ಟೀಚರ್ಗೆ ಒಳ ಉಡುಪು ಗಿಫ್ಟ್ ಕೊಟ್ಟ ಮನೆ ಮಾಲೀಕ ಜೈಲಿನ ಅಂದರ್!
ಬೆಂಗಳೂರು, ಜ. 18: ''ನನ್ನ ಹುಟ್ಟುಹಬ್ಬಕ್ಕೆ ಮಹಿಳೆಯರ ಒಳ ಉಡುಪು ಉಡುಗೊರೆ ಕೊಟ್ಟು ಮನೆ ಮಾಲೀಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ' ಎಂದು ಮನೆ ಮಾಲೀಕರ ವಿರುದ್ಧ ಶಿಕ್ಷಕಿ ದೂರು ನೀಡಿದ್ದಾರೆ. ಎರಡು ವರ್ಷದಿಂದ ಬಾಡಿಗೆ ಪಾವತಿ ಮಾಡದ ಶಿಕ್ಷಕಿಯನ್ನು ಬಾಡಿಗೆ ಕೇಳಿದ್ದಕ್ಕೆ ಈ ರೀತಿಯ ಸುಳ್ಳು ದೂರು ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂತಹ ಅಪರೂಪದ ಅಪರಾಧ ಪ್ರಕರಣವೊಂದು ಬೆಂಗಳೂರಿನ ಶ್ರೀನಗರದಲ್ಲಿ ನಡೆದಿದೆ.
ಅ ವ್ಯಕ್ತಿಯ ಹೆಸರು ಪದ್ಮನಾಭ. ಹಿರಿಯ ಜೀವ, ಮನೆಯಲ್ಲಿ ಟಿವಿ ನೋಡಿಕೊಂಡು ಮೊಮ್ಮಕ್ಕಳ ಜತೆ ಕಾಲ ಕಳೆಯುವ ವಯಸ್ಸು. ಸ್ವಂತ ಮನೆ ಜತೆಗೆ ತಿಂಗಳಿಗೆ ಬರುವ ಬಾಡಿಗೆ ಹಣ ವೆಚ್ಚ ಮಾಡಿಕೊಂಡು ಸುಖವಾಗಿರಬೇಕಾದ ಎಲ್ಲಾ ಅವಕಾಶಗಳಿದ್ದವು. ಪದ್ಮನಾಭಗೆ ಸೇರಿದ ಮನೆಯಲ್ಲಿ ಹನ್ನೆರಡು ವರ್ಷದಿಂದ ಶಿಕ್ಷಕಿಯೊಬ್ಬರು ಬಾಡಿಗೆಗೆ ಇದ್ದರು. ಇದ್ದಕ್ಕಿದ್ದಂತೆ ಇತ್ತೀಚೆಗೆ ಮನೆ ಮಾಲೀಕ ಪದ್ಮನಾಭ ವಿರುದ್ಧ ಶಿಕ್ಷಕಿ ಹನುಮಂತನಗರ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಹುಟ್ಟು ಹಬ್ಬಕ್ಕೆ ಪದ್ಮನಾಭ ಒಳ ಉಡುಪು ಉಡುಗೊರೆ ಕೊಟ್ಟಿದ್ದಾನೆ. ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸಿ ಕಾಟ ಕೊಡುತ್ತಿದ್ದಾನೆ. ಒಮ್ಮೆ ನಾನು ಒಂಟಿಯಾಗಿ ಮಲಗಿದ್ದಾಗ ಮನೆಗೆ ಚಿಲಕ ಹಾಕಿ ಹೊರ ಹೋಗಿದ್ದ. ಹೊರಗೆ ಏಕಾಂತವಾಗಿ ಕಳೆಯಲು ಜತೆಗೆ ಬರುವಂತೆ ಪೀಡಿಸುತ್ತಿದ್ದಾನೆ ಎಂದು ದೂರಿ ಶಿಕ್ಷಕಿ ಮನೆ ಮಲೀಕರ ವಿರುದ್ಧ ದೂರು ನೀಡಿದ್ದಾರೆ.

ದೂರಿನ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಹನುಮಂತನಗರ ಪೊಲೀಸರು, ಎರಡು ವರ್ಷದಿಂದ ಶಿಕ್ಷಕಿ ಬಾಡಿಗೆ ಪಾವತಿ ಮಾಡಿಲ್ಲ. ಕೇಳಿದ್ದಕ್ಕೆ ಈ ರೀತಿಯ ಅರೋಪ ಹೊರಿಸಿ ದೂರು ನೀಡಿರುವ ಸಂಗತಿ ಮೇಲ್ನೋಟಕ್ಕೆ ಕಂಡು ಬಂದಿದೆ. ಹೀಗಾಗಿ ಹುಟ್ಟುಹಬ್ಬಕ್ಕೆ ಉಡುಗೊರೆ ಕೊಟ್ಟಿದ್ದ ಒಳ ಉಡುಪುಗಳನ್ನು ತಂದು ಕೊಡುವಂತೆ ಸೂಚಿಸಿದ್ದೇವೆ. ಸುಳ್ಳು ಆರೋಪ ಹೊರಿಸಿ ದೂರು ನೀಡಿರುವ ಅಂಶ ಕಂಡು ಬಂದಿದ್ದು, ಈ ಕುರಿತು ತನಿಖೆ ನಡೆದ ಬಳಿಕ ಸತ್ಯ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications