ಬೆಂಗಳೂರು ಉಪನಗರ ಯೋಜನೆಗೆ ಭೂಸ್ವಾಧೀನ: ಭೂಮಾಲೀಕರಿಗೆ 4ರಿಂದ 6 ಕೋಟಿ ನಿರೀಕ್ಷೆ!
ಬೆಂಗಳೂರಿನ ಮೇಲೆ ಆಗುತ್ತಿರುವ ಒತ್ತಡವನ್ನು ತಪ್ಪಿಸುವ ಉದ್ದೇಶದಿಂದ ಬಿಡದಿ ಟೌನ್ಶಿಪ್ ನಿರ್ಮಾಣ ಮಾಡುವುದಕ್ಕೆ / ಬೆಂಗಳೂರಿನ ಸಮೀಪದಲ್ಲೇ ಉಪ ನಗರಗಳನ್ನು ಅಭಿವೃದ್ಧಿ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ಬಿಡದಿ ಟೌನ್ಶಿಪ್ ನಿರ್ಮಾಣವಾಗಲಿರುವ ಪ್ರದೇಶಗಳಲ್ಲಿ ಭೂಮಿಗೆ ಎಷ್ಟು ಕೋಟಿ ಬರಲಿದೆ ಎನ್ನುವ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಚುರುಕು ಪಡೆದುಕೊಂಡಿದ್ದು ಇಲ್ಲಿ ಭೂಮಿ ಇರುವವರಿಗೆ ಎಷ್ಟು ಕೋಟಿ ಸಿಗಲಿದೆ ಎನ್ನುವ ಲೆಕ್ಕಾಚಾರ ಜೋರಾಗಿದೆ.
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳುವ ಮಂಚೆ ಈ ಭಾಗದಲ್ಲಿ ಭೂಮಿ ಇರುವವರಿಗೆ 4ರಿಂದ 6 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎನ್ನುವ ವಿಚಾರವೂ ಭಾರೀ ಚರ್ಚೆಯಾಗುತ್ತಿದೆ. ಈ ಭಾಗದಲ್ಲಿ ಮಧ್ಯವರ್ತಿಗಳು ಹಾಗೂ ದಲ್ಲಾಳಿಗಳು ಜನರಲ್ಲಿ ಗೊಂದಲದ ವಾತಾವರಣವನ್ನು ನಿರ್ಮಿಸುತ್ತಿದ್ದು. ಇದರಿಂದ ಈ ಭಾಗದಲ್ಲಿ ಭೂಮಿ ಹೊಂದಿರುವವರಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಬೆಂಗಳೂರಿಗೆ ಪರ್ಯಾಯವಾಗಿ 9 ಉಪ ನಗರಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಇದರ ಭಾಗವಾಗಿ ಇದೀಗ ಭೂಸ್ವಾಧೀನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಇನ್ನು ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ 10 ಗ್ರಾಮಗಳು ಸೇರಿದಂತೆ ಒಟ್ಟು 9,178.29 ಎಕರೆ ಪ್ರದೇಶದಲ್ಲಿ ಬಿಡದಿ ಉಪನಗರವನ್ನು ನಿರ್ಮಿಸುವುದಕ್ಕೆ ಪ್ರಾಯೋಗಿಕವಾಗಿ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವುದಕ್ಕೆ 2007ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಇದು ನಡೆದಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ.
ಇದೀಗ ಈ ಯೋಜನೆಯನ್ನು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದ ಬಿಡದಿಯಲ್ಲಿ ಉಪನಗರ ನಿರ್ಮಾಣ ಆಗುವುದರಿಂದ ಬೆಂಗಳೂರು ವಿಸ್ತರಣೆ ಹಾಗೂ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎನ್ನುವ ಲೆಕ್ಕಾಚಾರ ಇದೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್ಶಿಪ್ ಯೋಜನೆಗೆ ಜಮೀನುಗಳನ್ನು ಭೂಸ್ವಾಧೀನ ಪಡೆಸಿಕೊಳ್ಳಲು ಸಿದ್ಧತೆಗಳು ನಡೆದಿವೆ. ಇದೀಗ ಈ ಭಾಗದಲ್ಲಿ ಒಂದು ಎಕರೆ ಭೂಮಿಗೆ 4ರಿಂದ 6 ಕೋಟಿ ರೂಪಾಯಿ ಕೊಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ. ಇನ್ನು ಮಂಜೂರಾತಿ ಜಮೀನುಗಳ ಎಸ್ಆರ್ ಬೆಲೆಯು ಕೇವಲ 25 ರಿಂದ 30 ಲಕ್ಷ ರೂಪಾಯಿ ಇದೆ. ಇದು ಸಾಕಾಗುವುದಿಲ್ಲ. ಈ ಭಾಗದಲ್ಲಿ ಬಡವರು ಹಾಗೂ ಹಿಂದೂಳಿದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಹೀಗಾಗಿ ಭೂಸ್ವಾಧೀನಕ್ಕೆ ಹೆಚ್ಚು ಹಣ ಕೊಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.
ಯಾವ ಭಾಗದಲ್ಲಿ ಭೂಸ್ವಾಧೀನ ?
ಬನ್ನಿಗಿರಿ, ಕೆಂಪಯ್ಯನಪಾಳ್ಯ, ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಮಂಡಲಹಳ್ಳಿ, ಭೈರಮಂಗಲ, ಹೊಸೂರು, ಹಾರೋಹಳ್ಳಿ ತಾಲ್ಲೂಕಿನ ವಡೇರಹಳ್ಳಿ ಸೇರಿದಂತೆ ವಿವಿಧ ಭಾಗದಲ್ಲಿ ಭೂಸ್ವಾಧೀನ ನಡೆಯಲಿದೆ ಎಂದು ಹೇಳಲಾಗಿದೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications