ಎಲ್ಲಾ ಜಾತಿ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್: ರಾಯರೆಡ್ಡಿ
ಬೆಂಗಳೂರು, ಫೆಬ್ರವರಿ 28 : ಕಳೆದ ಎರಡು ವರ್ಷಗಳಲ್ಲಿ ಉನ್ನತ ಶಿಕ್ಷಣ ಪ್ರಗತಿಯಲ್ಲಿ ದೇಶದಲ್ಲಿ ಕರ್ನಾಟಕವೇ ಮುಂದಿದೆ. ಉನ್ನತ ಶಿಕ್ಷಣದ ಪ್ರಗತಿಯಲ್ಇ ದೇಶದ ಪ್ರಮಾಣ ಶೇ.24 ರಷ್ಟಿದ್ದರೆ ರಾಜ್ಯ ಶೇ.28 ರಷ್ಟು ಪ್ರಮಾಣ ಹೊಂದಿದೆ. ಮುಂದಿನ ಐದು ವರ್ಷದಲ್ಲಿ ಶೇ.೪೦ಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಒಂದು ದಶಕದ ಕೆಲಸವನ್ನು ಐದೇ ವರ್ಷದಲ್ಲಿ ಮಾಡಿದೆ. ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಸ್ಥಾಪಿಸಲಾಗಿದೆ. 16 ರೆಸಿಡಿನ್ಸಿಯಲ್ ಕಾಲೇಜುಗಳ ಪೈಕಿ 10 ಕಾಲೇಜುಗಳನ್ನು ಈಗಾಘಲೇ ಆರಂಭಿಸಲಾಗಿದ್ದು, ಉಳಿದ ಆರು ಕಾಲೇಜುಗಳನ್ನು ಹೈದರಾಬಾದ್ ಕರ್ನಾಟಕದಲ್ಲಿ ಆರಂಬಿಸಲಾಗುವುದು.
ಪ್ರತಿ ಕಾಲೇಜುಗಳಿಗೆ ತಲಾ 25 ಕೋಟಿ ನೀಡಲಾಗುತ್ತಿದ್ದು, ಸದ್ಯದಲ್ಲೇ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಿದೆ. ಮುಂದಿನ ದಿನಗಳಲ್ಲಿ ತಾಲೂಕಿಗೊಂದು ವಸತಿ ಕಾಲೇಜು ಆರಂಭಿಸಲಾಗುವುದು ಎಂದು ತಿಳಿಸಿದರು.

ಸದ್ಯ 578 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗುತ್ತಿದೆ. ಮುಂದಿನ ಒಂದು ತಿಂಗಳಲ್ಲಿ ಗುತ್ತಿಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಎಲ್ಲ ವಿದ್ಯಾರ್ಥಿಗಳಿಗೂ ಪ್ರಾಂಶುಪಾಲರ ಮೂಲಕ ಲ್ಯಾಪ್ಟಾಪ್ ವಿತರಿಸಲಾಗುತ್ತದೆ. ಕಳೆದ ವರ್ಷ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ31,782 ವಿದ್ಯಾರ್ಥಿಗಳಿಗೆ ಈ ಬಾರಿ 1.5 ಲಕ್ಷ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಎಂದು ಹೇಳಿದರು.












Click it and Unblock the Notifications