13 ಎಕರೆ ಸರ್ಕಾರಿ ಭೂಮಿ ಕಬಳಿಕೆ : ಸಚಿವ ಜಾರ್ಜ್ ವಿರುದ್ಧ ದೂರು ದಾಖಲು
ಬೆಂಗಳೂರು, ಡಿಸೆಂಬರ್ 07 : ಬೆಂಗಳೂರು ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಲೋಕಾಯುಕ್ತದಲ್ಲಿ, ಎಸಿಬಿ ಹಾಗೂ ಬಿಎಂಟಿಎಫ್ ನಲ್ಲಿ ಮತ್ತೊಂದು ಗಂಭೀರ ಪ್ರಕರಣ ದಾಖಲಾಗಿದೆ.
ಜಾರ್ಜ್ ವಿರುದ್ಧ ದೂರು ದಾಖಲಿಸಿರುವ ಬಿಜೆಪಿ ಮುಖಂಡ ಎನ್.ಅರ್. ರಮೇಶ್ ನಗರದ ಎಸಿಎಂಎಂ ನ್ಯಾಯಾಲಯದಲ್ಲಿ ಜಾರ್ಜ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿದ್ದಾರೆ. ಹಿಂದಿನ ಜಿಲ್ಲಾಧಿಕಾರಿ, ತಹಶೀಲ್ದಾರ್, ಹಿಂದಿನ ಆಯುಕ್ತರು, ಬಿಡಿಎ ನಗರ ಯೋಜನೆ ಅಧಿಕಾರಿಗಳು ಮತ್ತು ಬಿಬಿಎಂಪಿ ಕಂದಾಯ ಇಲಾಖೆ ಅಧಿಕಾರಗಳ ವಿರುದ್ಧವೂ ದೂರು ದಾಖಲಿಸಿದ್ದಾರೆ.
ಕೆ.ಜೆ. ಜಾರ್ಜ್ ವಿರುದ್ಧ ಸರ್ಕಾರಿ ಭೂಕಬಳಿಕೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಮತ್ತು ವಂಚನೆ ಪ್ರಕರಣಗಳು ದಾಖಲಿಸಿರುವ ಎನ್.ಆರ್. ರಮೇಶ್, 4 ಸಾವಿರ ಕೋಟಿ ಬೆಲೆಬಾಳುವ 52.03 ಎಕರೆಗಳಷ್ಟು ಸರ್ಕಾರಿ ಸ್ವತ್ತುಗಳಿಗೆ ನಕಲಿ ದಾಖಲೆ ಸೃಷ್ಟಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಜಾರ್ಜ್ ಅವರ ಮುಖ್ಯ ಪಾಲುದಾರಿಕೆಯ ಎಂಬಸ್ಸಿ 'ಗಾಲ್ಫ್ ಲಿಂಕ್ ಟೆಕ್ ಪಾರ್ಕ್'ನಿರ್ಮಾಣದ ಹೆಸರಿನಲ್ಲಿ ಸಾವಿರಾರು ಕೋಟಿ ಸರ್ಕಾರಿ ಭೂಮಿ ಕಬಳಿಕೆ ಆರೋಪ ಕ್ರಯಕ್ಕೆ 52.03 ಎಕರೆ, ಆದರೆ ಬೇಲಿ ಹಾಕಿರುವುದು 65 ಎಕರೆ ಪ್ರದೇಶಕ್ಕೆ 850 ಕೋಟಿ ರೂ. ಬೆಲೆಬಾಳುವ 13 ಎಕರೆಗಳಷ್ಟು ಸರ್ಕಾರಿ ಸ್ವತ್ತುಗಳನ್ನು ಒತ್ತುವರಿ ಮಾಡಿದ್ದಾರೆ ಎಂದರು.
ಬೆಂಗಳೂರು ಪೂರ್ವ ತಾಲೂಕು, ವರ್ತೂರು ಹೋಬಳಿ ಚಲ್ಲಘಟ್ಟ ಗ್ರಾಮದ 65 ಎಕರೆ ಸರ್ಕಾರಿ ಜಮೀನುಗಳಲ್ಲಿ ಎಂಬಸ್ಸಿ ಗಲ್ಫ್ ನಿರ್ಮಾಣವಾಗಿದೆ. ಈ ರೀತಿ ಖುದ್ದು ಆ ಸಂಸ್ಥೆಯೇ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಹಾಕಿದೆ. ಈ 65 ಎಕರೆ ಜಮೀನುಗಳಿಗೆ ಸಂಬಂಧಿಸಿದ ಆರ್ ಟಿ ಇ ದಾಖಲೆಗಳಲ್ಲಿ ಇಂದಿಗೂ ಸಹ ಸರ್ಕಾರಿ ಸ್ವತ್ತುಗಳು ಎಂದು ನಮೂದಿಸಲಾಗಿದೆ ಎಂದು ಹೇಳಿದರು.
ವಿವಿಧ 18 ಸರ್ವೆ ನಂಬರುಗಳ 65 ಎಕರೆ ಸರ್ಕಾರಿ ಸ್ವತ್ತುಗಳಲ್ಲಿ ನಿರ್ಮಾಣವಾಗಿರುವ ಕೆ.ಜೆ. ಜಾರ್ಜ್ ಮಾಲಿಕತ್ವದ ಎಂಬಸ್ಸಿ ಗಲ್ಫ್ ಸಂಸ್ಥೆ, ನಿರ್ಮಾಣದ ಹೆಸರಿನಲ್ಲಿ ಚಲ್ಲಘಟ್ಟ ಕಣಿವೆಯ ರಾಜಕಾಲುವೆಯ ನೂರಾರು ಕೋಟಿ ರೂ ಬೆಲೆಬಾಳುವ ಬಫರ್ ಜೋನ್ ಪ್ರದೇಶದ ಸಂಪೂರ್ಣ ಒತ್ತುವರಿ ಮಾಡಿದೆ.
ಎಂಬಸ್ಸಿ ಗಲ್ಫ್ ಸಂಸ್ಥೆಗೆ ಸರ್ವೇ ನಂ.7/4 ರ 4.01 ಎಕರೆಗಳಷ್ಟು ಸರ್ಕಾರಿ ಸ್ವತ್ತನ್ನು ಶಾಸಕ ಎನ್.ಎ. ಹ್ಯಾರಿಸ್ ಮತ್ತು ಅವರ ಕುಟುಂಬ ವರ್ಗದವರು ಮಾರಾಟ ಮಾಡಿರುವ ದಾಖಲೆ ಬಗ್ಗೆ ಸಾಕಷ್ಟು ಅನುಮಾನ ಇದೆ ಎಂದರು.
ವಾಸದ ಉದ್ದೇಶಕ್ಕೆಂದು ಭೂ ಪರಿವರ್ತನೆಯಾಗಿರುವ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಕಾನೂನು ಬಾಹಿರವಾಗಿ ನಿರ್ಮಿಸಿರುವ ವಾಣಿಜ್ಯ ಕಟ್ಟಡಗಳಿಗೆ ಹಿಂದಿನ ಬಿಡಿಎ ಆಯುಕ್ತರು ನಿಯಮ ಬಾಹಿರವಾಗಿ ಸ್ವಾಧೀನತಾ ಪತ್ರಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು.
ಎಂಬಸ್ಸಿ ಗಲ್ಫ್ ಸಂಸ್ಥೆಯ ಒಟ್ಟು ನಿರ್ಮಿತ ಪ್ರದೇಶ 4.5 ದಶಲಕ್ಷ ಚ. ಅಡಿಗಳು. ಆದರೆ, ಆ ಸಂಸ್ಥೆಯು ಪಾಲಿಕೆಗೆ ನೀಡಿರುವ ಮಾಹಿತಿ ಕೇವಲ 4,79,723 ಚ. ಅಡಿಗಳಷ್ಟು ಮಾತ್ರ. ಎಂಬಸ್ಸಿ ಗಲ್ಫ್ ಸಂಸ್ಥೆಯು ತಾನು 4.5 ದಶಲಕ್ಷ ಚ. ಅಡಿಗಳಷ್ಟು ಒಟ್ಟು ನಿರ್ಮಿತ ಪ್ರದೇಶವಿರುವ ವ್ಯಾವಹಾರಿಕ ಕಟ್ಟಡಗಳನ್ನು ಹೊಂದಿರುವುದಾಗಿ ಸ್ವತಃ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಘೋಷಿಸಿಕೊಂಡಿದೆ.
ರಾಜಕಾಲುವೆಯ ಬಫರ್ ಜೋನ್ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸುವಂತೆ ಆಗ್ರಹ ವರ್ಷ ಪ್ರತಿ 09 ಕೋಟಿ ರೂ.ಗೂ ಹೆಚ್ಚು ಆಸ್ತಿ ತೆರಿಗೆಯನ್ನು ಪಾಲಿಕೆಗೆ ವಂಚಿಸುತ್ತಿರುವ ಸಚಿವ ಕೆ.ಜೆ ಜಾರ್ಜ್ ರವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಎನ್.ಆರ್. ರಮೇಶ್ ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications