Get Updates
Get notified of breaking news, exclusive insights, and must-see stories!

ಶಿಕಾರಿಪುರದಲ್ಲಿ ಭೂ ಹಗರಣ: ಬಿಎಸ್ವೈ ಹಾಗೂ ಪುತ್ರರ ವಿರುದ್ಧ ದೂರು

ಬೆಂಗಳೂರು, ಅಕ್ಟೋಬರ್ 18: ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಇಬ್ಬರು ಮಕ್ಕಳು ಭೂ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತರೊಬ್ಬರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಜನಾಪುರದಲ್ಲಿ ಯಡಿಯೂರಪ್ಪ ಪುತ್ರರಾದ ರಾಘವೇಂದ್ರ ಮತ್ತು ವಿಜಯೇಂದ್ರ ಖಾಸಗಿ ಕಾಲೇಜು ನಡೆಸುತ್ತಿದ್ದು, ಈ ಕಾಲೇಜಿಗೆ ಸುಮಾರು 25 ಎಕರೆಯಷ್ಟು ಕೆರೆ ಜಮೀನನ್ನು ಕಬಳಿಸಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಹನುಮೇಗೌಡ ಅವರು ಬೆಂಗಳೂರಿನ ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

Land Scam : B S Yeddyurappa and Sons in trouble, RTI activist files complaint Special court

ಅಂಜನಾಪುರದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಕುಮದ್ವತಿ ಕಾಲೇಜು ಆವರಣದಲ್ಲಿರುವ 25 ಎಕರೆ ಕೆರೆ ಜಮೀನನ್ನು ಯಡಿಯೂರಪ್ಪ ಅವರ ಪುತ್ರರು ತಮ್ಮ ಪ್ರಭಾವ ಬಳಸಿ ಕಬಳಿಸಿದ್ದಾರೆ.

ಭೂ ಕಬಳಿಕೆ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಅವರ ಕುಮ್ಮಕ್ಕಿದೆ. ದೂರಿನ ಪ್ರತಿ ಜತೆಗೆ ಅಗತ್ಯ ದಾಖಲೆಗಳನ್ನು ಕೂಡಾ ವಿಶೇಷ ಭೂ ಕಬಳಿಕೆ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂಡುಎಂದು ಹನುಮೇಗೌಡ ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+