HDK & ಮತ್ತಿತರಿಂದ ಭೂ ಕಬಳಿಕೆ: ಜುಲೈ 7ರೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ
ಬೆಂಗಳೂರು, ಜೂನ್, 17: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮದ್ಧೂರಿನ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಸೇರಿಂದಂತೆ ಮತ್ತಿತರ ವಿರುದ್ಧ ಭೂಕಬಳಿಕೆ ಆರೋಪವೊಂದು ಎದುರಾಗಿದ್ದು, ಹಾಗೆಯೇ ಕಬಳಿಕೆಯಾದ ಭೂಮಿಯನ್ನು ವಶಕ್ಕೆ ಪಡೆಯಲು ಕೋರ್ಟ್ ಆದೇಶ ನೀಡಿದೆ. ಹಾಗಾದರೆ ಯಾವ ಜಿಲ್ಲೆಯಲ್ಲಿ ಭೂಕಬಳಿಕೆ ಆಗಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಕಬಳಿಕೆಯಾದ ಸರ್ಕಾರಿ ಜಮೀನನ್ನು ವಶಕ್ಕೆ ಪಡೆಯಲು ನ್ಯಾಯಾಲಯ ಸೂಚಿಸಿದ್ದು, ಅನುಪಾಲನಾ ವರದಿಯನ್ನು ಸಲ್ಲಿಸಲು ಸರ್ಕಾರಕ್ಕೆ ಜುಲೈ 7ರ ವರೆಗೆ ಹೈಕೋರ್ಟ್ ಕಾಲಾವಕಾಶ ನೀಡಿದೆ.

ಪ್ರಕರಣದಲ್ಲಿ ಒತ್ತುವರಿ ಜಮೀನು ವಶಕ್ಕೆ ಪಡೆಯಲು ಸೂಚಿಸಿದ ಹೈಕೋರ್ಟ್ ಆದೇಶವನ್ನು ಜಾರಿಗೊಳಿಸಲು ಸರ್ಕಾರ ವಿಫಲವಾಗಿದೆ ಎಂದು ಪರಿವರ್ತನಾ ಸಮುದಾಯ ಆರೋಪಿಸಿತ್ತು. ಇನ್ನು ನ್ಯಾಯಾಂಗ ನಿಂದನೆಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ಸರ್ಕಾರಕ್ಕೆ ಕಾಲಾವಕಾಶ ನೀಡಿದೆ.
ಸರ್ಕಾರಿ ವಕೀಲರು ಹಾಜರಾಗಿ, ಒತ್ತುವರಿ ತೆರವು ಮಾಡುವಂತೆ ಸೂಚಿಸಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಆರೋಪಿಸ್ಥರು, ತಾವು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಲ್ಲ. ಭೂಮಿಯನ್ನು ಕೆಲವರಿಗೆ ಸರ್ಕಾರ ಮಂಜೂರು ಮಾಡಿದೆ. ಅವರಿಂದ ತಾವು ಖರೀದಿ ಮಾಡಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.

ಅಲ್ಲದೆ ಆ ಕುರಿತು ದಾಖಲೆಗಳನ್ನು ಪರಿಶೀಲನೆ ನಡೆಸಲು ಸರ್ಕಾರ ಮುಂದಾಯಿತು. ಆದರೆ, ದಾಖಲೆಗಳು ಸದ್ಯ ನಾಶವಾಗಿವೆ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ನೀಡಲು ಮತ್ತು ಹೈಕೋರ್ಟ್ನ ಹಿಂದಿನ ಆದೇಶಗಳ ಅನುಪಾಲನಾ ವರದಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಈ ಹೇಳಿಕೆಯನ್ನು ಒಪ್ಪದ ನ್ಯಾಯಪೀಠ, ದಾಖಲೆಗಳು ನಾಶವಾಗಿವೆ ಎಂದರೆ ಏನರ್ಥ? ಸರ್ಕಾರಿ ಭೂಮಿ ಮತ್ತು ದಾಖಲೆಗಳಿಗೆ ಸರ್ಕಾರವೇ ಜವಾಬ್ದಾರಿ ಆಗಿರುತ್ತದೆ. ದಾಖಲೆಗಳು ನಾಶವಾಗಿವೆ ಎಂಬುದನ್ನು ಒಪ್ಪಲಾಗದು ಎಂದು ಖಾರವಾಗಿಯೇ ತರಾಟೆ ತೆಗೆದುಕೊಂಡಿತು.
ಅಲ್ಲದೆ, ಸರ್ಕಾರದ ಎಷ್ಟು ಜಮೀನು ಒತ್ತುವರಿಯಾಗಿದೆ. ಅದರಲ್ಲಿ ಎಷ್ಟು ಜಮೀನನ್ನು ಸರ್ಕಾರ ಮತ್ತೆ ವಶಕ್ಕೆ ಪಡೆದಿದೆ ಎಂಬುದರ ಕುರಿತು ವರದಿ ಸಲ್ಲಿಸುವಂತೆ ಹೈಕೋರ್ಟ್ ಈ ಹಿಂದೆಯೇ ನಿರ್ದೇಶಿಸಿದೆ. ಅದರಂತೆಯೇ ಹೈಕೋರ್ಟ್ ಆದೇಶದ ಅನುಪಾಲನಾ ವರದಿ ಸಲ್ಲಿಸಬೇಕು. ಪ್ರಕರಣದಲ್ಲಿ ಏನೆಲ್ಲಾ ಕ್ರಮ ಜರುಗಿಸಬೇಕು ಎಂಬ ಬಗ್ಗೆ ಸರ್ಕಾರ ಪರಿಶೀಲಿಸಬೇಕು. ಇಲ್ಲವಾದರೆ ನ್ಯಾಯಾಲಯವೇ ಅಗತ್ಯ ಕ್ರಮ ಜರುಗಿಸಲಿದೆ ಎಂದು ಮೌಖಿಕವಾಗಿ ತಿಳಿಸಿ ಅನುಪಾಲನಾ ವರದಿ ಸಲ್ಲಿಸಲು ಜುಲೈ 7ರವರೆಗೆ ಕಾಲಾವಕಾಶ ನೀಡಿದೆ.
ಅರ್ಜಿಯು 2023ರ ಏಪ್ರಿಲ್ 11ರಂದು ವಿಚಾರಣೆಗೆ ಬಂದಾಗ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿ, ಕೇತಗಾನಹಳ್ಳಿಯ ಸರ್ವೇ ನಂ 8, 9, 10, 16/1, 16/8, 16/24 ಮತ್ತು 79ರಲ್ಲಿನ ಒಟ್ಟು 14 ಹೆಕ್ಟೇರ್ 4 ಗುಂಟೆ ಜಾಗವನ್ನು ಸರ್ಕಾರ ವಶಕ್ಕೆ ಪಡೆದಿದೆ. ಇಡೀ ಜಾಗಕ್ಕೆ ತಂತಿಬೇಲಿಯನ್ನು ಅಳವಡಿಸಲಾಗಿದೆ. ಉಳಿದಂತೆ ಸಂಬಂಧಪಟ್ಟವರಿಗೆ ಒತ್ತುವರಿ ತೆರವು ನೋಟಿಸ್ ನೀಡಲಾಗಿತ್ತು. ತಾವು ಯಾವುದೇ ಸರ್ಕಾರಿ ಜಮೀನಿನ ಭಾಗ ಒತ್ತುವರಿ ಮಾಡಿಲ್ಲ ಎಂಬುದಾಗಿ ಅವರು ತಿಳಿಸಿದ್ದಾರೆ ಎಂದರು.
ಇನ್ನು ಇದಕ್ಕೆ ಆಕ್ಷೇಪ ಮಾಡಿದ್ದ ಅರ್ಜಿದಾರರ ವಕೀಲರು, ಪ್ರಕರಣದಲ್ಲಿ ಒಟ್ಟು 71 ಹೆಕ್ಟೇರ್ ಸರ್ಕಾರಿ ಜಮೀನು ಒತ್ತುವರಿ ಆಗಿದೆಯೇ ಹೊರತು 14 ಹೆಕ್ಟೇರ್ 14 ಗುಂಟೆಯಲ್ಲ. ಈ ಕುರಿತು 2014ರ ಆಗಷ್ಟ್ 4ರಂದು ನೀಡಿದ ಲೋಕಾಯುಕ್ತ ಸಂಸ್ಥೆಯ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ. ಆಗಿನಿಂದ ಲೋಕಾಯುಕ್ತ ವರದಿ ಜಾರಿಗೊಳಿಸಲಾಗುವುದು ಎಂಬುದಾಗಿ ಹೈಕೋರ್ಟ್ಗೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಆದರೆ, ಈವರೆಗೂ ಒತ್ತುವರಿಯಾದ ಜಮೀನು ಸರ್ಕಾರ ವಶಕ್ಕೆ ಪಡೆದಿಲ್ಲ ಎಂದು ವಾದ ಮಾಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications