Lalbagh Mango Mela: ಲಾಲ್ಬಾಗ್ ಮಾವು, ಹಲಸಿನ ಮೇಳಕ್ಕೆ ದಿನಾಂಕ ಫಿಕ್ಸ್, ವಿವರ ತಿಳಿಯಿರಿ
ಬೆಂಗಳೂರು, ಮೇ.16: ಸಿಲಿಕಾನ್ ಸಿಟಿ ಜನರು ಬಹಳ ಕಾತುರದಿಂದ ಕಾಯುತ್ತಿದ್ದ ಲಾಲ್ಬಾಗ್ ಮಾವಿನ ಮೇಳಕ್ಕೆ ದಿನಾಂಕ ನಿಗದಿಯಾಗಿದೆ. ಹಣ್ಣುಗಳ ರಾಜ ಮಾವಿನ ಹಣ್ಣು ಮಾರುಕಟ್ಟೆಗಳಲ್ಲಿ ಸದ್ಯ ದುಬಾರಿಯಾಗಿದೆ. ನೀರಿಲ್ಲದೇ, ಬಿಸಿಲಿನ ಝಳಕ್ಕೆ ಈ ಬಾರಿ ಮಾವಿನ ಇಳುವರಿ ಕುಂಠಿತಗೊಂಡಿದೆ. ಹೀಗಾಗಿ ದರ ಕೂಡ ದುಬಾರಿಯಾಗಿದೆ. ಆದರೂ ಬೆಂಗಳೂರಿನ ಜನ ಖರೀದಿಸುತ್ತಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಗರದ ಲಾಲ್ಬಾಗ್ನಲ್ಲಿ ಮಾವಿನ ಮೇಳ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ಧತೆ ಆರಂಭಗೊಂಡಿದೆ. ಮೇ 24 ರಿಂದ ಜೂನ್ 10 ರವರೆಗೂ ಲಾಲ್ಬಾಗ್ನಲ್ಲಿ ಬೃಹತ್ ಮಾವು ಹಾಗೂ ಹಲಸಿನ ಮೇಳ ನಡೆಸಲು ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಲಾಲ್ಬಾಗ್ನ ಮಾವು ಮತ್ತು ಹಲಸಿನ ಮೇಳದಲ್ಲಿ ಜಿಕೆವಿಕೆ, ಐಐಎಚ್ಆರ್ ಸೇರಿದಂತೆ ಇತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ವಿವಿಧ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತದೆ. ಹಾಗೂ ಮಾವಿನ ಮೇಳಕ್ಕೆ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದು, ಬಾದಾಮಿ, ರಸಪುರಿ, ಸೇಂಧೂರ, ಮಲಗೋವ, ನೀಲಂ, ಮಲ್ಲಿಕಾ ಸೇರಿದಂತೆ ವಿವಿಧ ಬಗೆಯ ಮಾವಿನ ಹಣ್ಣುಗಳ ಮಾರಾಟ ನಡೆಯಲಿದೆ.

ಲಾಲ್ಬಾಗ್ನಲ್ಲಿ ನಡೆಯುವ ಬೃಹತ್ ಮಾವು ಹಾಗೂ ಹಲಸಿನ ಮೇಳದಲ್ಲಿ ಭಾಗಿಯಾಗಲು ಸಿಲಿಕಾನ್ ಸಿಟಿ ಜನರು ಉತ್ಸುಕರಾಗಿದ್ದು, ಮೊದಲೆಲ್ಲಾ ಮಾರುಕಟ್ಟೆಗೆ ದರಕ್ಕೆ ಹೋಲಿಸಿದರೆ ಸ್ವಲ್ಪ ಕಡಿಮೆ ದರದಲ್ಲಿ ಇಲ್ಲಿ ಮಾವಿನ ಹಣ್ಣು ಹಾಗೂ ಹಲಸಿನ ಹಣ್ಣುಗಳು ಖರೀದಿಗೆ ಲಭ್ಯವಿರುತ್ತಿದ್ದವು. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದ ಮಾವಿನ ಇಳುವರಿ ಕುಸಿದಿದ್ದು, ದರ ದುಬಾರಿ ಇರುವ ಸಾಧ್ಯತೆ ಕೂಡ ಹೆಚ್ಚಿದೆ. ಆದರೆ, ಪಾರಂಪರಿಕ ಮಾವಿನ ತಳಿಗಳು ಸೇರಿದಂತೆ ವಿವಿಧ ಬಗೆಯ ಮಾವು ಹಾಗೂ ಹಲಸಿನ ಹಣ್ಣುಗಳು ಒಂದೇ ಸ್ಥಳದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications