Lalbagh Flower Show: ಫಲಪುಷ್ಪ ಪ್ರದರ್ಶನಕ್ಕೆ ಜನಸಾಗರ: ಎಷ್ಟು ಕೋಟಿ ರೂಪಾಯಿ ಮೌಲ್ಯದ ಟಿಕೆಟ್ ಮಾರಾಟ ತಿಳಿಯಿರಿ
ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಫಲಪುಷ್ಪ ಪ್ರದರ್ಶನಕ್ಕೆ ಭಾರಿ ಜನಸ್ಪಂದನೆ ವ್ಯಕ್ತವಾಗಿದೆ. ಆಗಸ್ಟ್ 4ರಂದು 214ನೇ ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 4 ರಂದು ಉದ್ಘಾಟಿಸಿದ್ದರು. ಆಗಸ್ಟ್ 15ರಂದು ಫಲಪುಷ್ಪ ಪ್ರದರ್ಶನ ಮುಕ್ತಾಯವಾಗಲಿದೆ.
ಇದುವರೆಗೂ ಈ ಫಲಪುಷ್ಪ ಪ್ರದರ್ಶನವನ್ನು 4 ಲಕ್ಷಕ್ಕೂ ಅಧಿಕ ಮಂದಿ ನೋಡಿದ್ದಾರೆ. ಬರಿ ಟಿಕೆಟ್ ಮಾರಾಟದಿಂದಲೆ ತೋಟಗಾರಿಕಾ ಇಲಾಖೆ 1.8 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂದು ಡಿಹೆಚ್ ವರದಿ ಮಾಡಿದೆ. ಫಲಪುಷ್ಪ ಪ್ರದರ್ಶನವು ಆಗಸ್ಟ್ 15ರಂದು ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ತೆರೆದಿರುತ್ತದೆ.

ಲಾಲ್ ಬಾಗ್ ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಹಿರಿಯರಿಗೆ 70 ರೂ., ಮಕ್ಕಳಿಗೆ 30 ರೂ. ನಿಗದಿ ಮಾಡಲಾಗಿದೆ. ಗುರುತಿನ ಚೀಟಿ ಹೊಂದಿರುವ ವಿದ್ಯಾರ್ಥಿಗಳಿಗೆ ಫಲಪುಷ್ಪ ಪ್ರದರ್ಶನಕ್ಕೆ ಉಚಿತ ಪ್ರವೇಶ ನೀಡಲಾಗುವುದು. ಫಲಪುಷ್ಪ ಪ್ರದರ್ಶನಕ್ಕೆ ಭಾನುವಾರ 20,000 ವಿದ್ಯಾರ್ಥಿಗಳು ಸೇರಿದಂತೆ ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದರು.
ವಿಧಾನಸೌಧ ಪ್ರತಿಕೃತಿ
ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು ಕರ್ನಾಟಕದ ಎರಡನೇ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರಿಗೆ ಅರ್ಪಿಸಲಾಗಿದೆ. ವಿಧಾನಸೌಧದ 18 ಅಡಿ ಪ್ರತಿಕೃತಿ, 14 ಅಡಿಯ ಕೆಂಗಲ್ ಹನುಮಂತಯ್ಯ ಪ್ರತಿಮೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಆಕರ್ಷಣೆಯಾಗಿದೆ. 10 ಲಕ್ಷ ಹೂವುಗಳನ್ನು ಬಳಸಿ ವಿಧಾನಸೌಧ ಮತ್ತು ಶಿವಪುರ ಸತ್ಯಾಗ್ರಹ ಸೌಧದ ಪ್ರತಿಕೃತಿ ನಿರ್ಮಾಣ ಮಾಡಲಾಗಿದೆ.
ಲಾಲ್ ಬಾಗ್ನಲ್ಲಿ ವರ್ಷಕ್ಕೆ ಎರಡು ಬಾರಿ ಗಣರಾಜ್ಯ ಮತ್ತು ಸ್ವಾತಂತ್ರ್ಯ ದಿನದಂದು ಪುಷ್ಪ ಪ್ರದರ್ಶನವನ್ನು ನಡೆಸಲಾಗುತ್ತದೆ. ಪುಷ್ಪ ಪ್ರದರ್ಶನವು 200 ವರ್ಷಗಳ ಇತಿಹಾಸವನ್ನು ಹೊಂದಿದೆ ಮತ್ತು ಎರಡನೇ ವಿಶ್ವಯುದ್ಧದ ಸಮಯದಲ್ಲಿ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಎರಡು ಮಾತ್ರ ಫಲಪುಷ್ಪ ಪ್ರದರ್ಶನ ಆಯೋಜಿಸಿಲ್ಲ.
ಆಗಸ್ಟ್ 15ರಂದು ಲಕ್ಷಾಂತರ ಜನ ಫಲಪುಷ್ಪ ವೀಕ್ಷಣೆಗೆ ಆಗಮಿಸುವ ನಿರೀಕ್ಷೆ ಮಾಡಲಾಗಿದೆ. ಇದಕ್ಕಾಗಿಯೇ ಬೆಳಗ್ಗೆ 7 ಗಂಟೆಯಿಂದ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಇನ್ನು ಸಂಚಾರ ದಟ್ಟಣೆ ತಪ್ಪಿಸುವ ದೃಷ್ಟಿಯಿಂದ ಫಲಪುಷ್ಪ ವೀಕ್ಷಣೆಗೆ ಬರುವವರಿಗೆ ಸಾರ್ವಜನಿಕ ಸಾರಿಗೆ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ಪಾರ್ಕಿಂಗ್ ಬಗ್ಗೆ ಮಾಹಿತಿ
ಲಾಲ್ಬಾಗ್ನ ಪಶ್ಚಿಮ ಗೇಟ್, ಈಸ್ಟ್ ಗೇಟ್ ಮತ್ತು ಸೌತ್ ಎಂಡ್ ಸರ್ಕಲ್ನಿಂದ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ, ಜೆಸಿ ರಸ್ತೆ ಬಿಬಿಎಂಪಿ ಸಂಕೀರ್ಣ ಮತ್ತು ಲಾಲ್ ಬಾಗ್ ರಸ್ತೆಯ ಅಲ್ ಅಮೀನ್ ಕಾಲೇಜಿನಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications