ಕೆರೆಗಳ ಕೊಳೆ ತೊಳೆಯಲು ಬರಲಿವೆ ಆಮ್ಲಜನಕ ಹೆಚ್ಚಿಸುವ ಯಂತ್ರ
ಬೆಂಗಳೂರು, ಮಾರ್ಚ್ 15: ನಗರದಲ್ಲಿರುವ ಎಲ್ಲಾ ಕೆರೆಗಳು ಸಾಕಷ್ಟು ಕಲುಷಿತಗೊಂಡಿದೆ, ನೀರಿನಲ್ಲಿರುವ ಜಲಚರಗಳು ಉಸಿರುಗಟ್ಟಿ ಸಾಯುತ್ತಿವೆ.ಇದಕ್ಕೆ ಉಪಾಯ ಕಂಡುಹಿಡಿದಿರುವ ತೋಟಗಾರಿಕೆ ಇಲಾಖೆಯು ಲಾಲ್ ಬಾಗ್ ನಲ್ಲಿರುವ ಕೆರೆಯನ್ನು ರಕ್ಷಿಸಲು ಮುಂದಾಗಿದೆ.
ಕಲುಷಿತಗೊಂಡಿರುವ ಲಾಲ್ ಬಾಗ್ ದೊಡ್ಡ ಕೆರೆಗೆ ಇದೇ ಮೊದಲ ಬಾರಿಗೆ ಎಂಟು ಏರಿಯೇಟರ್( ಕೆರೆಯಲ್ಲಿ ಆಮ್ಲಜನಕ ಹೆಚ್ಚಿಸುವ ಯಂತ್ರ) ಗಳನ್ನು ಅಳವಡಿಸಿ ನೀಡು ಶುದ್ಧೀಕರಣಗೊಳಿಸಲು ತೀರ್ಮಾನಿಸಲಾಗಿದೆ.
ಮಲಿನಗೊಂಡು ಪಾಚಿಗಟ್ಟಿರುವ ಕೆರೆ ನೀರಿನಲ್ಲಿ ಆಮ್ಲಜನಕ ಕೊರತೆ ಇದೆ. ಇದರಿಂದ ಕೆಲವು ತಿಂಗಳ ಹಿಂದಷ್ಟೇ ಕೆರೆಯಲ್ಲಿ ಮೀನುಗಳು ಸತ್ತಿದ್ದವು. ಈ ಹಿನ್ನೆಲೆಯಲ್ಲಿ ಹಲವು ವರ್ಷಗಳ ಬೇಡಿಕೆ ನಂತರ ಕೆರೆ ನೀರು ಶುದ್ಧೀಕರಣ ಗೊಳಿಸಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಪರಿಸರವಾದಿ ಡಾ. ಎ.ಎನ್. ಯಲ್ಲಪ್ಪರೆಡ್ಡಿ ಹಾಗೂ ವಾಯುವಿಹಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಏರಿಯೇಟರ್ ಗಳನ್ನು ಅಳವಡಿಸುವ ತೀರ್ಮಾನ ಕೈಗೊಳ್ಳಲಾಗಿದೆ.
ಏರಿಯೇಟರ್ಸ್ ಗಳನ್ನು ಅಳವಡಿಕೆಗೆ ತಗುಲುವ ವೆಚ್ಚವನ್ನು ನಿಭಾಯಿಸುವ ಜತೆಗೆ, ಮೂರು ವರ್ಷಗಳ ಕಾಲ ನಿರ್ವಹಣೆ ಮಾಡಲು ಬಾಷ್ ಕಂಪನಿ ಮುಂದೆ ಬಂದಿದೆ. ಇದಕ್ಕೆ ಸರ್ಕಾರವೂ ಒಪ್ಪಿಗೆ ನೀಡಿದೆ. ಈ ತಿಂಗಳಾಂತ್ಯದಲ್ಲಿ ಎಂಟು ಏರಿಯೇಟರ್ ಗಳು ಲಾಲ್ ಬಾಗ್ ಕೆರೆಯಲ್ಲಿ ಚಿಮ್ಮಲಿವೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಏರಿಯೇಟರ್ ಎಂದರೆ ಏನು: ಗಾಳಿಯಲ್ಲಿ ಸಾಮಾನ್ಯವಾಗಿ ಕನಿಷ್ಠ 21ರಷ್ಟು ಪ್ರಾಣವಾಯು ವಿರುತ್ತದೆ. ಆದರೆ ನೀರಿನಲ್ಲಿ ಕನಿಷ್ಠ ಶೇ.4-5ರಷ್ಟಿರಬೇಕು. ಅದು ಶೇ.4ಕ್ಕಿಂತ ಕಡಿಮೆಯಾದರೆ ಅಲ್ಲಿನ ಬ್ಯಾಕ್ಟೀರಿಯಾಗಳು ಬದುಕುಳಿಯುವುದಿಲ್ಲ. ಬ್ಯಾಕ್ಟೀರಿಯಾಗಳು ಸತ್ತರೆ ನೀರಿನಲ್ಲಿ ಪ್ರಾಣವಾಯು ಪ್ರಮಾಣ ತೀವ್ರ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.
ಆಗ ಕೆರೆಯೊಳಗೆ ಜೀವಿಸುವ ಇತರೆ ಜಲಚರಗಳು ಕೂಡ ಸಾವನ್ನಪ್ಪುತ್ತವೆ. ಹೀಗಾಗಿ ಕೆರೆಯೊಳಗೆ ಏರೆಯೇಟರ್ ಗಳನ್ನು ಅಳವಡಿಸುವುದರಿಂದ ನೀರು ಕಾರಂಜಿಗಳ ರೀತಿಯಲ್ಲಿ ಮೇಲಿಂಗ ಕೆಳಗೆ ರಭಸವಾಗಿ ಬಿದ್ದಾಗ ಪರಸ್ಪರ ಅಲೆಗಳ ಮೂಲಕ ಆಮ್ಲಜನಕ ಉತ್ಪತ್ತಿಯಾಗುತ್ತದೆ ಎಂದು ಪರಿಸರ ವಾದಿ ಹಾಗೂ ಉದ್ಯಾನಗಳ ಸಲಹಾ ಸಮಿತಿ ಅಧ್ಯಕ್ಷ ಡಾ. ಎ.ಎನ್. ಯಲ್ಲಪ್ಪರೆಡ್ಡಿ ತಿಳಿಸಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications