ಲಂಬಾಣಿ ಸಮುದಾಯದ ವಲಸೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ಗಾಗಿ ಮನವಿ
ಬೆಂಗಳೂರು, ಮೇ 13: ಲಂಬಾಣಿ (ಬಂಜಾರ) ಸಮುದಾಯದ ವಲಸೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಮನವಿ ಮಾಡಲಾಗಿದೆ. ಕೊರೊನಾ ವೈರಸ್ ಲಾಕ್ಡೌನ್ನಿಂದ ಲಂಬಾಣಿ ಸಮುದಾಯದ ವಲಸೆ ಕಾರ್ಮಿಕರಿಗೆ ಬಹಳ ತೊಂದರೆಯಾಗಿದ್ದು, ಸರ್ಕಾರ ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ತಿಳಿಸಲಾಗಿದೆ.
ಲಂಬಾಣಿ ಸಮುದಾಯದ ವಲಸೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ಗಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯರಿಗೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ. ಕೋವಿಡ್-19 ಅನುದಾನದಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಲು ಸರ್ಕಾರದ ಮೇಲೆ ಒತ್ತಡ ಹಾಕಲು ಕೇಳಿಕೊಂಡಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ಇಂದು ಸಿದ್ಧರಾಮಯ್ಯಯನ್ನು ಸಮುದಾಯದ ಮುಖಂಡರು ಭೇಟಿ ಮಾಡಿದ್ದಾರೆ. ಶಾಸಕರಾದ ಪರಮೇಶ್ವರ ನಾಯಕ, ಪ್ರಕಾಶ್ ರಾಥೋಡ್, ಮಾಜಿ ಸಚಿವರಾದ ಶಿವಮೂರ್ತಿ ನಾಯಕ್, ಕಾಂತಾ ನಾಯಕ್ ಈ ವೇಳೆ ಹಾಜರಿದ್ದರು.

ಸರ್ಕಾರ ಕೊರೊನಾ ಲಾಕ್ಡೌನ್ನಿಂದ ತೊಂದರೆಯಾದ ವಲಸೆ ಕಾರ್ಮಿಕರಿಗೆ ಸ್ಪಂದಿಸಿದೆ. ಅವರಿಗೆ ಹಣಕಾಸಿನ ನೆರವು ನೀಡುತ್ತಿದೆ. ಆದರೆ, ಲಂಬಾಣಿ ಸಮುದಾಯದ ವಲಸೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕೆಂದು ಆಗ್ರಹಿಸಲಾಗಿದೆ.

ಸರ್ಕಾರದ ಮೇಲೆ ಒತ್ತಡ ಹೇರಿ, ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಸಬೇಕೆಂದು, ಸಮುದಾಯದ ಮುಖಂಡರು ಸಿದ್ದರಾಮಯ್ಯ ಮೊರೆ ಹೋಗಿದ್ದಾರೆ.












Click it and Unblock the Notifications