Lalbagh Mango Mela: ಲಾಲ್ಬಾಗ್ ಮಾವು, ಹಲಸಿನ ಮೇಳಕ್ಕೆ ದಿನಾಂಕ ಫಿಕ್ಸ್, ವಿವರ ತಿಳಿಯಿರಿ
ಬೆಂಗಳೂರು, ಮೇ.16: ಸಿಲಿಕಾನ್ ಸಿಟಿ ಜನರು ಬಹಳ ಕಾತುರದಿಂದ ಕಾಯುತ್ತಿದ್ದ ಲಾಲ್ಬಾಗ್ ಮಾವಿನ ಮೇಳಕ್ಕೆ ದಿನಾಂಕ ನಿಗದಿಯಾಗಿದೆ. ಹಣ್ಣುಗಳ ರಾಜ ಮಾವಿನ ಹಣ್ಣು ಮಾರುಕಟ್ಟೆಗಳಲ್ಲಿ ಸದ್ಯ ದುಬಾರಿಯಾಗಿದೆ. ನೀರಿಲ್ಲದೇ, ಬಿಸಿಲಿನ ಝಳಕ್ಕೆ ಈ ಬಾರಿ ಮಾವಿನ ಇಳುವರಿ ಕುಂಠಿತಗೊಂಡಿದೆ. ಹೀಗಾಗಿ ದರ ಕೂಡ ದುಬಾರಿಯಾಗಿದೆ. ಆದರೂ ಬೆಂಗಳೂರಿನ ಜನ ಖರೀದಿಸುತ್ತಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಗರದ ಲಾಲ್ಬಾಗ್ನಲ್ಲಿ ಮಾವಿನ ಮೇಳ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ಧತೆ ಆರಂಭಗೊಂಡಿದೆ. ಮೇ 24 ರಿಂದ ಜೂನ್ 10 ರವರೆಗೂ ಲಾಲ್ಬಾಗ್ನಲ್ಲಿ ಬೃಹತ್ ಮಾವು ಹಾಗೂ ಹಲಸಿನ ಮೇಳ ನಡೆಸಲು ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಲಾಲ್ಬಾಗ್ನ ಮಾವು ಮತ್ತು ಹಲಸಿನ ಮೇಳದಲ್ಲಿ ಜಿಕೆವಿಕೆ, ಐಐಎಚ್ಆರ್ ಸೇರಿದಂತೆ ಇತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ವಿವಿಧ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತದೆ. ಹಾಗೂ ಮಾವಿನ ಮೇಳಕ್ಕೆ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದು, ಬಾದಾಮಿ, ರಸಪುರಿ, ಸೇಂಧೂರ, ಮಲಗೋವ, ನೀಲಂ, ಮಲ್ಲಿಕಾ ಸೇರಿದಂತೆ ವಿವಿಧ ಬಗೆಯ ಮಾವಿನ ಹಣ್ಣುಗಳ ಮಾರಾಟ ನಡೆಯಲಿದೆ.

ಲಾಲ್ಬಾಗ್ನಲ್ಲಿ ನಡೆಯುವ ಬೃಹತ್ ಮಾವು ಹಾಗೂ ಹಲಸಿನ ಮೇಳದಲ್ಲಿ ಭಾಗಿಯಾಗಲು ಸಿಲಿಕಾನ್ ಸಿಟಿ ಜನರು ಉತ್ಸುಕರಾಗಿದ್ದು, ಮೊದಲೆಲ್ಲಾ ಮಾರುಕಟ್ಟೆಗೆ ದರಕ್ಕೆ ಹೋಲಿಸಿದರೆ ಸ್ವಲ್ಪ ಕಡಿಮೆ ದರದಲ್ಲಿ ಇಲ್ಲಿ ಮಾವಿನ ಹಣ್ಣು ಹಾಗೂ ಹಲಸಿನ ಹಣ್ಣುಗಳು ಖರೀದಿಗೆ ಲಭ್ಯವಿರುತ್ತಿದ್ದವು. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದ ಮಾವಿನ ಇಳುವರಿ ಕುಸಿದಿದ್ದು, ದರ ದುಬಾರಿ ಇರುವ ಸಾಧ್ಯತೆ ಕೂಡ ಹೆಚ್ಚಿದೆ. ಆದರೆ, ಪಾರಂಪರಿಕ ಮಾವಿನ ತಳಿಗಳು ಸೇರಿದಂತೆ ವಿವಿಧ ಬಗೆಯ ಮಾವು ಹಾಗೂ ಹಲಸಿನ ಹಣ್ಣುಗಳು ಒಂದೇ ಸ್ಥಳದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Tamarind Farming: ಹುಣಸೆ ಕೃಷಿಯಲ್ಲಿ ಹೊಸ ಕ್ರಾಂತಿ: ಟ್ರ್ಯಾಕ್ಟರ್ ಸಹಾಯದಿಂದ ಯಂತ್ರ ತಯಾರಿಸಿದ ರೈತ ಚಂದ್ರಶೇಖರ, ವಿಡಿಯೋ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ











Click it and Unblock the Notifications