಿ ಭಾರತದ ಸಮಗ್ರ ರಕ್ಷಣಾ ವ್ಯವಸ್ಥೆಯು ಅನಾವರಣಗೊಂಡಿತ್ತು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications